Home / ಬಾಲ ಚಿಲುಮೆ / ಕಥೆ / ಗರುಡನೂ ಗೂಬೆಯೂ

ಗರುಡನೂ ಗೂಬೆಯೂ

ಒಬ್ಬ ರಾಜನನ್ನು ಆರಿಸಿಕೊಳ್ಳಬೇಕೆಂದು ಹಕ್ಕಿಗಳೆಲ್ಲವೂ ಸಭೆ ಸೇರಿದವು. ಗೂಬೆಯು ಅವರಿವರಿಗೆ ಲಂಚಕೂಟ್ಟು, “ನನ್ನನ್ನು ದೊರೆಯನ್ನು ಮಾಡಿರಿ” ಎಂದು ಹೇಳಿಕೊಂಡಿತು. ಲಂಚವನ್ನು ತೆಗಿದುಕೊಂಡಿದ್ದ ಹಕ್ಕಿಗಳೆಲ್ಲವೂ ನಮಗೆ “ಗೂಬೆಯೇ ಆರಸಾಗಬೇಕು” ಎಂದವು.

ಇದೆಲ್ಲಾ ನಡೆಯುವವರೆಗೂ ಕಾಗೆಯು ಒಂದು ಮೂಲೆಯಲ್ಲಿ ಕುಳಿತಿತ್ತು. “ಕೊಳಕನಾದ ಗೂಬೆಯು ದೊರೆಯಾಗುವುದೆಂದರೇನು?” ಎಂದು ಎಲ್ಲರಿಗೂ ಅಸಹ್ಯವಾಗಿತ್ತು. ಆದರೂ ಮಾತನಾಡದೆ ಎಲ್ಲರೂ ಸುಮ್ಮನಿದ್ದರು. ಆಗ ಕಾಗೆಯು ಎದ್ದು ನಿಂತುಕೊಂಡು “ಸ್ವಾಮಿ! ಕೊಂಚ ತಡೆಯಿರಿ. ಗೂಬೆಯನ್ನು ಎಲ್ಲರೂ ಕೊಂಚ ಕಣ್ಣಿಟ್ಟು ನೋಡಿರಿ. ಜಗತ್ತಿನಲ್ಲಿ ಇಂತಹ ಕೊಳಕು ಹಕ್ಕಿಯು ಇನ್ನು ಉಂಟೆ? ಮುಖವನ್ನು ತೊಳೆದು ಎಷ್ಟು ದಿವಸವಾಯಿತೋ? ಮೈಯ್ಯನ್ನು ತೊಳೆವುದಂತೂ ಉಂಟೋ ಇಲ್ಲವೇ ಇಲ್ಲವೋ? ಆ ಕಣ್ಣುಗಳನ್ನು ನೋಡಿ. ಜಿಬರು ಗುಡ್ಡೆ ಗುಡ್ಡೆಯಾಗಿದೆ. ಮೂಗು ನೋಡಿ. ಸಿಂಬಳವು ಹರಿಯುತ್ತಿದೆ. ಇಂತಹ ಶೊಬಚನನ್ನು ಅರಸಾಗಿ ಮಾಡಿಕೊಂಡರೆ ಎಲ್ಲರೂ ನಗುವರು. ಅತ್ತ ನೋಡಿ. ಶುಚಿವಂತನಾದ ಗರುಡನು ಕುಳಿತಿರುವನು. ಯಾವಾಗ ನೋಡಿದರೂ ಮಡಿಯಾಗಿಯೇ ಇರುವನು. ಆತನನ್ನು ನೋಡಿದರೆ ಎಷ್ಟು ಸಂತೋಷವಾಗುವುದು! ಆತನ ಶುಚಿಯನ್ನು ನೋಡಿಯೇ ಭಗವಂತನಾದ ವಿಷ್ಣುವೂ ಆತನನ್ನು ಮೆಚ್ಚಿಕೊಂಡಿರುವನು. ಆತನನ್ನೇ ದೊರೆಯನ್ನು ಮಾಡಬೇಕು. ಈ ಕೊಳಕನನ್ನು ಹೊರಕ್ಕೆ ನೂಕಬೇಕು” ಎಂದಿತು. ಉಳಿದ ಹಕ್ಕಿಗಳು “ಹೌದು. ಗೂಬೆಯನ್ನು ನೂಕಿ. ಗರುಡನಿಗೇ ಪಟ್ಟಿಕಟ್ಟರಿ” ಎಂದವು. ಎಲ್ಲರೂ ಸೇರಿ ಹಾಗೆಯೇ ಮಾಡಿದರು. ಅರಸುತನವು ಗೂಬೆಗೆ ತಪ್ಪಿ ಗರುಡನಿಗೇ ಆಯಿತು.

“ತನ್ನ ಕೊಳಕುತನದಿಂದ ದೊರೆತನವನ್ನು ತಪ್ಪಿಸಿಕೂಂಡನು” ಎಂದು ಎಲ್ಲರೂ ಹಾಸ್ಯ ಮಾಡುವರು ಎಂದೋ ಏನೋ, ಗೂಬೆಯು ಈಗಲೂ ಹಗಲಿನಲ್ಲಿ ಹೊರಗೆ ಬರುವುದಿಲ್ಲ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...