ಗರುಡನೂ ಗೂಬೆಯೂ

ಗರುಡನೂ ಗೂಬೆಯೂ

ಒಬ್ಬ ರಾಜನನ್ನು ಆರಿಸಿಕೊಳ್ಳಬೇಕೆಂದು ಹಕ್ಕಿಗಳೆಲ್ಲವೂ ಸಭೆ ಸೇರಿದವು. ಗೂಬೆಯು ಅವರಿವರಿಗೆ ಲಂಚಕೂಟ್ಟು, “ನನ್ನನ್ನು ದೊರೆಯನ್ನು ಮಾಡಿರಿ” ಎಂದು ಹೇಳಿಕೊಂಡಿತು. ಲಂಚವನ್ನು ತೆಗಿದುಕೊಂಡಿದ್ದ ಹಕ್ಕಿಗಳೆಲ್ಲವೂ ನಮಗೆ “ಗೂಬೆಯೇ ಆರಸಾಗಬೇಕು” ಎಂದವು.

ಇದೆಲ್ಲಾ ನಡೆಯುವವರೆಗೂ ಕಾಗೆಯು ಒಂದು ಮೂಲೆಯಲ್ಲಿ ಕುಳಿತಿತ್ತು. “ಕೊಳಕನಾದ ಗೂಬೆಯು ದೊರೆಯಾಗುವುದೆಂದರೇನು?” ಎಂದು ಎಲ್ಲರಿಗೂ ಅಸಹ್ಯವಾಗಿತ್ತು. ಆದರೂ ಮಾತನಾಡದೆ ಎಲ್ಲರೂ ಸುಮ್ಮನಿದ್ದರು. ಆಗ ಕಾಗೆಯು ಎದ್ದು ನಿಂತುಕೊಂಡು “ಸ್ವಾಮಿ! ಕೊಂಚ ತಡೆಯಿರಿ. ಗೂಬೆಯನ್ನು ಎಲ್ಲರೂ ಕೊಂಚ ಕಣ್ಣಿಟ್ಟು ನೋಡಿರಿ. ಜಗತ್ತಿನಲ್ಲಿ ಇಂತಹ ಕೊಳಕು ಹಕ್ಕಿಯು ಇನ್ನು ಉಂಟೆ? ಮುಖವನ್ನು ತೊಳೆದು ಎಷ್ಟು ದಿವಸವಾಯಿತೋ? ಮೈಯ್ಯನ್ನು ತೊಳೆವುದಂತೂ ಉಂಟೋ ಇಲ್ಲವೇ ಇಲ್ಲವೋ? ಆ ಕಣ್ಣುಗಳನ್ನು ನೋಡಿ. ಜಿಬರು ಗುಡ್ಡೆ ಗುಡ್ಡೆಯಾಗಿದೆ. ಮೂಗು ನೋಡಿ. ಸಿಂಬಳವು ಹರಿಯುತ್ತಿದೆ. ಇಂತಹ ಶೊಬಚನನ್ನು ಅರಸಾಗಿ ಮಾಡಿಕೊಂಡರೆ ಎಲ್ಲರೂ ನಗುವರು. ಅತ್ತ ನೋಡಿ. ಶುಚಿವಂತನಾದ ಗರುಡನು ಕುಳಿತಿರುವನು. ಯಾವಾಗ ನೋಡಿದರೂ ಮಡಿಯಾಗಿಯೇ ಇರುವನು. ಆತನನ್ನು ನೋಡಿದರೆ ಎಷ್ಟು ಸಂತೋಷವಾಗುವುದು! ಆತನ ಶುಚಿಯನ್ನು ನೋಡಿಯೇ ಭಗವಂತನಾದ ವಿಷ್ಣುವೂ ಆತನನ್ನು ಮೆಚ್ಚಿಕೊಂಡಿರುವನು. ಆತನನ್ನೇ ದೊರೆಯನ್ನು ಮಾಡಬೇಕು. ಈ ಕೊಳಕನನ್ನು ಹೊರಕ್ಕೆ ನೂಕಬೇಕು” ಎಂದಿತು. ಉಳಿದ ಹಕ್ಕಿಗಳು “ಹೌದು. ಗೂಬೆಯನ್ನು ನೂಕಿ. ಗರುಡನಿಗೇ ಪಟ್ಟಿಕಟ್ಟರಿ” ಎಂದವು. ಎಲ್ಲರೂ ಸೇರಿ ಹಾಗೆಯೇ ಮಾಡಿದರು. ಅರಸುತನವು ಗೂಬೆಗೆ ತಪ್ಪಿ ಗರುಡನಿಗೇ ಆಯಿತು.

“ತನ್ನ ಕೊಳಕುತನದಿಂದ ದೊರೆತನವನ್ನು ತಪ್ಪಿಸಿಕೂಂಡನು” ಎಂದು ಎಲ್ಲರೂ ಹಾಸ್ಯ ಮಾಡುವರು ಎಂದೋ ಏನೋ, ಗೂಬೆಯು ಈಗಲೂ ಹಗಲಿನಲ್ಲಿ ಹೊರಗೆ ಬರುವುದಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವಚ್ಛ ಭಾರತ್
Next post ಏ ಕ್ರೂರಿ ಹೆಣ್ಣೆ ತುಸು ಕಿವಿಗೊಡು ವಿವೇಕಕ್ಕೆ

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…