ಕರ್‍ಣ

ದ್ರೋಣಾಚಾರ್ಯರು ಕೌರವ ಪಾಂಡವರಿಗೆ ಬಿಲ್ಲಿನ ವಿದ್ಯೆಯನ್ನು ಕಲಿಸುತ್ತಿದ್ದರು. ಕರ್ಣನು ಬಂದು ತನಗೂ ಕಲಿಸಬೇಕೆಂದು ಕೇಳಿಕೊಂಡನು. ಅವರು “ನೀನು ಕ್ಷತ್ರಿಯನಲ್ಲ. ನಾನು ನಿನಗೆ ವಿದ್ಯೆಯನ್ನು ಹೇಳಿ ಕೊಡುವುದಿಲ್ಲ” ಎಂದರು. ಕರ್‍ಣನು “ಬೇರೆ ಕಡೆಯಲ್ಲಿ ಕಲಿತು ಬರುವೆನು” ಎಂದು ಆಣೆಯಿಟ್ಟುಕೊಂಡನು.

ಆಗಿನ ಕಾಲದಲ್ಲಿ ಪರಶುರಾಮರನ್ನು ಬಿಟ್ಟರೆ, ದ್ರೋಣಾಚಾರ್ಯರನ್ನು ಮೀರಿಸಿದವರು ಯಾರೂ ಇರಲಿಲ್ಲ. ಅದರಿಂದ ಕರ್‍ಣನು ಅವರ ಬಳಿಗೇ ಹೋದನು. ಅವರು ಬ್ರಾಹ್ಮಣರಲ್ಲದವರಿಗೆ ವಿದ್ಯೆಯನ್ನು ಹೇಳುತ್ತಿರಲಿಲ್ಲ. ಕರ್ಣನು “ತಾನೂ ಬ್ರಾಹ್ಮಣನು” ಎಂದು ಸಟೆಯಾಡಿದನು. ಅವರು ಅದು ದಿಟಿನೆಂದು ನಂಬಿ ಅವನನ್ನು ಶಿಷ್ಯನನ್ನಾಗಿ ಸೇರಿಸಿಕೊಂಡರು.

ಆದರೆ ಈ ಕಪಟವು ಬಹಳ ಕಾಲದವರೆಗೆ ಹೊರಬೀಳಲಿಲ್ಲ. ಕರ್‍ಣನು ಬ್ರಾಹ್ಮಣನೆಂದೇ ಪರಶುರಾಮರು ವಿದ್ಯೆಯನ್ನೆಲ್ಲಾ ಹೇಳಿಕೊಟ್ಟರು. ಇನ್ನು ಕೆಲವು ದಿನವಾದರೆ ಎಲ್ಲವೂ ಮುಗಿದು ಕರ್‍ಣನು ಹಿಂತಿರುಗಬಹುದು. ಆಗ ಒಂದು ದಿನ ಅವನ ಗುಟ್ಟು ಹೊರಬಿತ್ತು. “ಕರ್‍ಣನು ಬ್ರಾಹ್ಮಣನಲ್ಲ” ಎಂಬುದು ಅವರಿಗೆ ತಿಳಿದುಹೋಯಿತು. ಸಟೆಯಾಡಿ ಮೋಸ ಮಾಡಿದನೆಂದು ಅವರಿಗೆ ಬಹಳ ಸಿಟ್ಟು ಬಂತು. “ಸುಳ್ಳು ಹೇಳಿ ಮೋಸದಿಂದ ಈ ವಿದ್ಯೆಯನ್ನು ಸಂಪಾದಿಸಿದೆ. ಇದು ನಿನಗೆ ಸಮಯದಲ್ಲಿ ಫಲಿಸದೆ ಹೋಗಲಿ” ಎಂದು ಹೇಳಿಬಿಟ್ಟರು.

ಅದರಂತೆಯೇ ಕರ್‍ಣನು ಯುದ್ಧಕ್ಕೆ ಹೋದಾಗಲೆಲ್ಲಾ ಅವನಿಗೆ ಬಾಣ ವಿದ್ಯೆಯು ಮರೆತು ಹೋಗುತ್ತಿತ್ತು. ಅದರಿಂದಲೇ ಅವನಿಗೆ ಸಾವೂ ಬಂದಿತು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...