ಶ್ರೀ’ಯವರನ್ನು ನೆನೆದು

ಬೆಳ್ಳೂರು ಮೈಲಾರ ಶ್ರೀಕಂಠನಡಿದೆಗೆದು
ಸಾಲ್ಗುಮೀ ತಿರೆಯಲ್ಲಿ ಪಾಡಿದುದು ನೋಡಿದುದು
ಇಂದ್ರಸಭೆಯೋಳು ನಮ್ಮ ತಾಯ ಕೀರ್ತಿಯ ಹಾಡಿ
ಕನ್ನಡ ಧ್ವಜಕೀರ್ತಿಯಲ್ಲಿ ನರ್ತನ ಮಾಡಿ
ಸಾಹಿತ್ಯ ಸೊಬಗುಗಳನೆಲ್ಲರ್ಗೆ ತೋರುವೊಡೆ
ಎಲ್ಲರೊಳು ತಾ ಹೊಕ್ಕ ಹೃದಯದಲಿ ನಲಿದಾಡೆ.

ಪಂಪ ರನ್ನರ ಬಸವ ಲಕ್ಷ್ಮೀಶ ಹರಿಹರರ
ವರಕುಮಾರವ್ಯಾಸ ರಾಘವ ಪುರಂದರರ
ಕವಿಗಳಾಡುಂಬೊಲದಿ ಸರಸ ಗೋಷ್ಠಿಯೊಳೊಲಿದು
ಕನ್ನಡದ ಕರ್ಚಾಳುಗಳ ನಡೆಸಿ ತಾ ನಲಿದು
ಕನ್ನಡಾಂಬೆಯ ಪೆರ್ಮೆ ಕೂರಮೆಗಳ ನೆನೆನೆನೆದು
ನುಡಿವನದಕೋ ನಮ್ಮ ಶ್ರೀ ಕವೀಂದ್ರಂ ನಿಂದು.

ನಲಿನಲಿದು ಸಾಹಿತ್ಯದಧಿದೇವಿ ದರ್ಶನದಿ
ಒಲಿಸಿ ನಲ್ನುಡಿಯಿಂದ ತಾಯ ತೊಡೆಯಲಿ ಮುದದಿ
ಮಂಡಿಸುತಲೊರೆಸಿರ್ದ ತಾಯ್ಕೊರಗ ಮರೆಸಿರ್ದ
ವೆತೆಗಳಂ ತೊರೆಯಿಸುತ ಮತ್ತೊಮ್ಮೆ ನಗಿಸಿರ್ದ
ಕನ್ನಡದ ತಾಯ್ನೋಟಮನ್ನೊರೆದು ಸೊಗಸಿರ್ದ
ಬಿಜಗೆಯ್ಸಿ ದೇವಿಯಂ ಕೀರ್ತಿಯನ್ ಪಾಡಿದನ್.

ತನ್ನಂತೆ ತರುಣರಂ ಕಿರಿಯರಂ ಹಿರಿಯರಂ
ಕನ್ನಡದ ನುಡಿಸೇವೆಯಲಿ ನಡೆಸಿ ಅಣಿಯರಂ
ಧರ್ಮದಲಿ ಕರ್ಮದಲಿ ತ್ಯಾಗದಲಿ ಭೋಗದಲಿ
ತೋರಿಸಿದ ಕರ್ಣಾಟ ಕವಿತಿಲಕ ನಡೆಗಳಲಿ
ಅಗಲಿದ ಕಣ್ಣೀರ ಹೊಳೆಹರಿಸಿ ಮತಿ ಮರೆಸಿ
ನಮ್ಮೆಲ್ಲರೊಲವೊಯ್ದು ಮರೆಯಾದನತಿ ಸರಸಿ.

ಎಲ್ಲಿರಲಿ ಎಂತಿರಲಿ ಅವರ ನಡೆನುಡಿ ಮನವು
ಗಾಂಭೀರ್ಯ ರಸಜೀವ ನಗು ಹಾಸ್ಯ ಚೆಲುವೊಲವು
ಭೀಷ್ಮರಾ ಹಿರಿತನವ ತಳೆದು ತಾ ಹೂಳೆದಿಹರು.
ಸರ್ವರನು ನಡಯಿಸುತ ಮಾರ್ಗದಲಿ-ಮೆರೆದಿಹರು.
ಕರ್ಣಾಟ ಕಣ್ನೋಟ ತಣ್ನೋಟಮಂ ಕಂಡು
ಶ್ರೀಯೋಲಿಯೆ ಎಚ್ಚರಾದುದು ನಮಗೆ ಸವಿಯುಂಡು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂದರ್ಶನ
Next post ವೃಷಭಾವತಿ

ಸಣ್ಣ ಕತೆ

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…