ತಿಮ್ಮ

ಬೆಂಗಳೂರಿನಲ್ಲಿ ಒಂದು ಮಾವಿನ ತೋಪು. ಆ ತೋಪಿನಲ್ಲಿ ಒಂದು ಹಿಂಡು ಕಪಿಗಳು ಇದ್ದವು. ಅವು ತಮ್ಮ ಮರಿಗಳನ್ನೆಲ್ಲಾ ಕಟ್ಟಿಕೊಂಡು ದಿನವೂ ತಿಂಡಿಗಾಗಿ ಬೀದಿಬೀದಿ ಆಲೆಯುತ್ತಿದ್ದವು. ತಾಯಿತಂದೆ ಕಪಿಗಳು, ಮರಿಗಳನ್ನು ಕರೆದು “ಜೊಕೇ! ಹಿಂಡು ಬಿಟ್ಟು ಹೋದೀರಿ!” ಎಂದು ಆಗಾಗ ಹೇಳುತ್ತಿದ್ದವು.

ಆ ಹಿಂಡಿನಲ್ಲಿ ತಿಮ್ಮ ಎಂಬ ಒಂದು ಮರಿ ಇತ್ತು. ಆದು ಒಂದು ದಿನ “ಯಾವಾ ಗಲೂ ಇವರ ಜೊತೆಯಲ್ಲಿಯೇ ಏಕೆ ಹೋಗಬೇಕು? ಇಂದು ನಾನೇ ಬೇರೆ ಹೋಗುತ್ತೇನೆ” ಎಂದುಕೊಂಡಿತು. ಅಂದು ಹಾಗೆಯೇ, ಅವರೆಲ್ಲರೂ ಹೋಗುತ್ತಿದ್ದ ದಾರಿಯನ್ನು ಬಿಟ್ಟು, ಮತ್ತೊಂದು ಹಾದಿಯನ್ನು ಹಿಡಿಯಿತು. ಎಂದಿನಂತೆ ಮರಿಗಳೆಲ್ಲ ಜತೆಯಲ್ಲಿ ಬರುತ್ತಿವೆ ಎಂದು ದೊಡ್ಡ ಕಪಿಗಳೂ ಮುಂದು ಮುಂದಕ್ಕೆ ಹೋದವು. ತಿಮ್ಮನು ಹಿಂದೆ ಉಳಿದುದು ಯಾರಿಗೂ ತಿಳಿಯದು.

ತಿಮ್ಮನು ಕೊಂಚದೂರ ಹೋಗುವುದರೊಳಗಾಗಿ, ಒಂದು ನಾಯಿ ಬಂತು; ತಿಮ್ಮನನ್ನು ಕಂಡು ಬೊಗಳಿತು. ಅದನ್ನು ಕಂಡು ಕೆಲವರು ತುಂಟ ಹುಡುಗರು ಬಂದರು. ತಿಮ್ಮನನ್ನು ಬೇಕಾದಷ್ಟು ಕೀಟಲೆ ಮಾಡಿದರು. ಕೆಲವರು ಮುಖವನ್ನು ಉದ್ದಮಾಡಿ, “ಗುರ್‌ಗುರ್‌” ಎಂದು ಅಣಕಿಸಿದರು. ಮತ್ತೆ ಕೆಲವರು ಕೈಚಪ್ಪಾಳೆಯಿಟ್ಟು “ಕೋತೀ ತಿಮ್ಮಾ! ಲೇ! ಕೋತೀ ತಿಮ್ಮಾ!” ಎಂದು ಅದನ್ನು ರೇಗಿಸಿದರು. ಇನ್ನು ಕೆಲವರು ಕಲ್ಲಿನಿಂದ ಹೊಡೆದರು. ಇದನ್ನೆಲ್ಲಾ ಕಂಡು ತಿಮ್ಮನಿಗೆ ಬಲು ದಿಗಿಲಾಯಿತು. ಅರಿಚಿಕೊಂಡಿತು; ಅಲ್ಲಿಂದ ತಪ್ಪಿಸಿಕೊಂಡು ಹೋಗುವುದು ಹೇಗೋ ತಿಳಿಯದೆ, ಸುಮ್ಮನೆ “ಕಿಚಿಕಿಚಿ” ಎಂದು ಒರಲಿಕೊಂಡಿತು.

ಅಷ್ಟರಲ್ಲಿ ಅದರ ಅರಚಾಟವು ದೊಡ್ಡ ಕಪಿಗಳಿಗೆ ಕೇಳಿಸಿತು. ಕೂಡಲೇ ಹಿಂಡಿಗೆ ಹಿಂಡೇ ತಿಮ್ಮನಿರುವ ತಾವಿಗೆ ಓಡಿಬಂದವು. ಅವು ಬರುತ್ತಲೇ ಹುಡುಗರೂ ಓಡಿಹೋದರು. ನಾಯಿಯೂ ಓಡಿಹೋಯಿತು.

ಆಗ ಅದಕ್ಕೆ ಬುದ್ಧಿ ಬಂತು. ತಿಮ್ಮನು ಅಲ್ಲಿಂದ ಮುಂದೆ ಎಂದೂ ಅವಿಧೇಯನಾಗಿ ನಡೆಯಲಿಲ್ಲ. ಹಿಂಡಿನಲ್ಲಿ ಯಾರಾದರೂ ತಾಯಿತಂದೆಗಳು ಹೇಳಿದ ಮಾತು ಕೇಳದೆ ಹೋದರೆ, ತಿಮ್ಮನು ಅವರಿಗೆ ತನ್ನ ಕಥೆಯನ್ನು ಹೇಳಿ ದಾರಿಗೆ ತರುತ್ತಿತ್ತು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...