ತಿಮ್ಮ

ತಿಮ್ಮ

ಬೆಂಗಳೂರಿನಲ್ಲಿ ಒಂದು ಮಾವಿನ ತೋಪು. ಆ ತೋಪಿನಲ್ಲಿ ಒಂದು ಹಿಂಡು ಕಪಿಗಳು ಇದ್ದವು. ಅವು ತಮ್ಮ ಮರಿಗಳನ್ನೆಲ್ಲಾ ಕಟ್ಟಿಕೊಂಡು ದಿನವೂ ತಿಂಡಿಗಾಗಿ ಬೀದಿಬೀದಿ ಆಲೆಯುತ್ತಿದ್ದವು. ತಾಯಿತಂದೆ ಕಪಿಗಳು, ಮರಿಗಳನ್ನು ಕರೆದು “ಜೊಕೇ! ಹಿಂಡು ಬಿಟ್ಟು ಹೋದೀರಿ!” ಎಂದು ಆಗಾಗ ಹೇಳುತ್ತಿದ್ದವು.

ಆ ಹಿಂಡಿನಲ್ಲಿ ತಿಮ್ಮ ಎಂಬ ಒಂದು ಮರಿ ಇತ್ತು. ಆದು ಒಂದು ದಿನ “ಯಾವಾ ಗಲೂ ಇವರ ಜೊತೆಯಲ್ಲಿಯೇ ಏಕೆ ಹೋಗಬೇಕು? ಇಂದು ನಾನೇ ಬೇರೆ ಹೋಗುತ್ತೇನೆ” ಎಂದುಕೊಂಡಿತು. ಅಂದು ಹಾಗೆಯೇ, ಅವರೆಲ್ಲರೂ ಹೋಗುತ್ತಿದ್ದ ದಾರಿಯನ್ನು ಬಿಟ್ಟು, ಮತ್ತೊಂದು ಹಾದಿಯನ್ನು ಹಿಡಿಯಿತು. ಎಂದಿನಂತೆ ಮರಿಗಳೆಲ್ಲ ಜತೆಯಲ್ಲಿ ಬರುತ್ತಿವೆ ಎಂದು ದೊಡ್ಡ ಕಪಿಗಳೂ ಮುಂದು ಮುಂದಕ್ಕೆ ಹೋದವು. ತಿಮ್ಮನು ಹಿಂದೆ ಉಳಿದುದು ಯಾರಿಗೂ ತಿಳಿಯದು.

ತಿಮ್ಮನು ಕೊಂಚದೂರ ಹೋಗುವುದರೊಳಗಾಗಿ, ಒಂದು ನಾಯಿ ಬಂತು; ತಿಮ್ಮನನ್ನು ಕಂಡು ಬೊಗಳಿತು. ಅದನ್ನು ಕಂಡು ಕೆಲವರು ತುಂಟ ಹುಡುಗರು ಬಂದರು. ತಿಮ್ಮನನ್ನು ಬೇಕಾದಷ್ಟು ಕೀಟಲೆ ಮಾಡಿದರು. ಕೆಲವರು ಮುಖವನ್ನು ಉದ್ದಮಾಡಿ, “ಗುರ್‌ಗುರ್‌” ಎಂದು ಅಣಕಿಸಿದರು. ಮತ್ತೆ ಕೆಲವರು ಕೈಚಪ್ಪಾಳೆಯಿಟ್ಟು “ಕೋತೀ ತಿಮ್ಮಾ! ಲೇ! ಕೋತೀ ತಿಮ್ಮಾ!” ಎಂದು ಅದನ್ನು ರೇಗಿಸಿದರು. ಇನ್ನು ಕೆಲವರು ಕಲ್ಲಿನಿಂದ ಹೊಡೆದರು. ಇದನ್ನೆಲ್ಲಾ ಕಂಡು ತಿಮ್ಮನಿಗೆ ಬಲು ದಿಗಿಲಾಯಿತು. ಅರಿಚಿಕೊಂಡಿತು; ಅಲ್ಲಿಂದ ತಪ್ಪಿಸಿಕೊಂಡು ಹೋಗುವುದು ಹೇಗೋ ತಿಳಿಯದೆ, ಸುಮ್ಮನೆ “ಕಿಚಿಕಿಚಿ” ಎಂದು ಒರಲಿಕೊಂಡಿತು.

ಅಷ್ಟರಲ್ಲಿ ಅದರ ಅರಚಾಟವು ದೊಡ್ಡ ಕಪಿಗಳಿಗೆ ಕೇಳಿಸಿತು. ಕೂಡಲೇ ಹಿಂಡಿಗೆ ಹಿಂಡೇ ತಿಮ್ಮನಿರುವ ತಾವಿಗೆ ಓಡಿಬಂದವು. ಅವು ಬರುತ್ತಲೇ ಹುಡುಗರೂ ಓಡಿಹೋದರು. ನಾಯಿಯೂ ಓಡಿಹೋಯಿತು.

ಆಗ ಅದಕ್ಕೆ ಬುದ್ಧಿ ಬಂತು. ತಿಮ್ಮನು ಅಲ್ಲಿಂದ ಮುಂದೆ ಎಂದೂ ಅವಿಧೇಯನಾಗಿ ನಡೆಯಲಿಲ್ಲ. ಹಿಂಡಿನಲ್ಲಿ ಯಾರಾದರೂ ತಾಯಿತಂದೆಗಳು ಹೇಳಿದ ಮಾತು ಕೇಳದೆ ಹೋದರೆ, ತಿಮ್ಮನು ಅವರಿಗೆ ತನ್ನ ಕಥೆಯನ್ನು ಹೇಳಿ ದಾರಿಗೆ ತರುತ್ತಿತ್ತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಸಾಹತು ಸಾಮ್ರಾಜ್ಯ
Next post ನನ್ನೊಡನೆ ಗೆಳೆಯನನೂ ಹಿಂಡಿ ನನ್ನೆದೆಯನ್ನ

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

cheap jordans|wholesale air max|wholesale jordans|wholesale jewelry|wholesale jerseys