Home / ಕವನ / ಕವಿತೆ / ಮನ್ಸರ್ ಮಾತು

ಮನ್ಸರ್ ಮಾತು

ಯೋಳಾದ್ ಏನ್ರ ಯೋಳಾದ್ ಇದ್ರೆ,
ಝಟ್ ಪಟ್ನ್ ಏಳ್ ಮುಗೀಸು.
ಯಾವ್ದಕ್ ಇಕ್ಬೇಕ್ ಗೊತ್ತ್ ಮಾಡ್ಕೊಂಡಿ
ಆಮೇಕ್ ದೊಣ್ಣೆ ಬೀಸು. ೧

ಸುತ್ಕೊಂಡ್ ಸುತ್ಕೊಂಡ್ ಮಾತಾಡ್ತಿದ್ರೆ
ಕ್ಯೋಳಾಕ್ ಬಲ್ ಪಜೀತಿ.
ಬೈರ್‍ಗೆ ಕೊರದಂಗ್ ಕೊರಿತಾನಿದ್ರೆ
ಯಾವ್ ದೇವರ್‍ಗೆ ಪ್ರೀತಿ? ೨

ಕುಂಬಾರ್‍ಗೌಡನ್ ಚಕ್ರಕ್ಕೂನೆ
ಗಾಳ ನೋಡಿದ್ ಮೀನ್ಗು
ಸುತ್ಕೊಂಡ್ ಸುತ್ಕೊಂಡ್ ಓಗೋದ್ ಸಾಜ!
ಅದ್ಯಾಕ್ ನನ್ಗು ನಿನ್ಗು? ೩

ಕ್ಯೋಳೋವ್ರ್ ಇನ್ನಾ ಕ್ಯೋಳ್ಬೇಕೂಂತ
ಕುಂತ್ಕೊಂಡ್ ಇದ್ದಂಗೇನೆ
ಯೋಳೋದ್ನ್ ಎಸ್ಟೋ ಅಸ್ಟ್ರಲ್ ಏಳಿ
ಮನೆಗ್ ಓಗೋಗೆ ಮೇನೆ! ೪

ಮಾತ್ ಇರಬೇಕು ಮಿಂಚ್ ಒಳದಂಗೆ!
ಕೇಳ್ದೋರ್ ‘ಹ್ಙಾ’ ಅನಬೇಕು!
ಸೋನೆ ಯಿಡದ್ರೆ ಉಗದ್ ಅಂದಾರು:
‘ಮುಚ್ಕ್ಂಡ್ ಓಗೋ ಸಾಕು!’ ೫

ಮನ್ಸನ್ ಮಾತ್ ಅಂದ್ರ್ ಎಂಗ್ ಇರಬೇಕು-
ಕವಣೆ ಗುರಿ ಇದ್ದಂಗೆ!
ಕೇಳ್ದೋರ್ ಮನಸೀಗ್ ಲಗತ್ತ್ ಆಗಬೇಕ್
ಮಕ್ಕಳ್ ಮುತ್ತ್ ಇದ್ದಂಗೆ! ೬
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...