ಮೊಟ್ಮೊದಲು

ನನಗೂನೆ ಯೆಂಡಕ್ಕು ಬಲಬಲೆ ದೋಸ್ತಿ.
ಕುಡದ್ ಬುಟ್ಟಾಗ್ ಆಡೋದು ನಂಗ್ ಪೂರ ಜಾಸ್ತಿ.
ನಂಗ್ ಎಸರು ಯೋಳ್ತಾರೆ-ರ್ರರ್ರರ್ರರ್ರರ್ರತ್ನ.
ನಾನ್ ಆಡೋ ಪದಗೋಳು ಯೆಂಡದ್ ಪ್ರಯತ್ನ. ೧

ಮಾಬಾರ್‍ತ ಬರೆಯಾಕೆ ಯಾಸಂಗ್ ಇನಾಯ್ಕ
ಸಿಕ್ದಂಗೆ ನಂಗ್ ಒಬ್ಬ ಬೇವಾರ್‍ಸಿನಾಯ್ಕ
ಸಿಕ್ದೋನೆ, ನನ್ ಆಡ್ನ ಕೂಡಿಸ್ದ ಬರ್‍ದು.
ಯೇನ್ ಐತೊ ಯಾರ್ ಬಲ್ರು ಔಂಗ್ ಇರೊ ದರ್‍ದು! ೨

‘ಬರಕೊಂಡ್ರೆ ಬರಕೊಂಡ್ ಓಗ್, ನಿಂಗೂನೆ ಐಲು;
ಆದಷ್ಟೂ ಮಾಡಾನೆ ಸಾಯ ನಂಕೈಲು’
ಅಂದ್ಯಂಡ್ ಔನ್ ಬರದಿದ್ನ ಅಚ್ಗ್ ಆಕೋಕ್ ಒಪ್ಪಿ
ಕಳಿಸಿವ್ನಿ. ಬೋದೀರ ನನಗೇನ್ರ ತೊಪ್ಪಿ! ೩

ಅಕ್ಸಾರ ಗಿಕ್ಸಾರ ನನಗೇನೂ ಬರ್‍ದು.
(ದೊಡ್ ಚಾಕ್ರಿ ಬೇಕಂದ್ರೆ ಓದ್‍ಬೇಕು ದರ್‍ದು!)
ಪದಗೋಳು ಚಂದ್ ಇದ್ರ ಯೆಂಡಕ್ ಸಿಪಾರ್‍ಸಿ!
ಚಂದಾಗ್ ಇಲ್ದಿದ್ರನಕ ತೊಪ್ಗೆ ಬೇವಾರ್‍ಸಿ! ೪
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಹಿಳೆ ಮತ್ತು ಮಧ್ಯಕಾಲೀನ ಸಾಹಿತ್ಯ
Next post ಅಣ್ಣ ಎನ್ನ ಬಸವಣ್ಣ

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…