Home / ಕವನ / ಕವಿತೆ / ಅರಿಷಿಣ ಹಚ್ಚೂ ಹಾಡು – ೧

ಅರಿಷಿಣ ಹಚ್ಚೂ ಹಾಡು – ೧

ದೇವ ದೇವರೆಣ್ಣಿ ಯಾವ ದೇವರೆಣ್ಣಿ|
ಮನಿಯ ದೇವಽರ ಮೊದಲೆಣ್ಣಿ|
ಹರಹರ ನಮ ಸಿವಗ ನೆಯ್ಯೆಣೆ ||೧||

ಬಾಲಽಗೆಣ್ಣಿ ಹಚ್ಚೊಟಿಗೆ ಬಾಗಿಲಿಗೆ ಬಿಸಿಲ್ಬಂದ|
ನಾಲ್ವತ್ತ್ವಾಟಽದ ಎಲಿ ಬಂದ| ಹರಹರ…. ||೨||

ಕಂದಽಗೆಣ್ಣಿ ಹೆಚ್ಚೊಟಿಗೆ ಅಂಗಳಕ ಬಿಸಿಲ್ಬಂದ|
ಐವತ್ತ್ವಾಟಽದ ಎಲಿ ಬಂದ| ಹರಹರ…. ||೩||

ನೀರಿಲ್ಲಽದಂಗಳಾಗ ನೀರ್‍ಯಾಕನಾಗ್ಯಾವ|
ಊರಿಗಿ ದೊಡ್ಡವರ ಮಗ ಮಿಂದ| ಹರಹರ…. ||೪||

ಕೆಸರಿಲ್ಲದಂಗಳಾಗ ಕೆಸರ್‍ಯಾಕನಾಗ್ಯಾವ|
ಹೆಸರಿಗಿ ದೊಡ್ಡವರ ಮಗ ಮಿಂದ| ಹರಹರ…. ||೫||

ಹೆಸರಿಽಗಿ ದೊಡ್ಡವರ ಮಗ ಮಿಂದ ತಮ್ಮಗ।
ಹಸರ ಪಲ್ಲಕ್ಕಿ ನೆರಳಾಗಿ| ಹೆರಹರ…. ||೬||
*****

ಅರಿಸಿಣ ಹಚ್ಚುವುದು ಲಗ್ನದ ಕಾಲದಲ್ಲಿ ಪ್ರಥಮದೀಕ್ಷೆಯುತಿರುವುದು. ವರನಿಗೆ ಅರಿಷಿಣ ಹಚ್ಚುವಾಗ ಇದನ್ನು ಹಾಡುತ್ತಾರೆ. ಆಗ ಮುತ್ತೈದೆಯರು ನೆರೆದು ಹಾಡುತ್ತ, ವರನ ತಲೆಗೆ ವೀಳ್ಯದ ಎಲೆಯಿಂದ ಎಣ್ಣೆಯನ್ನು ಹಚ್ಚಿ, ಮೈಗೆ ಅರಿಸಿಣವನ್ನು ಬಳಿದು, ಸ್ನಾನ ಮಾಡಿಸುವರು.

ಛಂದಸ್ಸು:- ತ್ರಿಪದಿಯ ಪೂರ್ವಾರ್ಧ.

ಶಬ್ದಪ್ರಯೋಗಗಳು:- ನಮ ಶಿವರ್=ನಮ್ಮ ಮದುಮಗನಿಗೆ. ನೆಯ್ಯೆಣ್ಣೆ=ಸ್ನಿಗ್ಧವಾದ ಎಣ್ಣೆ. ಹೆಚ್ಚೊಟಿಗೆ=ಹಚ್ಚುವಷ್ಟರಲ್ಲಿ. ತ್ವಾಟ=ತೋಟ.ಎಲಿ=ವೀಳ್ಯದ ಎಲೆ. ನೀರ್ಯಾಕನಾಗ್ಯಾವ=ನೀರೇಕೆ ಆಗಿವೆ.

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...