Home / ಕವನ / ಕವಿತೆ / ಒಳಕಲ್ಲ ಪೂಜೀ ಹಾಡು

ಒಳಕಲ್ಲ ಪೂಜೀ ಹಾಡು

ಕಲ್ಲ ಪೂಜಿ ಮಾಡಲಕ ನನ್ನ್ಯಾರು ಕರಸ್ಯಾರ।
ಸಾಲಮ್ಯಾಳಿಗಿ ಮನಿಯವಳ|| ಸುವ್ವಿ ಸುವ್ವಿ ಸುವ್ವಾಲೆ ||೧||

ಸಾಲಮ್ಯಾಳಿಗಿ ಮನಿಯಽಳ ತಂಗೆವ್ವಾ|
ಕಲ್ಲ ಪೂಜಿಽಗಿ ಕರಸ್ಯಾಳ|| ಸು…. ||೨||

ಒಳ್ಳ ಪೂಜಿ ಮಾಡಲಿಕ್ಕ ನನ್ನ್ಯಾರು ಕರಸ್ಯಾರ|
ಸಾಲ ಮ್ಯಾಳಿಽಗಿ ಮನಿಯವಳ|| ಸು… ||೩||

ಸಾಲ ಮ್ಯಾಳಿಽಗಿ ಮನಿಯವಳು ತಂಗೆವ್ವಾ|
ಒಳ್ಳೆ ಪೂಜಿಽಗಿ ಕರಸ್ಯಾಳ || ಸು…. ||೪||

ಬಲ್ಲಬಲ್ಲವರಿಽಗಿ ಪಲ್ಲಕ್ಕಿ ಕಳವ್ಯಾಳ|
ಪಿಲ್ಲ್ಯಾದಗಾಲ ಮಗಳಿಽಗಿ || ಸು… ||೫||

ಪಿಲ್ಲ್ಯಾದಗಾಲ ಮಗಳೆ ಸಂಗಮ್ಮಗ|
ಪಲ್ಲಕ್ಕಿ ಕೊಟ್ಟು ಕರಸ್ಯಾರ || ಸು…. ||೬||

ನೆಂಟನೆಂಟಿರಿಽಗಿ ಮಂಟಪ್ಪ ಖಳವ್ಯಾರ|
ಮಂಟಿಗಿಗಾಲ ಮಗಳಿಗೆ|| ಸು… ||೭||

ಮಂಟಿಗಿಗಾಲ ಮಗಳ ಸಂಗಮ್ಮಗ|
ಒಂಟಿ ಸಿಂಗರಿಸಿ ಖಳವ್ಯಾರ|| ಸು… ||೮||

ಹಂದರ ಮ್ಯಾಲಿನ ಕಣಕಿ ನಂದಿ ಮೆಯ್ದಾನವೆಂದು|
ಬಿಚ್ಚಿ ಬಿಳಿ ಎಲಿ ಹೆರವ್ಯಾರ|| ಸು… ||೯||

ಬಿಚ್ಚಿ ಬಿಳಿ ಎಲಿಯ ಹೆರವ್ಯಾರ ತಮ್ಮಽಗ||
ಅಪ್ಪ ಮಾಡ್ಯಾನ ಮದುವಿಽಯ| ಸು… ||೧೦||

ಹಂದರ ಮ್ಯಾಲಿನ ಕಣಿಕಿ ನಂದಿ ಮೆಯ್ದಾವಂದ|
ಬಿಚ್ಚಿ ಬಿಳಿಯಽಲಿ ಹರವ್ಯಾರ|| ಸು… ||೧೧||

ಬಿಚ್ಚಿ ಬಿಳಿಯಽಲಿ ಹರವ್ಯಾರ ತಮ್ಮಽಗ|
ಅಣ್ಣ ಮಾಡ್ಯಾನ ಮದುವಿಽಯ|| ಸು… ||೧೨||
*****

ಲಗ್ನಕ್ಕೆ ಬೇಕಾಗುವ ಹಿಟ್ಟಕ್ಕಿಯ ಸಾಹಿತ್ಯವನ್ನು ಸಿದ್ಧಮಾಡುವ ಕಾಲದಲ್ಲಿ ಮೊದಲಿಗೆ ಒರಳು, ಬೀಸುವಕಲ್ಲು ಮುಂತಾದವುಗಳ ಪೂಜೆ ಮಾಡಿ ಕೆಲಸವನ್ನು ಪ್ರಾರಂಭಿಸುತ್ತಾರೆ. ಆ ಪ್ರಸಂಗದ ಹಾಡಿದು.

ಛಂದಸ್ಸು:- ತ್ರಿಪದಿಯಾಗಿದೆ.

ಶಬ್ದಪ್ರಯೋಗಗಳು:- ವಳ್ಳ=ಒರಳು. ಮಂಟಗಿ=ಕಾಲಲ್ಲಿ ಧರಿಸುವ ಒಂದು ಆಭರಣ.

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...