Home / ಕವನ / ಕವಿತೆ / ಶ್ರೀ’ಯವರನ್ನು ನೆನೆದು

ಶ್ರೀ’ಯವರನ್ನು ನೆನೆದು

ಬೆಳ್ಳೂರು ಮೈಲಾರ ಶ್ರೀಕಂಠನಡಿದೆಗೆದು
ಸಾಲ್ಗುಮೀ ತಿರೆಯಲ್ಲಿ ಪಾಡಿದುದು ನೋಡಿದುದು
ಇಂದ್ರಸಭೆಯೋಳು ನಮ್ಮ ತಾಯ ಕೀರ್ತಿಯ ಹಾಡಿ
ಕನ್ನಡ ಧ್ವಜಕೀರ್ತಿಯಲ್ಲಿ ನರ್ತನ ಮಾಡಿ
ಸಾಹಿತ್ಯ ಸೊಬಗುಗಳನೆಲ್ಲರ್ಗೆ ತೋರುವೊಡೆ
ಎಲ್ಲರೊಳು ತಾ ಹೊಕ್ಕ ಹೃದಯದಲಿ ನಲಿದಾಡೆ.

ಪಂಪ ರನ್ನರ ಬಸವ ಲಕ್ಷ್ಮೀಶ ಹರಿಹರರ
ವರಕುಮಾರವ್ಯಾಸ ರಾಘವ ಪುರಂದರರ
ಕವಿಗಳಾಡುಂಬೊಲದಿ ಸರಸ ಗೋಷ್ಠಿಯೊಳೊಲಿದು
ಕನ್ನಡದ ಕರ್ಚಾಳುಗಳ ನಡೆಸಿ ತಾ ನಲಿದು
ಕನ್ನಡಾಂಬೆಯ ಪೆರ್ಮೆ ಕೂರಮೆಗಳ ನೆನೆನೆನೆದು
ನುಡಿವನದಕೋ ನಮ್ಮ ಶ್ರೀ ಕವೀಂದ್ರಂ ನಿಂದು.

ನಲಿನಲಿದು ಸಾಹಿತ್ಯದಧಿದೇವಿ ದರ್ಶನದಿ
ಒಲಿಸಿ ನಲ್ನುಡಿಯಿಂದ ತಾಯ ತೊಡೆಯಲಿ ಮುದದಿ
ಮಂಡಿಸುತಲೊರೆಸಿರ್ದ ತಾಯ್ಕೊರಗ ಮರೆಸಿರ್ದ
ವೆತೆಗಳಂ ತೊರೆಯಿಸುತ ಮತ್ತೊಮ್ಮೆ ನಗಿಸಿರ್ದ
ಕನ್ನಡದ ತಾಯ್ನೋಟಮನ್ನೊರೆದು ಸೊಗಸಿರ್ದ
ಬಿಜಗೆಯ್ಸಿ ದೇವಿಯಂ ಕೀರ್ತಿಯನ್ ಪಾಡಿದನ್.

ತನ್ನಂತೆ ತರುಣರಂ ಕಿರಿಯರಂ ಹಿರಿಯರಂ
ಕನ್ನಡದ ನುಡಿಸೇವೆಯಲಿ ನಡೆಸಿ ಅಣಿಯರಂ
ಧರ್ಮದಲಿ ಕರ್ಮದಲಿ ತ್ಯಾಗದಲಿ ಭೋಗದಲಿ
ತೋರಿಸಿದ ಕರ್ಣಾಟ ಕವಿತಿಲಕ ನಡೆಗಳಲಿ
ಅಗಲಿದ ಕಣ್ಣೀರ ಹೊಳೆಹರಿಸಿ ಮತಿ ಮರೆಸಿ
ನಮ್ಮೆಲ್ಲರೊಲವೊಯ್ದು ಮರೆಯಾದನತಿ ಸರಸಿ.

ಎಲ್ಲಿರಲಿ ಎಂತಿರಲಿ ಅವರ ನಡೆನುಡಿ ಮನವು
ಗಾಂಭೀರ್ಯ ರಸಜೀವ ನಗು ಹಾಸ್ಯ ಚೆಲುವೊಲವು
ಭೀಷ್ಮರಾ ಹಿರಿತನವ ತಳೆದು ತಾ ಹೂಳೆದಿಹರು.
ಸರ್ವರನು ನಡಯಿಸುತ ಮಾರ್ಗದಲಿ-ಮೆರೆದಿಹರು.
ಕರ್ಣಾಟ ಕಣ್ನೋಟ ತಣ್ನೋಟಮಂ ಕಂಡು
ಶ್ರೀಯೋಲಿಯೆ ಎಚ್ಚರಾದುದು ನಮಗೆ ಸವಿಯುಂಡು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...