Home / ಕವನ / ಕವಿತೆ / ಶ್ರೀ’ಯವರನ್ನು ನೆನೆದು

ಶ್ರೀ’ಯವರನ್ನು ನೆನೆದು

ಬೆಳ್ಳೂರು ಮೈಲಾರ ಶ್ರೀಕಂಠನಡಿದೆಗೆದು
ಸಾಲ್ಗುಮೀ ತಿರೆಯಲ್ಲಿ ಪಾಡಿದುದು ನೋಡಿದುದು
ಇಂದ್ರಸಭೆಯೋಳು ನಮ್ಮ ತಾಯ ಕೀರ್ತಿಯ ಹಾಡಿ
ಕನ್ನಡ ಧ್ವಜಕೀರ್ತಿಯಲ್ಲಿ ನರ್ತನ ಮಾಡಿ
ಸಾಹಿತ್ಯ ಸೊಬಗುಗಳನೆಲ್ಲರ್ಗೆ ತೋರುವೊಡೆ
ಎಲ್ಲರೊಳು ತಾ ಹೊಕ್ಕ ಹೃದಯದಲಿ ನಲಿದಾಡೆ.

ಪಂಪ ರನ್ನರ ಬಸವ ಲಕ್ಷ್ಮೀಶ ಹರಿಹರರ
ವರಕುಮಾರವ್ಯಾಸ ರಾಘವ ಪುರಂದರರ
ಕವಿಗಳಾಡುಂಬೊಲದಿ ಸರಸ ಗೋಷ್ಠಿಯೊಳೊಲಿದು
ಕನ್ನಡದ ಕರ್ಚಾಳುಗಳ ನಡೆಸಿ ತಾ ನಲಿದು
ಕನ್ನಡಾಂಬೆಯ ಪೆರ್ಮೆ ಕೂರಮೆಗಳ ನೆನೆನೆನೆದು
ನುಡಿವನದಕೋ ನಮ್ಮ ಶ್ರೀ ಕವೀಂದ್ರಂ ನಿಂದು.

ನಲಿನಲಿದು ಸಾಹಿತ್ಯದಧಿದೇವಿ ದರ್ಶನದಿ
ಒಲಿಸಿ ನಲ್ನುಡಿಯಿಂದ ತಾಯ ತೊಡೆಯಲಿ ಮುದದಿ
ಮಂಡಿಸುತಲೊರೆಸಿರ್ದ ತಾಯ್ಕೊರಗ ಮರೆಸಿರ್ದ
ವೆತೆಗಳಂ ತೊರೆಯಿಸುತ ಮತ್ತೊಮ್ಮೆ ನಗಿಸಿರ್ದ
ಕನ್ನಡದ ತಾಯ್ನೋಟಮನ್ನೊರೆದು ಸೊಗಸಿರ್ದ
ಬಿಜಗೆಯ್ಸಿ ದೇವಿಯಂ ಕೀರ್ತಿಯನ್ ಪಾಡಿದನ್.

ತನ್ನಂತೆ ತರುಣರಂ ಕಿರಿಯರಂ ಹಿರಿಯರಂ
ಕನ್ನಡದ ನುಡಿಸೇವೆಯಲಿ ನಡೆಸಿ ಅಣಿಯರಂ
ಧರ್ಮದಲಿ ಕರ್ಮದಲಿ ತ್ಯಾಗದಲಿ ಭೋಗದಲಿ
ತೋರಿಸಿದ ಕರ್ಣಾಟ ಕವಿತಿಲಕ ನಡೆಗಳಲಿ
ಅಗಲಿದ ಕಣ್ಣೀರ ಹೊಳೆಹರಿಸಿ ಮತಿ ಮರೆಸಿ
ನಮ್ಮೆಲ್ಲರೊಲವೊಯ್ದು ಮರೆಯಾದನತಿ ಸರಸಿ.

ಎಲ್ಲಿರಲಿ ಎಂತಿರಲಿ ಅವರ ನಡೆನುಡಿ ಮನವು
ಗಾಂಭೀರ್ಯ ರಸಜೀವ ನಗು ಹಾಸ್ಯ ಚೆಲುವೊಲವು
ಭೀಷ್ಮರಾ ಹಿರಿತನವ ತಳೆದು ತಾ ಹೂಳೆದಿಹರು.
ಸರ್ವರನು ನಡಯಿಸುತ ಮಾರ್ಗದಲಿ-ಮೆರೆದಿಹರು.
ಕರ್ಣಾಟ ಕಣ್ನೋಟ ತಣ್ನೋಟಮಂ ಕಂಡು
ಶ್ರೀಯೋಲಿಯೆ ಎಚ್ಚರಾದುದು ನಮಗೆ ಸವಿಯುಂಡು.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...