Home / ಕವನ / ಕವಿತೆ / ಒಳಕಲ್ಲ ಪೂಜೀ ಹಾಡು

ಒಳಕಲ್ಲ ಪೂಜೀ ಹಾಡು

ಕಲ್ಲ ಪೂಜಿ ಮಾಡಲಕ ನನ್ನ್ಯಾರು ಕರಸ್ಯಾರ।
ಸಾಲಮ್ಯಾಳಿಗಿ ಮನಿಯವಳ|| ಸುವ್ವಿ ಸುವ್ವಿ ಸುವ್ವಾಲೆ ||೧||

ಸಾಲಮ್ಯಾಳಿಗಿ ಮನಿಯಽಳ ತಂಗೆವ್ವಾ|
ಕಲ್ಲ ಪೂಜಿಽಗಿ ಕರಸ್ಯಾಳ|| ಸು…. ||೨||

ಒಳ್ಳ ಪೂಜಿ ಮಾಡಲಿಕ್ಕ ನನ್ನ್ಯಾರು ಕರಸ್ಯಾರ|
ಸಾಲ ಮ್ಯಾಳಿಽಗಿ ಮನಿಯವಳ|| ಸು… ||೩||

ಸಾಲ ಮ್ಯಾಳಿಽಗಿ ಮನಿಯವಳು ತಂಗೆವ್ವಾ|
ಒಳ್ಳೆ ಪೂಜಿಽಗಿ ಕರಸ್ಯಾಳ || ಸು…. ||೪||

ಬಲ್ಲಬಲ್ಲವರಿಽಗಿ ಪಲ್ಲಕ್ಕಿ ಕಳವ್ಯಾಳ|
ಪಿಲ್ಲ್ಯಾದಗಾಲ ಮಗಳಿಽಗಿ || ಸು… ||೫||

ಪಿಲ್ಲ್ಯಾದಗಾಲ ಮಗಳೆ ಸಂಗಮ್ಮಗ|
ಪಲ್ಲಕ್ಕಿ ಕೊಟ್ಟು ಕರಸ್ಯಾರ || ಸು…. ||೬||

ನೆಂಟನೆಂಟಿರಿಽಗಿ ಮಂಟಪ್ಪ ಖಳವ್ಯಾರ|
ಮಂಟಿಗಿಗಾಲ ಮಗಳಿಗೆ|| ಸು… ||೭||

ಮಂಟಿಗಿಗಾಲ ಮಗಳ ಸಂಗಮ್ಮಗ|
ಒಂಟಿ ಸಿಂಗರಿಸಿ ಖಳವ್ಯಾರ|| ಸು… ||೮||

ಹಂದರ ಮ್ಯಾಲಿನ ಕಣಕಿ ನಂದಿ ಮೆಯ್ದಾನವೆಂದು|
ಬಿಚ್ಚಿ ಬಿಳಿ ಎಲಿ ಹೆರವ್ಯಾರ|| ಸು… ||೯||

ಬಿಚ್ಚಿ ಬಿಳಿ ಎಲಿಯ ಹೆರವ್ಯಾರ ತಮ್ಮಽಗ||
ಅಪ್ಪ ಮಾಡ್ಯಾನ ಮದುವಿಽಯ| ಸು… ||೧೦||

ಹಂದರ ಮ್ಯಾಲಿನ ಕಣಿಕಿ ನಂದಿ ಮೆಯ್ದಾವಂದ|
ಬಿಚ್ಚಿ ಬಿಳಿಯಽಲಿ ಹರವ್ಯಾರ|| ಸು… ||೧೧||

ಬಿಚ್ಚಿ ಬಿಳಿಯಽಲಿ ಹರವ್ಯಾರ ತಮ್ಮಽಗ|
ಅಣ್ಣ ಮಾಡ್ಯಾನ ಮದುವಿಽಯ|| ಸು… ||೧೨||
*****

ಲಗ್ನಕ್ಕೆ ಬೇಕಾಗುವ ಹಿಟ್ಟಕ್ಕಿಯ ಸಾಹಿತ್ಯವನ್ನು ಸಿದ್ಧಮಾಡುವ ಕಾಲದಲ್ಲಿ ಮೊದಲಿಗೆ ಒರಳು, ಬೀಸುವಕಲ್ಲು ಮುಂತಾದವುಗಳ ಪೂಜೆ ಮಾಡಿ ಕೆಲಸವನ್ನು ಪ್ರಾರಂಭಿಸುತ್ತಾರೆ. ಆ ಪ್ರಸಂಗದ ಹಾಡಿದು.

ಛಂದಸ್ಸು:- ತ್ರಿಪದಿಯಾಗಿದೆ.

ಶಬ್ದಪ್ರಯೋಗಗಳು:- ವಳ್ಳ=ಒರಳು. ಮಂಟಗಿ=ಕಾಲಲ್ಲಿ ಧರಿಸುವ ಒಂದು ಆಭರಣ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...