Home / ಬಾಲ ಚಿಲುಮೆ / ಕಥೆ / ಗರುಡನೂ ಗೂಬೆಯೂ

ಗರುಡನೂ ಗೂಬೆಯೂ

ಒಬ್ಬ ರಾಜನನ್ನು ಆರಿಸಿಕೊಳ್ಳಬೇಕೆಂದು ಹಕ್ಕಿಗಳೆಲ್ಲವೂ ಸಭೆ ಸೇರಿದವು. ಗೂಬೆಯು ಅವರಿವರಿಗೆ ಲಂಚಕೂಟ್ಟು, “ನನ್ನನ್ನು ದೊರೆಯನ್ನು ಮಾಡಿರಿ” ಎಂದು ಹೇಳಿಕೊಂಡಿತು. ಲಂಚವನ್ನು ತೆಗಿದುಕೊಂಡಿದ್ದ ಹಕ್ಕಿಗಳೆಲ್ಲವೂ ನಮಗೆ “ಗೂಬೆಯೇ ಆರಸಾಗಬೇಕು” ಎಂದವು.

ಇದೆಲ್ಲಾ ನಡೆಯುವವರೆಗೂ ಕಾಗೆಯು ಒಂದು ಮೂಲೆಯಲ್ಲಿ ಕುಳಿತಿತ್ತು. “ಕೊಳಕನಾದ ಗೂಬೆಯು ದೊರೆಯಾಗುವುದೆಂದರೇನು?” ಎಂದು ಎಲ್ಲರಿಗೂ ಅಸಹ್ಯವಾಗಿತ್ತು. ಆದರೂ ಮಾತನಾಡದೆ ಎಲ್ಲರೂ ಸುಮ್ಮನಿದ್ದರು. ಆಗ ಕಾಗೆಯು ಎದ್ದು ನಿಂತುಕೊಂಡು “ಸ್ವಾಮಿ! ಕೊಂಚ ತಡೆಯಿರಿ. ಗೂಬೆಯನ್ನು ಎಲ್ಲರೂ ಕೊಂಚ ಕಣ್ಣಿಟ್ಟು ನೋಡಿರಿ. ಜಗತ್ತಿನಲ್ಲಿ ಇಂತಹ ಕೊಳಕು ಹಕ್ಕಿಯು ಇನ್ನು ಉಂಟೆ? ಮುಖವನ್ನು ತೊಳೆದು ಎಷ್ಟು ದಿವಸವಾಯಿತೋ? ಮೈಯ್ಯನ್ನು ತೊಳೆವುದಂತೂ ಉಂಟೋ ಇಲ್ಲವೇ ಇಲ್ಲವೋ? ಆ ಕಣ್ಣುಗಳನ್ನು ನೋಡಿ. ಜಿಬರು ಗುಡ್ಡೆ ಗುಡ್ಡೆಯಾಗಿದೆ. ಮೂಗು ನೋಡಿ. ಸಿಂಬಳವು ಹರಿಯುತ್ತಿದೆ. ಇಂತಹ ಶೊಬಚನನ್ನು ಅರಸಾಗಿ ಮಾಡಿಕೊಂಡರೆ ಎಲ್ಲರೂ ನಗುವರು. ಅತ್ತ ನೋಡಿ. ಶುಚಿವಂತನಾದ ಗರುಡನು ಕುಳಿತಿರುವನು. ಯಾವಾಗ ನೋಡಿದರೂ ಮಡಿಯಾಗಿಯೇ ಇರುವನು. ಆತನನ್ನು ನೋಡಿದರೆ ಎಷ್ಟು ಸಂತೋಷವಾಗುವುದು! ಆತನ ಶುಚಿಯನ್ನು ನೋಡಿಯೇ ಭಗವಂತನಾದ ವಿಷ್ಣುವೂ ಆತನನ್ನು ಮೆಚ್ಚಿಕೊಂಡಿರುವನು. ಆತನನ್ನೇ ದೊರೆಯನ್ನು ಮಾಡಬೇಕು. ಈ ಕೊಳಕನನ್ನು ಹೊರಕ್ಕೆ ನೂಕಬೇಕು” ಎಂದಿತು. ಉಳಿದ ಹಕ್ಕಿಗಳು “ಹೌದು. ಗೂಬೆಯನ್ನು ನೂಕಿ. ಗರುಡನಿಗೇ ಪಟ್ಟಿಕಟ್ಟರಿ” ಎಂದವು. ಎಲ್ಲರೂ ಸೇರಿ ಹಾಗೆಯೇ ಮಾಡಿದರು. ಅರಸುತನವು ಗೂಬೆಗೆ ತಪ್ಪಿ ಗರುಡನಿಗೇ ಆಯಿತು.

“ತನ್ನ ಕೊಳಕುತನದಿಂದ ದೊರೆತನವನ್ನು ತಪ್ಪಿಸಿಕೂಂಡನು” ಎಂದು ಎಲ್ಲರೂ ಹಾಸ್ಯ ಮಾಡುವರು ಎಂದೋ ಏನೋ, ಗೂಬೆಯು ಈಗಲೂ ಹಗಲಿನಲ್ಲಿ ಹೊರಗೆ ಬರುವುದಿಲ್ಲ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...