ಕರ್‍ಣ

ದ್ರೋಣಾಚಾರ್ಯರು ಕೌರವ ಪಾಂಡವರಿಗೆ ಬಿಲ್ಲಿನ ವಿದ್ಯೆಯನ್ನು ಕಲಿಸುತ್ತಿದ್ದರು. ಕರ್ಣನು ಬಂದು ತನಗೂ ಕಲಿಸಬೇಕೆಂದು ಕೇಳಿಕೊಂಡನು. ಅವರು “ನೀನು ಕ್ಷತ್ರಿಯನಲ್ಲ. ನಾನು ನಿನಗೆ ವಿದ್ಯೆಯನ್ನು ಹೇಳಿ ಕೊಡುವುದಿಲ್ಲ” ಎಂದರು. ಕರ್‍ಣನು “ಬೇರೆ ಕಡೆಯಲ್ಲಿ ಕಲಿತು ಬರುವೆನು” ಎಂದು ಆಣೆಯಿಟ್ಟುಕೊಂಡನು.

ಆಗಿನ ಕಾಲದಲ್ಲಿ ಪರಶುರಾಮರನ್ನು ಬಿಟ್ಟರೆ, ದ್ರೋಣಾಚಾರ್ಯರನ್ನು ಮೀರಿಸಿದವರು ಯಾರೂ ಇರಲಿಲ್ಲ. ಅದರಿಂದ ಕರ್‍ಣನು ಅವರ ಬಳಿಗೇ ಹೋದನು. ಅವರು ಬ್ರಾಹ್ಮಣರಲ್ಲದವರಿಗೆ ವಿದ್ಯೆಯನ್ನು ಹೇಳುತ್ತಿರಲಿಲ್ಲ. ಕರ್ಣನು “ತಾನೂ ಬ್ರಾಹ್ಮಣನು” ಎಂದು ಸಟೆಯಾಡಿದನು. ಅವರು ಅದು ದಿಟಿನೆಂದು ನಂಬಿ ಅವನನ್ನು ಶಿಷ್ಯನನ್ನಾಗಿ ಸೇರಿಸಿಕೊಂಡರು.

ಆದರೆ ಈ ಕಪಟವು ಬಹಳ ಕಾಲದವರೆಗೆ ಹೊರಬೀಳಲಿಲ್ಲ. ಕರ್‍ಣನು ಬ್ರಾಹ್ಮಣನೆಂದೇ ಪರಶುರಾಮರು ವಿದ್ಯೆಯನ್ನೆಲ್ಲಾ ಹೇಳಿಕೊಟ್ಟರು. ಇನ್ನು ಕೆಲವು ದಿನವಾದರೆ ಎಲ್ಲವೂ ಮುಗಿದು ಕರ್‍ಣನು ಹಿಂತಿರುಗಬಹುದು. ಆಗ ಒಂದು ದಿನ ಅವನ ಗುಟ್ಟು ಹೊರಬಿತ್ತು. “ಕರ್‍ಣನು ಬ್ರಾಹ್ಮಣನಲ್ಲ” ಎಂಬುದು ಅವರಿಗೆ ತಿಳಿದುಹೋಯಿತು. ಸಟೆಯಾಡಿ ಮೋಸ ಮಾಡಿದನೆಂದು ಅವರಿಗೆ ಬಹಳ ಸಿಟ್ಟು ಬಂತು. “ಸುಳ್ಳು ಹೇಳಿ ಮೋಸದಿಂದ ಈ ವಿದ್ಯೆಯನ್ನು ಸಂಪಾದಿಸಿದೆ. ಇದು ನಿನಗೆ ಸಮಯದಲ್ಲಿ ಫಲಿಸದೆ ಹೋಗಲಿ” ಎಂದು ಹೇಳಿಬಿಟ್ಟರು.

ಅದರಂತೆಯೇ ಕರ್‍ಣನು ಯುದ್ಧಕ್ಕೆ ಹೋದಾಗಲೆಲ್ಲಾ ಅವನಿಗೆ ಬಾಣ ವಿದ್ಯೆಯು ಮರೆತು ಹೋಗುತ್ತಿತ್ತು. ಅದರಿಂದಲೇ ಅವನಿಗೆ ಸಾವೂ ಬಂದಿತು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...