ತಿಮ್ಮ

ಬೆಂಗಳೂರಿನಲ್ಲಿ ಒಂದು ಮಾವಿನ ತೋಪು. ಆ ತೋಪಿನಲ್ಲಿ ಒಂದು ಹಿಂಡು ಕಪಿಗಳು ಇದ್ದವು. ಅವು ತಮ್ಮ ಮರಿಗಳನ್ನೆಲ್ಲಾ ಕಟ್ಟಿಕೊಂಡು ದಿನವೂ ತಿಂಡಿಗಾಗಿ ಬೀದಿಬೀದಿ ಆಲೆಯುತ್ತಿದ್ದವು. ತಾಯಿತಂದೆ ಕಪಿಗಳು, ಮರಿಗಳನ್ನು ಕರೆದು “ಜೊಕೇ! ಹಿಂಡು ಬಿಟ್ಟು ಹೋದೀರಿ!” ಎಂದು ಆಗಾಗ ಹೇಳುತ್ತಿದ್ದವು.

ಆ ಹಿಂಡಿನಲ್ಲಿ ತಿಮ್ಮ ಎಂಬ ಒಂದು ಮರಿ ಇತ್ತು. ಆದು ಒಂದು ದಿನ “ಯಾವಾ ಗಲೂ ಇವರ ಜೊತೆಯಲ್ಲಿಯೇ ಏಕೆ ಹೋಗಬೇಕು? ಇಂದು ನಾನೇ ಬೇರೆ ಹೋಗುತ್ತೇನೆ” ಎಂದುಕೊಂಡಿತು. ಅಂದು ಹಾಗೆಯೇ, ಅವರೆಲ್ಲರೂ ಹೋಗುತ್ತಿದ್ದ ದಾರಿಯನ್ನು ಬಿಟ್ಟು, ಮತ್ತೊಂದು ಹಾದಿಯನ್ನು ಹಿಡಿಯಿತು. ಎಂದಿನಂತೆ ಮರಿಗಳೆಲ್ಲ ಜತೆಯಲ್ಲಿ ಬರುತ್ತಿವೆ ಎಂದು ದೊಡ್ಡ ಕಪಿಗಳೂ ಮುಂದು ಮುಂದಕ್ಕೆ ಹೋದವು. ತಿಮ್ಮನು ಹಿಂದೆ ಉಳಿದುದು ಯಾರಿಗೂ ತಿಳಿಯದು.

ತಿಮ್ಮನು ಕೊಂಚದೂರ ಹೋಗುವುದರೊಳಗಾಗಿ, ಒಂದು ನಾಯಿ ಬಂತು; ತಿಮ್ಮನನ್ನು ಕಂಡು ಬೊಗಳಿತು. ಅದನ್ನು ಕಂಡು ಕೆಲವರು ತುಂಟ ಹುಡುಗರು ಬಂದರು. ತಿಮ್ಮನನ್ನು ಬೇಕಾದಷ್ಟು ಕೀಟಲೆ ಮಾಡಿದರು. ಕೆಲವರು ಮುಖವನ್ನು ಉದ್ದಮಾಡಿ, “ಗುರ್‌ಗುರ್‌” ಎಂದು ಅಣಕಿಸಿದರು. ಮತ್ತೆ ಕೆಲವರು ಕೈಚಪ್ಪಾಳೆಯಿಟ್ಟು “ಕೋತೀ ತಿಮ್ಮಾ! ಲೇ! ಕೋತೀ ತಿಮ್ಮಾ!” ಎಂದು ಅದನ್ನು ರೇಗಿಸಿದರು. ಇನ್ನು ಕೆಲವರು ಕಲ್ಲಿನಿಂದ ಹೊಡೆದರು. ಇದನ್ನೆಲ್ಲಾ ಕಂಡು ತಿಮ್ಮನಿಗೆ ಬಲು ದಿಗಿಲಾಯಿತು. ಅರಿಚಿಕೊಂಡಿತು; ಅಲ್ಲಿಂದ ತಪ್ಪಿಸಿಕೊಂಡು ಹೋಗುವುದು ಹೇಗೋ ತಿಳಿಯದೆ, ಸುಮ್ಮನೆ “ಕಿಚಿಕಿಚಿ” ಎಂದು ಒರಲಿಕೊಂಡಿತು.

ಅಷ್ಟರಲ್ಲಿ ಅದರ ಅರಚಾಟವು ದೊಡ್ಡ ಕಪಿಗಳಿಗೆ ಕೇಳಿಸಿತು. ಕೂಡಲೇ ಹಿಂಡಿಗೆ ಹಿಂಡೇ ತಿಮ್ಮನಿರುವ ತಾವಿಗೆ ಓಡಿಬಂದವು. ಅವು ಬರುತ್ತಲೇ ಹುಡುಗರೂ ಓಡಿಹೋದರು. ನಾಯಿಯೂ ಓಡಿಹೋಯಿತು.

ಆಗ ಅದಕ್ಕೆ ಬುದ್ಧಿ ಬಂತು. ತಿಮ್ಮನು ಅಲ್ಲಿಂದ ಮುಂದೆ ಎಂದೂ ಅವಿಧೇಯನಾಗಿ ನಡೆಯಲಿಲ್ಲ. ಹಿಂಡಿನಲ್ಲಿ ಯಾರಾದರೂ ತಾಯಿತಂದೆಗಳು ಹೇಳಿದ ಮಾತು ಕೇಳದೆ ಹೋದರೆ, ತಿಮ್ಮನು ಅವರಿಗೆ ತನ್ನ ಕಥೆಯನ್ನು ಹೇಳಿ ದಾರಿಗೆ ತರುತ್ತಿತ್ತು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...