Home / ಕಥೆ / ಕಾದಂಬರಿ / ರಂಗಣ್ಣನ ಕನಸಿನ ದಿನಗಳು – ೩೦

ರಂಗಣ್ಣನ ಕನಸಿನ ದಿನಗಳು – ೩೦

ತಿಮ್ಮರಾಯಪ್ಪನ ಮೆಚ್ಚಿಕೆ

ರಂಗಣ್ಣ ಬೆಂಗಳೂರನ್ನು ತಲುಪಿದ್ದಾಯಿತು; ಮನೆಯನ್ನು ಸೇರಿದ್ದಾಯಿತು. ರೈಲ್ ಸ್ಟೇಷನ್ನಿಗೆ ಗೋಪಾಲನೂ ಶಂಕರಪ್ಪ ನೂ ಬಂದಿದ್ದುದರಿಂದ ಹೆಚ್ಚು ತೊಂದರೆಯನ್ನು ಪಡದೆ, ಹೆಚ್ಚು ಗಾಡಿಗಳನ್ನು ಮಾತ್ರ ಮಾಡಿಕೊಂಡು ಮನೆಯನ್ನು ಸೇರಿದನು. ಮಾರನೆಯ ದಿನ ಶಂಕರಪ್ಪನಿಗೆ ಬಹಳವಾಗಿ ಸಮಾಧಾನ ಮಾಡಬೇಕಾಯಿತು. ಅವನು, `ಸ್ವಾಮಿ! ನನ್ನ ಜೀವಮಾನದಲ್ಲಿ ಅಂಥ ಸುಖ ಸಂತೋಷದ ದಿನಗಳನ್ನು ಮತ್ತೆ ನಾನು ಕಾಣುವುದಿಲ್ಲ. ನಾನೂ ಹಲವು ಅಪರಾಧಗಳನ್ನು ಮಾಡಿದೆ. ತಾವು ಒಳ್ಳೆಯ ಮಾತಿನಲ್ಲಿಯೇ ಬುದ್ದಿ ಹೇಳಿ ತಿದ್ದಿ ನಡೆಸಿ ಕೂ೦ಡುಬ೦ದಿರಿ. ಊಟದ ಹೊತ್ತಿನಲ್ಲಿ ಪಕ್ಕದಲ್ಲಿಯೇ ಮಣೆಹಾಕಿಸಿ ಕೂಡಿಸಿಕೊಂಡು ಸ್ನೇಹಿತನಂತೆ ಉಪಚಾರ ಮಾಡುತ್ತ ಆದರಿಸಿದಿರಿ. ನಾನು ಸಲಿಗೆಯಿಂದ ಏನಾದರೂ ಹೆಚ್ಚು ಕಡಮೆ ನಡೆದುಕೊಂಡಿದ್ದರೆ ಮನ್ನಿಸಬೇಕು’ ಎಂದು ಹೇಳಿದನು. ರಂಗಣ್ಣ ಯಥೋಚಿತವಾಗಿ ಅವನಿಗೆ ಉತ್ತರ ಹೇಳಿ ಗೋಪಾಲನ ಕೈಗೆ ಐದು ರುಪಾಯಿಗಳನ್ನು ಇನಾಮಾಗಿ ಕೊಟ್ಟನು. ಅವರಿಬ್ಬರ ರೈಲು ಖರ್ಚಿಗೆ ಬೇರೆ ಹಣವನ್ನೂ ಕೊಟ್ಟು ಕಳಿಸಿದನು.

ಭಾನುವಾರ ಬೆಳಗ್ಗೆ ಹತ್ತು ಗಂಟೆಗೆ ತಿಮ್ಮರಾಯಪ್ಪ ತನ್ನ ಹೆಂಡತಿ ಮತ್ತು ಮಕ್ಕಳೊಡನೆ ರಂಗಣ್ಣನ ಮನೆಗೆ ಬಂದನು. ಆ ದಿನ ಅವರಿಗೆ ಭೋಜನ ರಂಗಣ್ಣನ ಮನೆಯಲ್ಲೇ ಏರ್ಪಾಟಾಗಿತ್ತು. ರಂಗಣ್ಣನು ಬಹಳ ಸಂತೋಷದಿಂದಲೂ ಸಂಭ್ರಮದಿಂದಲೂ ಅವರನ್ನೆಲ್ಲ ಸ್ವಾಗತಿಸಿದನು. ರಂಗಣ್ಣನ ಹೆಂಡತಿ ತಿಮ್ಮರಾಯಪ್ಪನ ಹೆಂಡತಿಯನ್ನು ಕರೆದುಕೊಂಡು ಒಳ ಕೊಟಡಿಗೆ ಹೋದಳು. ಸ್ವಲ್ಪ ಕಾಫಿ ಸಮಾರಾಧನೆ ಆಗಿ ಆ ಬಳಿಕ ಊಟಗಳಾಗಿ ಹಾಲಿನಲ್ಲಿ ಎರಡು ಸಂಸಾರದವರೂ ಸೇರಿ ತಾಂಬೂಲವನ್ನು ಹಾಕಿಕೊಳ್ಳುತ್ತಾ ಮಾತನಾಡತೊಡಗಿದರು. ಎಲ್ಲವೂ ಜನಾರ್ದನಪುರದಲ್ಲಿ ರ೦ಗಣ್ಣ ನಡೆಸಿದ ಇನ್ಸ್ಪೆಕ್ಟರ್ ಗಿರಿಯ ಮಾತುಗಳೇ ಆಗಿದ್ದುವು. ಮಧ್ಯೆ ಮಧ್ಯೆ ತಿಮ್ಮರಾಯಪ್ಪ ತಾನು ನಡೆಸಿದ ಇನ್ಸ್ಪೆಕ್ಟರ್ ಗಿರಿಯ ಕೆಲವು ಕಥೆಗಳನ್ನೂ ಹೇಳುತ್ತಿದ್ದನು. ರಂಗಣ್ಣನು ಉಗ್ರಪ್ಪನ ವಿಚಾರವನ್ನೂ, ಅವನ ವಾದವನ್ನೂ, ಅವನಲ್ಲಾದ ಪರಿವರ್ತನೆಯನ್ನೂ , ಶಾಂತವೀರ ಸ್ವಾಮಿಯಾಗಿ ತನಗೆ ಮಾಡಿದ ಆತಿಥ್ಯವನ್ನೂ, ಕಲ್ಲೇಗೌಡ ಮತ್ತು ಕರಿಯಪ್ಪ ನವರೊಡನೆ ಆದ ಶಾಂತಿ ಸಂಧಾನವನ್ನೂ-ಎಲ್ಲವನ್ನೂ ಹೇಳಿದಾಗ ತಿಮ್ಮರಾಯಪ್ಪನು,

