Home / ಬಾಲ ಚಿಲುಮೆ / ಕಥೆ / ಗರುಡನೂ ಗೂಬೆಯೂ

ಗರುಡನೂ ಗೂಬೆಯೂ

ಒಬ್ಬ ರಾಜನನ್ನು ಆರಿಸಿಕೊಳ್ಳಬೇಕೆಂದು ಹಕ್ಕಿಗಳೆಲ್ಲವೂ ಸಭೆ ಸೇರಿದವು. ಗೂಬೆಯು ಅವರಿವರಿಗೆ ಲಂಚಕೂಟ್ಟು, “ನನ್ನನ್ನು ದೊರೆಯನ್ನು ಮಾಡಿರಿ” ಎಂದು ಹೇಳಿಕೊಂಡಿತು. ಲಂಚವನ್ನು ತೆಗಿದುಕೊಂಡಿದ್ದ ಹಕ್ಕಿಗಳೆಲ್ಲವೂ ನಮಗೆ “ಗೂಬೆಯೇ ಆರಸಾಗಬೇಕು” ಎಂದವು.

ಇದೆಲ್ಲಾ ನಡೆಯುವವರೆಗೂ ಕಾಗೆಯು ಒಂದು ಮೂಲೆಯಲ್ಲಿ ಕುಳಿತಿತ್ತು. “ಕೊಳಕನಾದ ಗೂಬೆಯು ದೊರೆಯಾಗುವುದೆಂದರೇನು?” ಎಂದು ಎಲ್ಲರಿಗೂ ಅಸಹ್ಯವಾಗಿತ್ತು. ಆದರೂ ಮಾತನಾಡದೆ ಎಲ್ಲರೂ ಸುಮ್ಮನಿದ್ದರು. ಆಗ ಕಾಗೆಯು ಎದ್ದು ನಿಂತುಕೊಂಡು “ಸ್ವಾಮಿ! ಕೊಂಚ ತಡೆಯಿರಿ. ಗೂಬೆಯನ್ನು ಎಲ್ಲರೂ ಕೊಂಚ ಕಣ್ಣಿಟ್ಟು ನೋಡಿರಿ. ಜಗತ್ತಿನಲ್ಲಿ ಇಂತಹ ಕೊಳಕು ಹಕ್ಕಿಯು ಇನ್ನು ಉಂಟೆ? ಮುಖವನ್ನು ತೊಳೆದು ಎಷ್ಟು ದಿವಸವಾಯಿತೋ? ಮೈಯ್ಯನ್ನು ತೊಳೆವುದಂತೂ ಉಂಟೋ ಇಲ್ಲವೇ ಇಲ್ಲವೋ? ಆ ಕಣ್ಣುಗಳನ್ನು ನೋಡಿ. ಜಿಬರು ಗುಡ್ಡೆ ಗುಡ್ಡೆಯಾಗಿದೆ. ಮೂಗು ನೋಡಿ. ಸಿಂಬಳವು ಹರಿಯುತ್ತಿದೆ. ಇಂತಹ ಶೊಬಚನನ್ನು ಅರಸಾಗಿ ಮಾಡಿಕೊಂಡರೆ ಎಲ್ಲರೂ ನಗುವರು. ಅತ್ತ ನೋಡಿ. ಶುಚಿವಂತನಾದ ಗರುಡನು ಕುಳಿತಿರುವನು. ಯಾವಾಗ ನೋಡಿದರೂ ಮಡಿಯಾಗಿಯೇ ಇರುವನು. ಆತನನ್ನು ನೋಡಿದರೆ ಎಷ್ಟು ಸಂತೋಷವಾಗುವುದು! ಆತನ ಶುಚಿಯನ್ನು ನೋಡಿಯೇ ಭಗವಂತನಾದ ವಿಷ್ಣುವೂ ಆತನನ್ನು ಮೆಚ್ಚಿಕೊಂಡಿರುವನು. ಆತನನ್ನೇ ದೊರೆಯನ್ನು ಮಾಡಬೇಕು. ಈ ಕೊಳಕನನ್ನು ಹೊರಕ್ಕೆ ನೂಕಬೇಕು” ಎಂದಿತು. ಉಳಿದ ಹಕ್ಕಿಗಳು “ಹೌದು. ಗೂಬೆಯನ್ನು ನೂಕಿ. ಗರುಡನಿಗೇ ಪಟ್ಟಿಕಟ್ಟರಿ” ಎಂದವು. ಎಲ್ಲರೂ ಸೇರಿ ಹಾಗೆಯೇ ಮಾಡಿದರು. ಅರಸುತನವು ಗೂಬೆಗೆ ತಪ್ಪಿ ಗರುಡನಿಗೇ ಆಯಿತು.

“ತನ್ನ ಕೊಳಕುತನದಿಂದ ದೊರೆತನವನ್ನು ತಪ್ಪಿಸಿಕೂಂಡನು” ಎಂದು ಎಲ್ಲರೂ ಹಾಸ್ಯ ಮಾಡುವರು ಎಂದೋ ಏನೋ, ಗೂಬೆಯು ಈಗಲೂ ಹಗಲಿನಲ್ಲಿ ಹೊರಗೆ ಬರುವುದಿಲ್ಲ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...