Home / ಕವನ / ಕವಿತೆ / ಅರಿಷಿಣ ಹಚ್ಚೂ ಹಾಡು – ೧

ಅರಿಷಿಣ ಹಚ್ಚೂ ಹಾಡು – ೧

ದೇವ ದೇವರೆಣ್ಣಿ ಯಾವ ದೇವರೆಣ್ಣಿ|
ಮನಿಯ ದೇವಽರ ಮೊದಲೆಣ್ಣಿ|
ಹರಹರ ನಮ ಸಿವಗ ನೆಯ್ಯೆಣೆ ||೧||

ಬಾಲಽಗೆಣ್ಣಿ ಹಚ್ಚೊಟಿಗೆ ಬಾಗಿಲಿಗೆ ಬಿಸಿಲ್ಬಂದ|
ನಾಲ್ವತ್ತ್ವಾಟಽದ ಎಲಿ ಬಂದ| ಹರಹರ…. ||೨||

ಕಂದಽಗೆಣ್ಣಿ ಹೆಚ್ಚೊಟಿಗೆ ಅಂಗಳಕ ಬಿಸಿಲ್ಬಂದ|
ಐವತ್ತ್ವಾಟಽದ ಎಲಿ ಬಂದ| ಹರಹರ…. ||೩||

ನೀರಿಲ್ಲಽದಂಗಳಾಗ ನೀರ್‍ಯಾಕನಾಗ್ಯಾವ|
ಊರಿಗಿ ದೊಡ್ಡವರ ಮಗ ಮಿಂದ| ಹರಹರ…. ||೪||

ಕೆಸರಿಲ್ಲದಂಗಳಾಗ ಕೆಸರ್‍ಯಾಕನಾಗ್ಯಾವ|
ಹೆಸರಿಗಿ ದೊಡ್ಡವರ ಮಗ ಮಿಂದ| ಹರಹರ…. ||೫||

ಹೆಸರಿಽಗಿ ದೊಡ್ಡವರ ಮಗ ಮಿಂದ ತಮ್ಮಗ।
ಹಸರ ಪಲ್ಲಕ್ಕಿ ನೆರಳಾಗಿ| ಹೆರಹರ…. ||೬||
*****

ಅರಿಸಿಣ ಹಚ್ಚುವುದು ಲಗ್ನದ ಕಾಲದಲ್ಲಿ ಪ್ರಥಮದೀಕ್ಷೆಯುತಿರುವುದು. ವರನಿಗೆ ಅರಿಷಿಣ ಹಚ್ಚುವಾಗ ಇದನ್ನು ಹಾಡುತ್ತಾರೆ. ಆಗ ಮುತ್ತೈದೆಯರು ನೆರೆದು ಹಾಡುತ್ತ, ವರನ ತಲೆಗೆ ವೀಳ್ಯದ ಎಲೆಯಿಂದ ಎಣ್ಣೆಯನ್ನು ಹಚ್ಚಿ, ಮೈಗೆ ಅರಿಸಿಣವನ್ನು ಬಳಿದು, ಸ್ನಾನ ಮಾಡಿಸುವರು.

ಛಂದಸ್ಸು:- ತ್ರಿಪದಿಯ ಪೂರ್ವಾರ್ಧ.

ಶಬ್ದಪ್ರಯೋಗಗಳು:- ನಮ ಶಿವರ್=ನಮ್ಮ ಮದುಮಗನಿಗೆ. ನೆಯ್ಯೆಣ್ಣೆ=ಸ್ನಿಗ್ಧವಾದ ಎಣ್ಣೆ. ಹೆಚ್ಚೊಟಿಗೆ=ಹಚ್ಚುವಷ್ಟರಲ್ಲಿ. ತ್ವಾಟ=ತೋಟ.ಎಲಿ=ವೀಳ್ಯದ ಎಲೆ. ನೀರ್ಯಾಕನಾಗ್ಯಾವ=ನೀರೇಕೆ ಆಗಿವೆ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...