Home / ಬಾಲ ಚಿಲುಮೆ / ಕಥೆ / ಬಾಳೆಯೂ ಸುಗಂಧರಾಜನೂ

ಬಾಳೆಯೂ ಸುಗಂಧರಾಜನೂ

ಮುತ್ತುಗದ ಮರವು ಮರಗಳಿಗೆಲ್ಲಾ ಗುರುವಂತೆ. ಮರಗಳೆಲ್ಲಾ ಅದರ ಬಳಿಗೆ ಓದು ಕಲಿಯಲು ಹೋಗುತ್ತಿದ್ದವಂತೆ. ಅದು ಹಣ್ಣಿನ ಗಿಡಗಳಿಗೇ ಒಂದು ತರಗತಿ, ಹೂವಿನ ಗಿಡಗಳಿಗೇ ಒಂದು ತರಗತಿ ಎಂದು ಬೇರೆ ಬೇರೆ ಮಾಡಿದ್ದಿತಂತೆ. ಅಂತೂ ಪಾಠಗಳೇನೋ ಕ್ರಮವಾಗಿ ನಡೆಯುತ್ತಿದ್ದವು. ಹುಡುಗರು ಗುರುಗಳು ಹೇಳಿದಂತೆ ಕೇಳಿಕೊಂಡು ವಿದ್ಯೆ ಕಲಿಯುತ್ತಿದ್ದರು.

ಹಣ್ಣಿನ ಗಿಡಗಳಲ್ಲಿ ಬಾಳೆಯೂ, ಹೂವಿನ ಗಿಡಗಳಲ್ಲಿ ಸುಗಂಧರಾಜನೂ ಇಬ್ಬರೂ ಗೆಳೆಯರಾದವು. ಅವರಿಬ್ಬರಿಗೂ ಕೊಂಚ ಜಂಭ. “ಮುತ್ತುಗದ ಎಲೆಗಿಂತ ನನ್ನ ಎಲೆ ದೊಡ್ಡದು; ಅಲ್ಲದೆ ಜನರು ಮುತ್ತುಗದ ಎಲೆಗಿಂತ ನನ್ನ ಎಲೆಗೆ ಬೆಲೆಯನ್ನು ಕೊಡುವರು” ಎಂದು ಬಾಳೆಗೆ ಜಂಭ. “ಮುತ್ತುಗದ ಹೂ ಎಷ್ಟು ಅಂದವಾಗಿದ್ದರೇನು? ವಾಸನೆಯೇ ಇಲ್ಲ, ನನ್ನ ಹೂವಿನ ಮುಂದೆ ಹೂವೇ?” ಎಂದು ಸುಗಂಧರಾಜನಿಗೆ ಜಂಭ. ಈ ಜಂಭವು ಬಲಿಯಿತು. ಬಾಳೆಯೂ ಸುಗಂಧರಾಜನೂ ಬರುಬರುತ್ತ ಅವಿಧೇಯರಾದರು. ಅವು ಗುರುಗಳು ಹೇಳಿದ ಮಾತನ್ನು ಕೇಳದೆ ಹೋದವು.

ಮುತ್ತುಗವೂ ಇದನ್ನು ಕಂಡು, ಅವರಿಬ್ಬರನ್ನೂ ಕರೆದು “ನೀವು ಹೀಗೆ ಮಾಡಬಾರದು. ಹೇಳಿದ ಮಾತು ಕೇಳದಿದ್ದರೆ ನಿಮಗೇ ಕಷ್ಟ” ಎಂದು ಹೇಳಿತು. ಅವು ಕೇಳಲಿಲ್ಲ. ಆಗ ತರಗತಿಯಲ್ಲಿ “ಕವಲು ಬಿಡುವುದು” ಎಂಬ ಪಾಠವು ಆಗುತ್ತಿತ್ತು. ಅವಿಧೇಯರಾದ ಬಾಳೆ, ಸುಗಂಧರಾಜಗಳು ಪಾಠವನ್ನು ಗಮನಿಸಲಿಲ್ಲ.

ಕೆಲವು ದಿನವಾಯಿತು. ಮಲ್ಲಿಗೆ, ಜಾಜಿ, ಸಂಪಿಗೆ, ಪಾದರಿ, ಸುರಗಿ, ಪಗಡೆ, ಮೊದಲಾದ ಹೂವಿನ ಗಿಡಗಳೂ, ಮಾವು, ಬೇಲ, ಸೇಬು, ದ್ರಾಕ್ಷಿ, ಕಿತ್ತಳೆ, ಮೊದಲಾದ ಹಣ್ಣಿನ ಗಿಡಗಳೂ ಕವಲೊಡೆದವು. ಏನೇನು ಮಾಡಿದರೂ ಬಾಳೆಯೂ ಸುಗಂಧರಾಜನೂ ಕವಲು ಬಿಡಲಾಗಲಿಲ್ಲ. ಅವುಗಳಿಗೆ ಬಹಳ ದುಃಖವಾಯಿತು. “ಗುರುವು ಹೇಳಿದ ಮಾತು ಕೇಳಲಿಲ್ಲವಲ್ಲ! ಕೆಟ್ಟೆವಲ್ಲಾ!” ಎಂದು ಬಹಳ ನೊಂದುಕೊಂಡವು. ಈಗಲೂ ನೀವು ಬಾಳೆಯನ್ನೂ ಸುಗಂಧರಾಜನನ್ನೂ ನೋಡಿ. ಹಣ್ಣು ಹೂವು ಆದಮೇಲೆ ಮಿಕ್ಕ ಗಿಡಗಳು, ಕವಲೊಡೆದು ಸಂತೋಷದಿಂದ ಬೆಳೆಯುತ್ತಿದ್ದರೆ, ಅವೆರಡೂ ದುಃಖದಿಂದ ಬಾಡಿ ಬಳಲಿ ಒಣಗಿ ಹೋಗುವುವು.
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...