ಬಾಳೆಯೂ ಸುಗಂಧರಾಜನೂ

ಬಾಳೆಯೂ ಸುಗಂಧರಾಜನೂ

ಮುತ್ತುಗದ ಮರವು ಮರಗಳಿಗೆಲ್ಲಾ ಗುರುವಂತೆ. ಮರಗಳೆಲ್ಲಾ ಅದರ ಬಳಿಗೆ ಓದು ಕಲಿಯಲು ಹೋಗುತ್ತಿದ್ದವಂತೆ. ಅದು ಹಣ್ಣಿನ ಗಿಡಗಳಿಗೇ ಒಂದು ತರಗತಿ, ಹೂವಿನ ಗಿಡಗಳಿಗೇ ಒಂದು ತರಗತಿ ಎಂದು ಬೇರೆ ಬೇರೆ ಮಾಡಿದ್ದಿತಂತೆ. ಅಂತೂ ಪಾಠಗಳೇನೋ ಕ್ರಮವಾಗಿ ನಡೆಯುತ್ತಿದ್ದವು. ಹುಡುಗರು ಗುರುಗಳು ಹೇಳಿದಂತೆ ಕೇಳಿಕೊಂಡು ವಿದ್ಯೆ ಕಲಿಯುತ್ತಿದ್ದರು.

ಹಣ್ಣಿನ ಗಿಡಗಳಲ್ಲಿ ಬಾಳೆಯೂ, ಹೂವಿನ ಗಿಡಗಳಲ್ಲಿ ಸುಗಂಧರಾಜನೂ ಇಬ್ಬರೂ ಗೆಳೆಯರಾದವು. ಅವರಿಬ್ಬರಿಗೂ ಕೊಂಚ ಜಂಭ. “ಮುತ್ತುಗದ ಎಲೆಗಿಂತ ನನ್ನ ಎಲೆ ದೊಡ್ಡದು; ಅಲ್ಲದೆ ಜನರು ಮುತ್ತುಗದ ಎಲೆಗಿಂತ ನನ್ನ ಎಲೆಗೆ ಬೆಲೆಯನ್ನು ಕೊಡುವರು” ಎಂದು ಬಾಳೆಗೆ ಜಂಭ. “ಮುತ್ತುಗದ ಹೂ ಎಷ್ಟು ಅಂದವಾಗಿದ್ದರೇನು? ವಾಸನೆಯೇ ಇಲ್ಲ, ನನ್ನ ಹೂವಿನ ಮುಂದೆ ಹೂವೇ?” ಎಂದು ಸುಗಂಧರಾಜನಿಗೆ ಜಂಭ. ಈ ಜಂಭವು ಬಲಿಯಿತು. ಬಾಳೆಯೂ ಸುಗಂಧರಾಜನೂ ಬರುಬರುತ್ತ ಅವಿಧೇಯರಾದರು. ಅವು ಗುರುಗಳು ಹೇಳಿದ ಮಾತನ್ನು ಕೇಳದೆ ಹೋದವು.

ಮುತ್ತುಗವೂ ಇದನ್ನು ಕಂಡು, ಅವರಿಬ್ಬರನ್ನೂ ಕರೆದು “ನೀವು ಹೀಗೆ ಮಾಡಬಾರದು. ಹೇಳಿದ ಮಾತು ಕೇಳದಿದ್ದರೆ ನಿಮಗೇ ಕಷ್ಟ” ಎಂದು ಹೇಳಿತು. ಅವು ಕೇಳಲಿಲ್ಲ. ಆಗ ತರಗತಿಯಲ್ಲಿ “ಕವಲು ಬಿಡುವುದು” ಎಂಬ ಪಾಠವು ಆಗುತ್ತಿತ್ತು. ಅವಿಧೇಯರಾದ ಬಾಳೆ, ಸುಗಂಧರಾಜಗಳು ಪಾಠವನ್ನು ಗಮನಿಸಲಿಲ್ಲ.

ಕೆಲವು ದಿನವಾಯಿತು. ಮಲ್ಲಿಗೆ, ಜಾಜಿ, ಸಂಪಿಗೆ, ಪಾದರಿ, ಸುರಗಿ, ಪಗಡೆ, ಮೊದಲಾದ ಹೂವಿನ ಗಿಡಗಳೂ, ಮಾವು, ಬೇಲ, ಸೇಬು, ದ್ರಾಕ್ಷಿ, ಕಿತ್ತಳೆ, ಮೊದಲಾದ ಹಣ್ಣಿನ ಗಿಡಗಳೂ ಕವಲೊಡೆದವು. ಏನೇನು ಮಾಡಿದರೂ ಬಾಳೆಯೂ ಸುಗಂಧರಾಜನೂ ಕವಲು ಬಿಡಲಾಗಲಿಲ್ಲ. ಅವುಗಳಿಗೆ ಬಹಳ ದುಃಖವಾಯಿತು. “ಗುರುವು ಹೇಳಿದ ಮಾತು ಕೇಳಲಿಲ್ಲವಲ್ಲ! ಕೆಟ್ಟೆವಲ್ಲಾ!” ಎಂದು ಬಹಳ ನೊಂದುಕೊಂಡವು. ಈಗಲೂ ನೀವು ಬಾಳೆಯನ್ನೂ ಸುಗಂಧರಾಜನನ್ನೂ ನೋಡಿ. ಹಣ್ಣು ಹೂವು ಆದಮೇಲೆ ಮಿಕ್ಕ ಗಿಡಗಳು, ಕವಲೊಡೆದು ಸಂತೋಷದಿಂದ ಬೆಳೆಯುತ್ತಿದ್ದರೆ, ಅವೆರಡೂ ದುಃಖದಿಂದ ಬಾಡಿ ಬಳಲಿ ಒಣಗಿ ಹೋಗುವುವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೀಜಗನ ಗೂಡು
Next post ಅವನು ನಿನ್ನವನೆ ಒಪ್ಪಿದೆ, ಆಯ್ತೆ? ನನ್ನನ್ನು

ಸಣ್ಣ ಕತೆ

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

cheap jordans|wholesale air max|wholesale jordans|wholesale jewelry|wholesale jerseys