ರತ್ನನ್ ಪರ್‍ಪಂಚ

ಯೋಳ್ಕೊಳ್ಳಾಕ್ ಒಂದ್ ಊರು
ತಲೇಮ್ಯಾಗ್ ಒಂದ್ ಸೂರು
ಮಲಗಾಕೆ ಬೂಮ್ತಾಯಿ ಮಂಚ;
ಕೈ ಯಿಡದೋಳ್ ಪುಟ್ನಂಜಿ
ನೆಗನೆಗತ ಉಪ್ಗಂಜಿ
ಕೊಟ್ರಾಯ್ತು ರತ್ನನ್ ಪರ್‍ಪಂಚ! ೧

ಅಗಲೆಲ್ಲ ಬೆವರ್ ಅರ್‍ಸಿ
ತಂದದ್ರಲ್ ಒಸಿ ಮುರ್‍ಸಿ
ಸಂಜೇಲಿ ವುಳಿ ಯೆಂಡ ಕೊಂಚ
ಯೀರ್‍ತ ಮೈ ಝುಂ ಅಂದ್ರೆ
ವಾಸ್ನೆ ಘಂ ಘಂ ಅಂದ್ರೆ
ತುಂಭೋಯ್ತು ರತ್ನನ್ ಪರ್‍ಪಂಚ! ೨

ಯೇನೋ ಕುಸಿಯಾದಾಗ
ಮತ್ತ್ ಎಚಿ ವೋದಾಗ
ಅಂಗೇನೆ ಪರಪಂಚದ್ ಅಂಚ
ದಾಟ್ಕಂಡಿ ಆರಾಡ್ತ
ಕನ್ನಡದಲ್ ಪದವಾಡ್ತ
ಯಿಗ್ಗೋದು ರತ್ನನ್ ಪರ್‍ಪಂಚ! ೩

ದುಕ್ಕಿಲ್ಲ ದಾಲಿಲ್ಲ
ನಮಗ್ ಅದರಾಗ್ ಪಾಲಿಲ್ಲ
ನಾವ್ ಕಂಡಿಲ್ಲ್ ಆ ತಂಚ ವಂಚ
ನಮ್ಮಸ್ಟಕ್ ನಾವಾಗಿ
ಇದ್ದಿದ್ರಲ್ಲ್ ಆಯಾಗಿ
ಬಾಳೋದು ರತ್ನನ್ ಪರ್‍ಪಂಚ! ೪

‘ಬಡತನ ಗಿಡತನ
ಯೇನಿದ್ರೇನ್? ನಡತೇನ
ಚೆಂದಾಗ್ ಇಟ್ಕಳ್ಳಾದೆ ಅಚ್ಛ!’
ಅಂದ್ಕೊಂಡಿ ಸುಕವಾಗಿ
ಕಸ್ಟಕ್ ನೆಗಮೊಕವಾಗಿ
ನೆಗೆ ಯೋದೆ ರತ್ನನ್ ಪರ್‍ಪಂಚ! ೫

ದೇವ್ರ್ ಏನ್ರ ಕೊಡಲಣ್ಣ
ಕೊಡದಿದ್ರೆ ಬುಡಲಣ್ಣ
ನಾವೆಲ್ಲ ಔನೀಗೆ ಬಚ್ಛ!
ಔನ್ ಆಕಿದ್ ತಾಳ್ದಂಗೆ
ಕಣ್ ಮುಚ್ಕೊಂಡ್ ಯೋಳ್ದಂಗೆ
ಕುಣಿಯಾದೆ ರತ್ನನ್ ಪರ್‍ಪಂಚ! ೬
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಹಿಳಾ ಸಾಹಿತ್ಯದ ತಾತ್ವಿಕ ಆಯಾಮಗಳು
Next post ಅಪ್ಪ ಸತ್ತಾಗ!

ಸಣ್ಣ ಕತೆ

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…