Home / ಕವನ / ಕವಿತೆ / ಒಳಕಲ್ಲ ಪೂಜೀ ಹಾಡು

ಒಳಕಲ್ಲ ಪೂಜೀ ಹಾಡು

ಕಲ್ಲ ಪೂಜಿ ಮಾಡಲಕ ನನ್ನ್ಯಾರು ಕರಸ್ಯಾರ।
ಸಾಲಮ್ಯಾಳಿಗಿ ಮನಿಯವಳ|| ಸುವ್ವಿ ಸುವ್ವಿ ಸುವ್ವಾಲೆ ||೧||

ಸಾಲಮ್ಯಾಳಿಗಿ ಮನಿಯಽಳ ತಂಗೆವ್ವಾ|
ಕಲ್ಲ ಪೂಜಿಽಗಿ ಕರಸ್ಯಾಳ|| ಸು…. ||೨||

ಒಳ್ಳ ಪೂಜಿ ಮಾಡಲಿಕ್ಕ ನನ್ನ್ಯಾರು ಕರಸ್ಯಾರ|
ಸಾಲ ಮ್ಯಾಳಿಽಗಿ ಮನಿಯವಳ|| ಸು… ||೩||

ಸಾಲ ಮ್ಯಾಳಿಽಗಿ ಮನಿಯವಳು ತಂಗೆವ್ವಾ|
ಒಳ್ಳೆ ಪೂಜಿಽಗಿ ಕರಸ್ಯಾಳ || ಸು…. ||೪||

ಬಲ್ಲಬಲ್ಲವರಿಽಗಿ ಪಲ್ಲಕ್ಕಿ ಕಳವ್ಯಾಳ|
ಪಿಲ್ಲ್ಯಾದಗಾಲ ಮಗಳಿಽಗಿ || ಸು… ||೫||

ಪಿಲ್ಲ್ಯಾದಗಾಲ ಮಗಳೆ ಸಂಗಮ್ಮಗ|
ಪಲ್ಲಕ್ಕಿ ಕೊಟ್ಟು ಕರಸ್ಯಾರ || ಸು…. ||೬||

ನೆಂಟನೆಂಟಿರಿಽಗಿ ಮಂಟಪ್ಪ ಖಳವ್ಯಾರ|
ಮಂಟಿಗಿಗಾಲ ಮಗಳಿಗೆ|| ಸು… ||೭||

ಮಂಟಿಗಿಗಾಲ ಮಗಳ ಸಂಗಮ್ಮಗ|
ಒಂಟಿ ಸಿಂಗರಿಸಿ ಖಳವ್ಯಾರ|| ಸು… ||೮||

ಹಂದರ ಮ್ಯಾಲಿನ ಕಣಕಿ ನಂದಿ ಮೆಯ್ದಾನವೆಂದು|
ಬಿಚ್ಚಿ ಬಿಳಿ ಎಲಿ ಹೆರವ್ಯಾರ|| ಸು… ||೯||

ಬಿಚ್ಚಿ ಬಿಳಿ ಎಲಿಯ ಹೆರವ್ಯಾರ ತಮ್ಮಽಗ||
ಅಪ್ಪ ಮಾಡ್ಯಾನ ಮದುವಿಽಯ| ಸು… ||೧೦||

ಹಂದರ ಮ್ಯಾಲಿನ ಕಣಿಕಿ ನಂದಿ ಮೆಯ್ದಾವಂದ|
ಬಿಚ್ಚಿ ಬಿಳಿಯಽಲಿ ಹರವ್ಯಾರ|| ಸು… ||೧೧||

ಬಿಚ್ಚಿ ಬಿಳಿಯಽಲಿ ಹರವ್ಯಾರ ತಮ್ಮಽಗ|
ಅಣ್ಣ ಮಾಡ್ಯಾನ ಮದುವಿಽಯ|| ಸು… ||೧೨||
*****

ಲಗ್ನಕ್ಕೆ ಬೇಕಾಗುವ ಹಿಟ್ಟಕ್ಕಿಯ ಸಾಹಿತ್ಯವನ್ನು ಸಿದ್ಧಮಾಡುವ ಕಾಲದಲ್ಲಿ ಮೊದಲಿಗೆ ಒರಳು, ಬೀಸುವಕಲ್ಲು ಮುಂತಾದವುಗಳ ಪೂಜೆ ಮಾಡಿ ಕೆಲಸವನ್ನು ಪ್ರಾರಂಭಿಸುತ್ತಾರೆ. ಆ ಪ್ರಸಂಗದ ಹಾಡಿದು.

ಛಂದಸ್ಸು:- ತ್ರಿಪದಿಯಾಗಿದೆ.

ಶಬ್ದಪ್ರಯೋಗಗಳು:- ವಳ್ಳ=ಒರಳು. ಮಂಟಗಿ=ಕಾಲಲ್ಲಿ ಧರಿಸುವ ಒಂದು ಆಭರಣ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...