Home / ಕವನ / ಕವಿತೆ / ಬೆಂಗಳೂರಿನ ಕವಿತೆ

ಬೆಂಗಳೂರಿನ ಕವಿತೆ

ಮೊದಲು ಆಕಾಶವಿತ್ತು,
ಆಕಾಶಕ್ಕೆ ಕಣ್ಣಿತ್ತು, ಕಿವಿಯಿತ್ತು
ಆದರೆ ಕಾಲುಗಳಿರಲಿಲ್ಲ
ಬ್ರಹ್ಮಾಂಡದ ಮೇಲೆ
ತೇಲಾಡುತ್ತಿತ್ತು

ಹಸುಗೂಸು-ಅಂಬೆಗಾಲಿಕ್ಕಿ ನೀನು ಬಂದೆ
ಜಗವೆಲ್ಲ ಖಾಲಿ ಇತ್ತು ನೀನು ಕಂಡೆ
ನಿನ್ನ ಕಣ್ಣುಗಳಲ್ಲಿ ಆಶ್ಚರ್ಯವಿತ್ತು,
ಹೊಳಪಿತ್ತು, ನಗುವಿತ್ತು, ಅಳುವಿತ್ತು
ನೀನು ತಂದೆ:

ಮೌನಕ್ಕೆ ಜೀವ ತುಂಬುವ ಅರ್ಥ
ನಿನ್ನ ಬಗೆಗಣ್ಣಲ್ಲಿ ನೂರಾರು ನವಿಲು
ಎಲ್ಲಾ ನವಿಲುಗಳು ಬಿಟ್ಟು ಹೋಗಿವೆ ತಮ್ಮ ನವಿಲುಗರಿ
ನಿನ್ನ ಹಣೆ ಮೇಲೆ ನಿಲ್ಲವುದೆ ಗರಿಯ ಗುರಿ ?
ತಿಳಿಯಲಿಲ್ಲ

ನೀನು ಹೊರಟೆ
ನಿನ್ನ ನಗು ಅಳೆದಿದ್ದು ಊರವಿಸ್ತಾರ
ನೀನು ಈಗಲೂ ನಗುವೆ.  ಯಾವ ಆರ್ಥ ?

ನೀ ಕಟ್ಟಿದೂರು ಇದು ಬೆಂಗಳೂರು
ಇಲ್ಲಿ ಕಾಮನ ಬಿಲ್ಲುಗಳಿವೆ ನವಿರಾಗಿ ನೆಡುವ
ನೂರಾರು ಮುಳ್ಳುಗಳಿವೆ ಇಲ್ಲಿ
ನಾನು ಬಂದೆ. ಇಲ್ಲಿ ನಾನು ಕಂಡೆ.
ತಿಳಿಯಬಾರದ್ದನ್ನೂ ತಿಳಿಯಬೇಕಾದ್ದನ್ನೂ
ತಿಳಿದುಕೊಂಡೆ.
ಈಗ ಹೇಳಿಬಿಡುವೆ

ಉದ್ಯಾನಗಳ ನಗರಿ-ನಿನ್ನ ಪ್ರೀತಿಸುವೆ
ನನ್ನ ಗೆಳೆಯರನೆಲ್ಲ ಕೈ ಮಾಡಿ ಕರೆವೆ
ಬೆಂಗಳೂರಿಗೆ ಬಾ ಬೆಂಗಳೂರಿಗೆ ಬಾ
ಬೆಂಗಳೂರೇ-ಒಮ್ಮೆ
ನನ್ನ ಊರಿಗೆ ಬಾ

ನಿನ್ನ ಮೈ ಸುಡುವ ಸೂರ್ಯ
ತನ್ನ ಮ್ಮೆ ತೊಳೆವ ಊರು
ಅವನ ಅವಿತಿಟ್ಟುಕೊಳುವ
ನನ್ನೂರ ವಿಸ್ತಾರ ಕಡಲು-
ನನ್ನೂರ ಅತಿಸಹಜ ಚೆಲುವು-
ಬೆಂಗಳೂರಿಗೆ ಬಾ ಬೆಂಗಳೂರಿಗೆ ಬಾ
ಬೆಂಗಳೂರೇ-ಒಮ್ಮೆ
ನನ್ನ ಊರಿಗೆ ಬಾ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...