ಕರ್‍ಣ

ದ್ರೋಣಾಚಾರ್ಯರು ಕೌರವ ಪಾಂಡವರಿಗೆ ಬಿಲ್ಲಿನ ವಿದ್ಯೆಯನ್ನು ಕಲಿಸುತ್ತಿದ್ದರು. ಕರ್ಣನು ಬಂದು ತನಗೂ ಕಲಿಸಬೇಕೆಂದು ಕೇಳಿಕೊಂಡನು. ಅವರು “ನೀನು ಕ್ಷತ್ರಿಯನಲ್ಲ. ನಾನು ನಿನಗೆ ವಿದ್ಯೆಯನ್ನು ಹೇಳಿ ಕೊಡುವುದಿಲ್ಲ” ಎಂದರು. ಕರ್‍ಣನು “ಬೇರೆ ಕಡೆಯಲ್ಲಿ ಕಲಿತು ಬರುವೆನು” ಎಂದು ಆಣೆಯಿಟ್ಟುಕೊಂಡನು.

ಆಗಿನ ಕಾಲದಲ್ಲಿ ಪರಶುರಾಮರನ್ನು ಬಿಟ್ಟರೆ, ದ್ರೋಣಾಚಾರ್ಯರನ್ನು ಮೀರಿಸಿದವರು ಯಾರೂ ಇರಲಿಲ್ಲ. ಅದರಿಂದ ಕರ್‍ಣನು ಅವರ ಬಳಿಗೇ ಹೋದನು. ಅವರು ಬ್ರಾಹ್ಮಣರಲ್ಲದವರಿಗೆ ವಿದ್ಯೆಯನ್ನು ಹೇಳುತ್ತಿರಲಿಲ್ಲ. ಕರ್ಣನು “ತಾನೂ ಬ್ರಾಹ್ಮಣನು” ಎಂದು ಸಟೆಯಾಡಿದನು. ಅವರು ಅದು ದಿಟಿನೆಂದು ನಂಬಿ ಅವನನ್ನು ಶಿಷ್ಯನನ್ನಾಗಿ ಸೇರಿಸಿಕೊಂಡರು.

ಆದರೆ ಈ ಕಪಟವು ಬಹಳ ಕಾಲದವರೆಗೆ ಹೊರಬೀಳಲಿಲ್ಲ. ಕರ್‍ಣನು ಬ್ರಾಹ್ಮಣನೆಂದೇ ಪರಶುರಾಮರು ವಿದ್ಯೆಯನ್ನೆಲ್ಲಾ ಹೇಳಿಕೊಟ್ಟರು. ಇನ್ನು ಕೆಲವು ದಿನವಾದರೆ ಎಲ್ಲವೂ ಮುಗಿದು ಕರ್‍ಣನು ಹಿಂತಿರುಗಬಹುದು. ಆಗ ಒಂದು ದಿನ ಅವನ ಗುಟ್ಟು ಹೊರಬಿತ್ತು. “ಕರ್‍ಣನು ಬ್ರಾಹ್ಮಣನಲ್ಲ” ಎಂಬುದು ಅವರಿಗೆ ತಿಳಿದುಹೋಯಿತು. ಸಟೆಯಾಡಿ ಮೋಸ ಮಾಡಿದನೆಂದು ಅವರಿಗೆ ಬಹಳ ಸಿಟ್ಟು ಬಂತು. “ಸುಳ್ಳು ಹೇಳಿ ಮೋಸದಿಂದ ಈ ವಿದ್ಯೆಯನ್ನು ಸಂಪಾದಿಸಿದೆ. ಇದು ನಿನಗೆ ಸಮಯದಲ್ಲಿ ಫಲಿಸದೆ ಹೋಗಲಿ” ಎಂದು ಹೇಳಿಬಿಟ್ಟರು.

ಅದರಂತೆಯೇ ಕರ್‍ಣನು ಯುದ್ಧಕ್ಕೆ ಹೋದಾಗಲೆಲ್ಲಾ ಅವನಿಗೆ ಬಾಣ ವಿದ್ಯೆಯು ಮರೆತು ಹೋಗುತ್ತಿತ್ತು. ಅದರಿಂದಲೇ ಅವನಿಗೆ ಸಾವೂ ಬಂದಿತು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...