Home / ಬಾಲ ಚಿಲುಮೆ / ಕಥೆ / ಸೋಮೇಗೌಡ

ಸೋಮೇಗೌಡ

ಕತ್ತಲಾಗಿತ್ತು. ದನಕರುಗಳನ್ನು ಆಟ್ಟಿಕೊಂಡು ಆರಂಬಗಾರರೆಲ್ಲರೂ ಹೊಲ ಗದ್ದೆಗಳಿಂದ ಆಗತಾನೇ ಹಿಂದಿರುಗಿ ಬರುತ್ತಿದ್ದರು. ಪಟೇಲ ಸೋಮೇಗೌಡನು ಮಳೆಬೆಳೆ ವಿಚಾರವಾಗಿ ಮಾತನಾಡುತ್ತ ಚಾವಡಿಯಲ್ಲಿ ಕುಳಿತಿದ್ದನು. ಆಗ ಯಾರೋ ಕುದುರೆಯ ಮೇಲೆ ಕುಳಿತವರು “ಈ ಊರಿನ ಪಟೇಲನು ಯಾರು?” ಎಂದು ವಿಚಾರಿಸಿಕೊಂಡು ಬಂದರು. ಗೌಡನು ತಾನೇ ಮುಂದೆ ಬಂದು “ನೀವು ಯಾರಪ್ಪಾ?” ಎಂದು ಕೇಳಿದನು. ಬಂದವರು “ಅಯ್ಯಾ! ನಾನೊಬ್ಬ ದಾರಿಗನು. ಹಾದಿ ತಪ್ಪಿ ಬಂದಿರುವೆನು. ಈ ರಾತ್ರಿ ತಂಗುವುದಕ್ಕೆ ನನಗೆ ಕೊಂಚ ತಾವನ್ನು ಕೊಡಬೇಕು” ಎಂದರು. ಗೌಡನು “ಅದಕ್ಕೇನಪ್ಪ! ಬಾ!” ಎಂದು ಮನೆಗೆ ಕರೆದುಕೊಂಡು ಹೋದನು.

ಮನೆಯೊಳಗೆ ದೀಪದ ಬೆಳಕಿಗೆ ಹೋಗುತ್ತಲೇ ಬಂದಿರುವವರು ಯಾರು ಎಂಬುದು ಗೌಡನಿಗೆ ತಿಳಿಯಿತು. ಅವನು ಕೂಡಲೆ ಕಾಲಿಗೆ ಬಿದ್ದು “ನನ್ನ ಮನೆ ದೇವರು ಬಂದಿತು; ನನ್ನ ಮನೆ ದೇವರು!” ಎಂದು ಉಬ್ಬಿಹೋದನು; ಅವರ ಕಾಲಿಗೆ ಬಿಸಿನೀರು ಎರೆದನು. ಹಾಲು ಹಣ್ಣು ತಂದೊಪ್ಪಿಸಿದನು. ಬೆಚ್ಚಗೆ ಇರುವೆಡೆಯಲ್ಲಿ ಹಾಸಿ, ಮಲಗಿಸಿದನು. ಮನೆಯ ಮಂದಿ ಮಕ್ಕಳೆಲ್ಲರೂ ಬಂದು ಉಪಚರಿಸಿದರು. ಗೌಡನು ಕುದುರೆಗೆ ಚನ್ನಾಗಿ ಮೈತಿಕ್ಕಿಸಿ, ಬೇಯಿಸಿದ ಹುರುಳಿಯನ್ನು ಇಟ್ಟು, ಹೊಸಹುಲ್ಲನ್ನು ಹಾಕಿ ಆದರಿಸಿದನು. ಬಂದಿದ್ದವರು ಮಹಾರಾಜರು.

ಬೆಳಗಾಗುವ ವೇಳೆಗೆ ದಂಡು ದಾಳಿಯವರೆಲ್ಲರೂ ದೊರೆಗಳನ್ನು ಹುಡುಕಿಕೊಂಡು ಬಂದು ಗೌಡನ ಮನೆಯ ಬಾಗಿಲಲ್ಲಿ ನಿಂತಿದ್ದರು. ದೊರೆಗಳು ಎದ್ದು ಈಚೆಗೆ ಬರುತ್ತಲೆ ಎಲ್ಲರೂ ಒಬ್ಬೊಬ್ಬರಾಗಿ ಬಂದು ಕಾಣಿಸಿಕೊಂಡು ಕೈ ಮುಗಿದರು.

ದೊರೆಗಳು ಗೌಡನನ್ನು ಹತ್ತಿರಕ್ಕೆ ಕರೆದು, “ಗೌಡ! ನೀನು ನಮಗೆ ಬಲು ಉಪಕಾರ ಮಾಡಿದೆ” ಎಂದು ಬಹಳವಾಗಿ ಹೊಗಳಿದರು. ಗೌಡನು “ಬಿಡು ನಮ್ಮಪ್ಪ! ನೀನು ನಮಗೆಲ್ಲ ಹೆತ್ತತಾಯಿಗಿಂತೆ ಹೆಚ್ಚು. ಸಮಯ ಬಂದರೆ ಪ್ರಾಣ ಕೂಡಾ ನಿನ್ನ ಪಾದಕ್ಕೆ ಒಬ್ಬಸಬೇಡವೇ? ಅಂಥಾದ್ದರಲ್ಲಿ ಇದೇನು ಹೆಚ್ಚು?” ಎಂದನು. ದೊರೆಗಳು ಅವನ ರಾಜಭಕ್ತಿಗೆ ಮೆಚ್ಚಿ ಆ ಹಳ್ಳಿಯನ್ನೇ ಅವನಿಗೆ ಮಾನ್ಯವಾಗಿ ಕೊಟ್ಟರು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್