ಕರ್‍ಣ

ದ್ರೋಣಾಚಾರ್ಯರು ಕೌರವ ಪಾಂಡವರಿಗೆ ಬಿಲ್ಲಿನ ವಿದ್ಯೆಯನ್ನು ಕಲಿಸುತ್ತಿದ್ದರು. ಕರ್ಣನು ಬಂದು ತನಗೂ ಕಲಿಸಬೇಕೆಂದು ಕೇಳಿಕೊಂಡನು. ಅವರು “ನೀನು ಕ್ಷತ್ರಿಯನಲ್ಲ. ನಾನು ನಿನಗೆ ವಿದ್ಯೆಯನ್ನು ಹೇಳಿ ಕೊಡುವುದಿಲ್ಲ” ಎಂದರು. ಕರ್‍ಣನು “ಬೇರೆ ಕಡೆಯಲ್ಲಿ ಕಲಿತು ಬರುವೆನು” ಎಂದು ಆಣೆಯಿಟ್ಟುಕೊಂಡನು.

ಆಗಿನ ಕಾಲದಲ್ಲಿ ಪರಶುರಾಮರನ್ನು ಬಿಟ್ಟರೆ, ದ್ರೋಣಾಚಾರ್ಯರನ್ನು ಮೀರಿಸಿದವರು ಯಾರೂ ಇರಲಿಲ್ಲ. ಅದರಿಂದ ಕರ್‍ಣನು ಅವರ ಬಳಿಗೇ ಹೋದನು. ಅವರು ಬ್ರಾಹ್ಮಣರಲ್ಲದವರಿಗೆ ವಿದ್ಯೆಯನ್ನು ಹೇಳುತ್ತಿರಲಿಲ್ಲ. ಕರ್ಣನು “ತಾನೂ ಬ್ರಾಹ್ಮಣನು” ಎಂದು ಸಟೆಯಾಡಿದನು. ಅವರು ಅದು ದಿಟಿನೆಂದು ನಂಬಿ ಅವನನ್ನು ಶಿಷ್ಯನನ್ನಾಗಿ ಸೇರಿಸಿಕೊಂಡರು.

ಆದರೆ ಈ ಕಪಟವು ಬಹಳ ಕಾಲದವರೆಗೆ ಹೊರಬೀಳಲಿಲ್ಲ. ಕರ್‍ಣನು ಬ್ರಾಹ್ಮಣನೆಂದೇ ಪರಶುರಾಮರು ವಿದ್ಯೆಯನ್ನೆಲ್ಲಾ ಹೇಳಿಕೊಟ್ಟರು. ಇನ್ನು ಕೆಲವು ದಿನವಾದರೆ ಎಲ್ಲವೂ ಮುಗಿದು ಕರ್‍ಣನು ಹಿಂತಿರುಗಬಹುದು. ಆಗ ಒಂದು ದಿನ ಅವನ ಗುಟ್ಟು ಹೊರಬಿತ್ತು. “ಕರ್‍ಣನು ಬ್ರಾಹ್ಮಣನಲ್ಲ” ಎಂಬುದು ಅವರಿಗೆ ತಿಳಿದುಹೋಯಿತು. ಸಟೆಯಾಡಿ ಮೋಸ ಮಾಡಿದನೆಂದು ಅವರಿಗೆ ಬಹಳ ಸಿಟ್ಟು ಬಂತು. “ಸುಳ್ಳು ಹೇಳಿ ಮೋಸದಿಂದ ಈ ವಿದ್ಯೆಯನ್ನು ಸಂಪಾದಿಸಿದೆ. ಇದು ನಿನಗೆ ಸಮಯದಲ್ಲಿ ಫಲಿಸದೆ ಹೋಗಲಿ” ಎಂದು ಹೇಳಿಬಿಟ್ಟರು.

ಅದರಂತೆಯೇ ಕರ್‍ಣನು ಯುದ್ಧಕ್ಕೆ ಹೋದಾಗಲೆಲ್ಲಾ ಅವನಿಗೆ ಬಾಣ ವಿದ್ಯೆಯು ಮರೆತು ಹೋಗುತ್ತಿತ್ತು. ಅದರಿಂದಲೇ ಅವನಿಗೆ ಸಾವೂ ಬಂದಿತು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...