ಗರುಡನೂ ಗೂಬೆಯೂ

ಗರುಡನೂ ಗೂಬೆಯೂ

ಒಬ್ಬ ರಾಜನನ್ನು ಆರಿಸಿಕೊಳ್ಳಬೇಕೆಂದು ಹಕ್ಕಿಗಳೆಲ್ಲವೂ ಸಭೆ ಸೇರಿದವು. ಗೂಬೆಯು ಅವರಿವರಿಗೆ ಲಂಚಕೂಟ್ಟು, “ನನ್ನನ್ನು ದೊರೆಯನ್ನು ಮಾಡಿರಿ” ಎಂದು ಹೇಳಿಕೊಂಡಿತು. ಲಂಚವನ್ನು ತೆಗಿದುಕೊಂಡಿದ್ದ ಹಕ್ಕಿಗಳೆಲ್ಲವೂ ನಮಗೆ “ಗೂಬೆಯೇ ಆರಸಾಗಬೇಕು” ಎಂದವು.

ಇದೆಲ್ಲಾ ನಡೆಯುವವರೆಗೂ ಕಾಗೆಯು ಒಂದು ಮೂಲೆಯಲ್ಲಿ ಕುಳಿತಿತ್ತು. “ಕೊಳಕನಾದ ಗೂಬೆಯು ದೊರೆಯಾಗುವುದೆಂದರೇನು?” ಎಂದು ಎಲ್ಲರಿಗೂ ಅಸಹ್ಯವಾಗಿತ್ತು. ಆದರೂ ಮಾತನಾಡದೆ ಎಲ್ಲರೂ ಸುಮ್ಮನಿದ್ದರು. ಆಗ ಕಾಗೆಯು ಎದ್ದು ನಿಂತುಕೊಂಡು “ಸ್ವಾಮಿ! ಕೊಂಚ ತಡೆಯಿರಿ. ಗೂಬೆಯನ್ನು ಎಲ್ಲರೂ ಕೊಂಚ ಕಣ್ಣಿಟ್ಟು ನೋಡಿರಿ. ಜಗತ್ತಿನಲ್ಲಿ ಇಂತಹ ಕೊಳಕು ಹಕ್ಕಿಯು ಇನ್ನು ಉಂಟೆ? ಮುಖವನ್ನು ತೊಳೆದು ಎಷ್ಟು ದಿವಸವಾಯಿತೋ? ಮೈಯ್ಯನ್ನು ತೊಳೆವುದಂತೂ ಉಂಟೋ ಇಲ್ಲವೇ ಇಲ್ಲವೋ? ಆ ಕಣ್ಣುಗಳನ್ನು ನೋಡಿ. ಜಿಬರು ಗುಡ್ಡೆ ಗುಡ್ಡೆಯಾಗಿದೆ. ಮೂಗು ನೋಡಿ. ಸಿಂಬಳವು ಹರಿಯುತ್ತಿದೆ. ಇಂತಹ ಶೊಬಚನನ್ನು ಅರಸಾಗಿ ಮಾಡಿಕೊಂಡರೆ ಎಲ್ಲರೂ ನಗುವರು. ಅತ್ತ ನೋಡಿ. ಶುಚಿವಂತನಾದ ಗರುಡನು ಕುಳಿತಿರುವನು. ಯಾವಾಗ ನೋಡಿದರೂ ಮಡಿಯಾಗಿಯೇ ಇರುವನು. ಆತನನ್ನು ನೋಡಿದರೆ ಎಷ್ಟು ಸಂತೋಷವಾಗುವುದು! ಆತನ ಶುಚಿಯನ್ನು ನೋಡಿಯೇ ಭಗವಂತನಾದ ವಿಷ್ಣುವೂ ಆತನನ್ನು ಮೆಚ್ಚಿಕೊಂಡಿರುವನು. ಆತನನ್ನೇ ದೊರೆಯನ್ನು ಮಾಡಬೇಕು. ಈ ಕೊಳಕನನ್ನು ಹೊರಕ್ಕೆ ನೂಕಬೇಕು” ಎಂದಿತು. ಉಳಿದ ಹಕ್ಕಿಗಳು “ಹೌದು. ಗೂಬೆಯನ್ನು ನೂಕಿ. ಗರುಡನಿಗೇ ಪಟ್ಟಿಕಟ್ಟರಿ” ಎಂದವು. ಎಲ್ಲರೂ ಸೇರಿ ಹಾಗೆಯೇ ಮಾಡಿದರು. ಅರಸುತನವು ಗೂಬೆಗೆ ತಪ್ಪಿ ಗರುಡನಿಗೇ ಆಯಿತು.

“ತನ್ನ ಕೊಳಕುತನದಿಂದ ದೊರೆತನವನ್ನು ತಪ್ಪಿಸಿಕೂಂಡನು” ಎಂದು ಎಲ್ಲರೂ ಹಾಸ್ಯ ಮಾಡುವರು ಎಂದೋ ಏನೋ, ಗೂಬೆಯು ಈಗಲೂ ಹಗಲಿನಲ್ಲಿ ಹೊರಗೆ ಬರುವುದಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವಚ್ಛ ಭಾರತ್
Next post ಏ ಕ್ರೂರಿ ಹೆಣ್ಣೆ ತುಸು ಕಿವಿಗೊಡು ವಿವೇಕಕ್ಕೆ

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

cheap jordans|wholesale air max|wholesale jordans|wholesale jewelry|wholesale jerseys