Home / ಕವನ / ಕವಿತೆ / ಶ್ರೀ’ಯವರನ್ನು ನೆನೆದು

ಶ್ರೀ’ಯವರನ್ನು ನೆನೆದು

ಬೆಳ್ಳೂರು ಮೈಲಾರ ಶ್ರೀಕಂಠನಡಿದೆಗೆದು
ಸಾಲ್ಗುಮೀ ತಿರೆಯಲ್ಲಿ ಪಾಡಿದುದು ನೋಡಿದುದು
ಇಂದ್ರಸಭೆಯೋಳು ನಮ್ಮ ತಾಯ ಕೀರ್ತಿಯ ಹಾಡಿ
ಕನ್ನಡ ಧ್ವಜಕೀರ್ತಿಯಲ್ಲಿ ನರ್ತನ ಮಾಡಿ
ಸಾಹಿತ್ಯ ಸೊಬಗುಗಳನೆಲ್ಲರ್ಗೆ ತೋರುವೊಡೆ
ಎಲ್ಲರೊಳು ತಾ ಹೊಕ್ಕ ಹೃದಯದಲಿ ನಲಿದಾಡೆ.

ಪಂಪ ರನ್ನರ ಬಸವ ಲಕ್ಷ್ಮೀಶ ಹರಿಹರರ
ವರಕುಮಾರವ್ಯಾಸ ರಾಘವ ಪುರಂದರರ
ಕವಿಗಳಾಡುಂಬೊಲದಿ ಸರಸ ಗೋಷ್ಠಿಯೊಳೊಲಿದು
ಕನ್ನಡದ ಕರ್ಚಾಳುಗಳ ನಡೆಸಿ ತಾ ನಲಿದು
ಕನ್ನಡಾಂಬೆಯ ಪೆರ್ಮೆ ಕೂರಮೆಗಳ ನೆನೆನೆನೆದು
ನುಡಿವನದಕೋ ನಮ್ಮ ಶ್ರೀ ಕವೀಂದ್ರಂ ನಿಂದು.

ನಲಿನಲಿದು ಸಾಹಿತ್ಯದಧಿದೇವಿ ದರ್ಶನದಿ
ಒಲಿಸಿ ನಲ್ನುಡಿಯಿಂದ ತಾಯ ತೊಡೆಯಲಿ ಮುದದಿ
ಮಂಡಿಸುತಲೊರೆಸಿರ್ದ ತಾಯ್ಕೊರಗ ಮರೆಸಿರ್ದ
ವೆತೆಗಳಂ ತೊರೆಯಿಸುತ ಮತ್ತೊಮ್ಮೆ ನಗಿಸಿರ್ದ
ಕನ್ನಡದ ತಾಯ್ನೋಟಮನ್ನೊರೆದು ಸೊಗಸಿರ್ದ
ಬಿಜಗೆಯ್ಸಿ ದೇವಿಯಂ ಕೀರ್ತಿಯನ್ ಪಾಡಿದನ್.

ತನ್ನಂತೆ ತರುಣರಂ ಕಿರಿಯರಂ ಹಿರಿಯರಂ
ಕನ್ನಡದ ನುಡಿಸೇವೆಯಲಿ ನಡೆಸಿ ಅಣಿಯರಂ
ಧರ್ಮದಲಿ ಕರ್ಮದಲಿ ತ್ಯಾಗದಲಿ ಭೋಗದಲಿ
ತೋರಿಸಿದ ಕರ್ಣಾಟ ಕವಿತಿಲಕ ನಡೆಗಳಲಿ
ಅಗಲಿದ ಕಣ್ಣೀರ ಹೊಳೆಹರಿಸಿ ಮತಿ ಮರೆಸಿ
ನಮ್ಮೆಲ್ಲರೊಲವೊಯ್ದು ಮರೆಯಾದನತಿ ಸರಸಿ.

ಎಲ್ಲಿರಲಿ ಎಂತಿರಲಿ ಅವರ ನಡೆನುಡಿ ಮನವು
ಗಾಂಭೀರ್ಯ ರಸಜೀವ ನಗು ಹಾಸ್ಯ ಚೆಲುವೊಲವು
ಭೀಷ್ಮರಾ ಹಿರಿತನವ ತಳೆದು ತಾ ಹೂಳೆದಿಹರು.
ಸರ್ವರನು ನಡಯಿಸುತ ಮಾರ್ಗದಲಿ-ಮೆರೆದಿಹರು.
ಕರ್ಣಾಟ ಕಣ್ನೋಟ ತಣ್ನೋಟಮಂ ಕಂಡು
ಶ್ರೀಯೋಲಿಯೆ ಎಚ್ಚರಾದುದು ನಮಗೆ ಸವಿಯುಂಡು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...