`ಅಯ್ಯೋ ಶಿವನೇ! ಎಂತಹ ಮಾರ್ಪಾಟು!’ ಎಂದು ಉದ್ಗಾರ ತೆಗೆದನು.

‘ನೋಡಿದೆಯಾ ತಿಮ್ಮರಾಯಪ್ಪ! ನನ್ನ ಇನ್ ಸ್ಪೆಕ್ಟರ್‌ಗಿರಿ! ಮಧ್ಯೆ ಮಧ್ಯೆ ಮನಸ್ಸಿಗೆ ಬೇಜಾರಾಗಿ ಹಾಳು ಇನ್ ಸ್ಪೆಕ್ಟರ್ ಗಿರಿ ನನಗೆ ಸಾಕಪ್ಪ! ಎಂದು ನಿನಗೆ ನಾನು ಬರೆಯುತ್ತಿದ್ದೆ, ಆದರೂ ಕೊನೆಯಲ್ಲಿ ನನಗೆ ಜನಾರ್ದನಪುರವನ್ನು ಬಿಟ್ಟು ಬರುವುದಕ್ಕೆ ಬಹಳ ವ್ಯಥೆಯಾಯಿತು. ಒಟ್ಟಿನಲ್ಲಿ ನನ್ನ ದರ್ಬಾರು ನಿನಗೆ ಮೆಚ್ಚಿಕೆಯಾಯಿತೇ?’ ಎಂದು ರಂಗಣ್ಣ ಕೇಳಿದನು.

`ಶಿವನಾಣೆ ರಂಗಣ್ಣ! ಶಿವನಾಣೆ! ನಿನಗೆ ಪ್ರಮಾಣವಾಗಿ ಹೇಳುತ್ತೇನೆ. ನಾವುಗಳೂ ಹಲವರು ಇನ್ಸ್ಪೆಕ್ಟರ್ ಗಿರಿ ಮಾಡಿದೆವು. ಹತ್ತರಲ್ಲಿ ಹನ್ನೊಂದು! ಲೆಕ್ಕವೇ ಪಕ್ಕವೇ! ನಿನ್ನ ಇನ್ ಸ್ಪೆಕ್ಟರ್ ಗಿರಿ ಒ೦ದು ಮಹಾಕಾವ್ಯ! ಚಂದ್ರಾರ್ಕವಾಗಿ ನಿಂತು ಹೋಯಿತು! ನನಗೆ ಬಹಳ ಸಂತೋಷ ರಂಗಣ್ಣ !’ ಎಂದು ಹೇಳುತ್ತಾ ತಿಮ್ಮರಾಯಪ್ಪ ರಂಗಣ್ಣನನ್ನು ಆಲಿಂಗನ ಮಾಡಿಕೊಂಡನು.

`ದೇವರೇ! ನಾನು ನೂರತೊಂಬತ್ತು ಪೌಂಡು ತೂಕ ಇಲ್ಲ! ನಾನು ಅಪ್ಪಚ್ಚಿಯಾಗಿ ಹೋಗ್ತೇನೆ! ಬಿಡು, ತಿಮ್ಮರಾಯಪ್ಪ! ಅವರಿಬ್ಬರೂ ನೋಡಿ ನಗುತ್ತಿದಾರೆ! ನನ್ನ ಇನ್ ಸ್ಪೆಕ್ಟರ್‌ಗಿರಿ ಇರಲಿ, ನಿನ್ನ ಸ್ನೇಹ ನಿಜವಾಗಿಯೂ! ಒಂದು ಮಹಾಕಾವ್ಯ! ಅದು ಆಚಂದ್ರಾರ್ಕವಾಗಿ ನಿಂತಿರುತ್ತದೆ!’ ಎಂದು ರಂಗಣ್ಣ ನಗುತ್ತಾ ಹೇಳಿದನು.
*****
ಮುಗಿಯಿತು

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...