Home / ಬಾಲ ಚಿಲುಮೆ / ಕಥೆ / ಸೋಮೇಗೌಡ

ಸೋಮೇಗೌಡ

ಕತ್ತಲಾಗಿತ್ತು. ದನಕರುಗಳನ್ನು ಆಟ್ಟಿಕೊಂಡು ಆರಂಬಗಾರರೆಲ್ಲರೂ ಹೊಲ ಗದ್ದೆಗಳಿಂದ ಆಗತಾನೇ ಹಿಂದಿರುಗಿ ಬರುತ್ತಿದ್ದರು. ಪಟೇಲ ಸೋಮೇಗೌಡನು ಮಳೆಬೆಳೆ ವಿಚಾರವಾಗಿ ಮಾತನಾಡುತ್ತ ಚಾವಡಿಯಲ್ಲಿ ಕುಳಿತಿದ್ದನು. ಆಗ ಯಾರೋ ಕುದುರೆಯ ಮೇಲೆ ಕುಳಿತವರು “ಈ ಊರಿನ ಪಟೇಲನು ಯಾರು?” ಎಂದು ವಿಚಾರಿಸಿಕೊಂಡು ಬಂದರು. ಗೌಡನು ತಾನೇ ಮುಂದೆ ಬಂದು “ನೀವು ಯಾರಪ್ಪಾ?” ಎಂದು ಕೇಳಿದನು. ಬಂದವರು “ಅಯ್ಯಾ! ನಾನೊಬ್ಬ ದಾರಿಗನು. ಹಾದಿ ತಪ್ಪಿ ಬಂದಿರುವೆನು. ಈ ರಾತ್ರಿ ತಂಗುವುದಕ್ಕೆ ನನಗೆ ಕೊಂಚ ತಾವನ್ನು ಕೊಡಬೇಕು” ಎಂದರು. ಗೌಡನು “ಅದಕ್ಕೇನಪ್ಪ! ಬಾ!” ಎಂದು ಮನೆಗೆ ಕರೆದುಕೊಂಡು ಹೋದನು.

ಮನೆಯೊಳಗೆ ದೀಪದ ಬೆಳಕಿಗೆ ಹೋಗುತ್ತಲೇ ಬಂದಿರುವವರು ಯಾರು ಎಂಬುದು ಗೌಡನಿಗೆ ತಿಳಿಯಿತು. ಅವನು ಕೂಡಲೆ ಕಾಲಿಗೆ ಬಿದ್ದು “ನನ್ನ ಮನೆ ದೇವರು ಬಂದಿತು; ನನ್ನ ಮನೆ ದೇವರು!” ಎಂದು ಉಬ್ಬಿಹೋದನು; ಅವರ ಕಾಲಿಗೆ ಬಿಸಿನೀರು ಎರೆದನು. ಹಾಲು ಹಣ್ಣು ತಂದೊಪ್ಪಿಸಿದನು. ಬೆಚ್ಚಗೆ ಇರುವೆಡೆಯಲ್ಲಿ ಹಾಸಿ, ಮಲಗಿಸಿದನು. ಮನೆಯ ಮಂದಿ ಮಕ್ಕಳೆಲ್ಲರೂ ಬಂದು ಉಪಚರಿಸಿದರು. ಗೌಡನು ಕುದುರೆಗೆ ಚನ್ನಾಗಿ ಮೈತಿಕ್ಕಿಸಿ, ಬೇಯಿಸಿದ ಹುರುಳಿಯನ್ನು ಇಟ್ಟು, ಹೊಸಹುಲ್ಲನ್ನು ಹಾಕಿ ಆದರಿಸಿದನು. ಬಂದಿದ್ದವರು ಮಹಾರಾಜರು.

ಬೆಳಗಾಗುವ ವೇಳೆಗೆ ದಂಡು ದಾಳಿಯವರೆಲ್ಲರೂ ದೊರೆಗಳನ್ನು ಹುಡುಕಿಕೊಂಡು ಬಂದು ಗೌಡನ ಮನೆಯ ಬಾಗಿಲಲ್ಲಿ ನಿಂತಿದ್ದರು. ದೊರೆಗಳು ಎದ್ದು ಈಚೆಗೆ ಬರುತ್ತಲೆ ಎಲ್ಲರೂ ಒಬ್ಬೊಬ್ಬರಾಗಿ ಬಂದು ಕಾಣಿಸಿಕೊಂಡು ಕೈ ಮುಗಿದರು.

ದೊರೆಗಳು ಗೌಡನನ್ನು ಹತ್ತಿರಕ್ಕೆ ಕರೆದು, “ಗೌಡ! ನೀನು ನಮಗೆ ಬಲು ಉಪಕಾರ ಮಾಡಿದೆ” ಎಂದು ಬಹಳವಾಗಿ ಹೊಗಳಿದರು. ಗೌಡನು “ಬಿಡು ನಮ್ಮಪ್ಪ! ನೀನು ನಮಗೆಲ್ಲ ಹೆತ್ತತಾಯಿಗಿಂತೆ ಹೆಚ್ಚು. ಸಮಯ ಬಂದರೆ ಪ್ರಾಣ ಕೂಡಾ ನಿನ್ನ ಪಾದಕ್ಕೆ ಒಬ್ಬಸಬೇಡವೇ? ಅಂಥಾದ್ದರಲ್ಲಿ ಇದೇನು ಹೆಚ್ಚು?” ಎಂದನು. ದೊರೆಗಳು ಅವನ ರಾಜಭಕ್ತಿಗೆ ಮೆಚ್ಚಿ ಆ ಹಳ್ಳಿಯನ್ನೇ ಅವನಿಗೆ ಮಾನ್ಯವಾಗಿ ಕೊಟ್ಟರು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...