Home / ಕವನ / ಕವಿತೆ / ಅರಿಷಿಣ ಹಚ್ಚೂ ಹಾಡು – ೧

ಅರಿಷಿಣ ಹಚ್ಚೂ ಹಾಡು – ೧

ದೇವ ದೇವರೆಣ್ಣಿ ಯಾವ ದೇವರೆಣ್ಣಿ|
ಮನಿಯ ದೇವಽರ ಮೊದಲೆಣ್ಣಿ|
ಹರಹರ ನಮ ಸಿವಗ ನೆಯ್ಯೆಣೆ ||೧||

ಬಾಲಽಗೆಣ್ಣಿ ಹಚ್ಚೊಟಿಗೆ ಬಾಗಿಲಿಗೆ ಬಿಸಿಲ್ಬಂದ|
ನಾಲ್ವತ್ತ್ವಾಟಽದ ಎಲಿ ಬಂದ| ಹರಹರ…. ||೨||

ಕಂದಽಗೆಣ್ಣಿ ಹೆಚ್ಚೊಟಿಗೆ ಅಂಗಳಕ ಬಿಸಿಲ್ಬಂದ|
ಐವತ್ತ್ವಾಟಽದ ಎಲಿ ಬಂದ| ಹರಹರ…. ||೩||

ನೀರಿಲ್ಲಽದಂಗಳಾಗ ನೀರ್‍ಯಾಕನಾಗ್ಯಾವ|
ಊರಿಗಿ ದೊಡ್ಡವರ ಮಗ ಮಿಂದ| ಹರಹರ…. ||೪||

ಕೆಸರಿಲ್ಲದಂಗಳಾಗ ಕೆಸರ್‍ಯಾಕನಾಗ್ಯಾವ|
ಹೆಸರಿಗಿ ದೊಡ್ಡವರ ಮಗ ಮಿಂದ| ಹರಹರ…. ||೫||

ಹೆಸರಿಽಗಿ ದೊಡ್ಡವರ ಮಗ ಮಿಂದ ತಮ್ಮಗ।
ಹಸರ ಪಲ್ಲಕ್ಕಿ ನೆರಳಾಗಿ| ಹೆರಹರ…. ||೬||
*****

ಅರಿಸಿಣ ಹಚ್ಚುವುದು ಲಗ್ನದ ಕಾಲದಲ್ಲಿ ಪ್ರಥಮದೀಕ್ಷೆಯುತಿರುವುದು. ವರನಿಗೆ ಅರಿಷಿಣ ಹಚ್ಚುವಾಗ ಇದನ್ನು ಹಾಡುತ್ತಾರೆ. ಆಗ ಮುತ್ತೈದೆಯರು ನೆರೆದು ಹಾಡುತ್ತ, ವರನ ತಲೆಗೆ ವೀಳ್ಯದ ಎಲೆಯಿಂದ ಎಣ್ಣೆಯನ್ನು ಹಚ್ಚಿ, ಮೈಗೆ ಅರಿಸಿಣವನ್ನು ಬಳಿದು, ಸ್ನಾನ ಮಾಡಿಸುವರು.

ಛಂದಸ್ಸು:- ತ್ರಿಪದಿಯ ಪೂರ್ವಾರ್ಧ.

ಶಬ್ದಪ್ರಯೋಗಗಳು:- ನಮ ಶಿವರ್=ನಮ್ಮ ಮದುಮಗನಿಗೆ. ನೆಯ್ಯೆಣ್ಣೆ=ಸ್ನಿಗ್ಧವಾದ ಎಣ್ಣೆ. ಹೆಚ್ಚೊಟಿಗೆ=ಹಚ್ಚುವಷ್ಟರಲ್ಲಿ. ತ್ವಾಟ=ತೋಟ.ಎಲಿ=ವೀಳ್ಯದ ಎಲೆ. ನೀರ್ಯಾಕನಾಗ್ಯಾವ=ನೀರೇಕೆ ಆಗಿವೆ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...