ಗಿಳಿವಿಂಡು

ನನ್ನವೀ ನುಡಿಗಳಿರ! ಕಾಲದಲೆಗಳಲಿ
ನಿಮ್ಮನುರಿಹಣತೆಯಂತಿದೊ ತೇಲಬಿಡುವೆ,
ಅನುಗೊಳಲಿ ಜಗದುಸಿರು ನಿಮಗೆದುರುಗೊಳಲಿ,
ಆಳ್ವಿನಂ ಬಾಳ್ವುದೆಂಬುದೆ ನಿಮ್ಮ ಗೊಡವೆ.

ತನ್ನ ಮರಿಗಳೊಳೊಮ್ಮೆ ಕಟ್ಟೆರಕೆ ಮೂಡಿ
ದನಿತುಮಂ ಪೊರಮಡಿಸಿದುಲಿನಕ್ಕಿಯಮ್ಮ
ಸಂಜೆಯೊಳವಂ ಗೂಡುಗೊಳಿಪಂತೆ ಕೂಡಿ
ಸಿಡುವೆನಾನೀ ಹೊತ್ತಗೆಯೊಳೆನ್ನ ನಿಮ್ಮ.

ನನ್ನವೆಂದೆನೆ ನಿಮ್ಮನೆಲ್ಲಿಂದಲೆಲ್ಲಿ
ಗಯ್ದ ಲಂದಂದು ಹೊರಟಾ ನಡುವೆ ನಿಂತು
ನನ್ನೆದೆಯೊಳರೆಗಳಿಗೆ ಉಲಿದುಲಿಸಿದಲ್ಲಿ
ನನ್ನವಾದಿರೆ? ನಿಮ್ಮನೆನ್ನವೆನಲೆಂತು?

ತೋಟವಾವುದನೊ ತಮ್ಮನುಪಥದಿ ಕಂಡು
ಕ್ಷಣಮೆರಗಲಾ ತೋಟದಹುದೆ ಗಿಳಿವಿಂಡು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ಥಾನಮಾನ ಮತ್ತು ಸ್ತ್ರೀ ಸಾಮರ್ಥ್ಯ
Next post ಮನ ಮಂಥನ ಸಿರಿ – ೩೩

ಸಣ್ಣ ಕತೆ

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…