ಸುಗ್ಗಿ ಪದ – ಜಾಗಡಿ ಪದ

ಅತಾಳ ಪಾತಾಳ ಸಾತಾಳ ರಸತಾಳ
ಭೂತಾಳದೊಳಗೊಂದು ಶಶಿ ಹುಟ್ಟಿ ಕೋಲೇ || ೧ ||

ಭೂತಾಳದೊಳಗೊಂದು ಶಶಿ ಹುಟ್ಟಿ
ಪಾತಾಳಕೆ ಬೇರೂ ಜಿಗಿದಾವೂ ಕೋಲೇ || ೨ ||

ಪಾತಾಳಕೆ ಬೇರೂ ಜಿಗಿದಾವಾ ಶಶಿಯಲ್ಲಿ
ಆಕಾಶಕೆ ಸೈವಾಗಿ ನೆಗುದಾವೇ ಕೋಲೇ || ೩ ||

ಆಕಾಶಕೆ ಸೈವಾಗಿ ನೆಗುದೀತಾ ಶಶೀ
ವೃಕ್ಷವೆಂಬ ಹೆಸರೂ ಬಂದೀತು ಕೋಲೇ || ೪ ||

ವೃಕ್ಷವೆಂಬ ಹೆಸರೂ ಬಂದೀತಾ ಶಶೀಗೇ
ಕಾಯಿ ಹಣ್ಣಾಗಿ ಬೆಳುಗೀತು ಕೋಲೇ || ೫ ||

ಕಾಯಿ ಹಣ್ಣಾಗಿ ಬೆಳುಗಿತಾ ವೃಕ್ಷಕ್ಕೆ
ನೂರ್ವೊಂದು ಕಪಿಗಳು ಯೆರುಗಾವೆ ಕೋಲೇ || ೬ ||

ನೂರ್ವೊಂದು ಕಪಿಗಳು ಯೆರುಗಾವಾ ವೃಕ್ಷಕ್ಕೆ
ಭೂಮೀಗ್ವೊಂದು ಹೆಗಲೂ ಯೆರುಗಾವೆ ಕೋಲೇ || ೭ ||

ಭೂಮೀಗ್ವೊಂದು ಹೆಗಲೂ ಯೆರುಗಾವಾ ವೃಕ್ಷಕ್ಕೆ
ಆಚೇರಿ ತಿಮ್ಮಣ್ಣ ಕಡುತಂದಾ ಕೋಲೇ || ೮ ||

ಆಚೇರಿ ತಿಮ್ಮಣ್ಣ ಕಡುತಂದಾ ಹೆಗಲಾ
ಗುಡುಗಾರ ಬೊಮ್ಮಣ್ಣ ಪಡತಿಕೆತ್ತಿದ ಕೋಲೇ || ೯ ||

ಪಡತಿಕೆತ್ತಿ ಬೆಳಗಿಟ್ಟ ಕೋಲಿಗೆ
ಹೊನೆ ಮಾಣ ದೇವ್ರ ಮುಂದೆ ಮಡುಗಿದರು ಕೋಲೇ || ೧೦ ||

ಹೊನೆ ಮಾಣ ದೇವ್ರ ಮುಂದೆ ಮಡಗೀದಾ ಕೋಲಿಗೆ
ಗಂದಾ ಹೂವನ್ನೆ ಪೂಸಿದರು ಕೋಲೇ || ೧೧ ||

ಗಂದಾ ಹೂವನ್ನೆ ಪೂಸಿದಾ ಕೋಲಿಗೆ
ಹಣ್ಣುವೀಳ್ಯಾವಾ ಇಟ್ಟಿದರು ಕೋಲೇ || ೧೨ ||

ಹಣ್ಣುವೀಳ್ಯಾವಾ ಇಟ್ಟಿದಾ ಕೋಲಿಗೆ
ಕಾಯೊಡದಿ ಕಯ್ಯಾ ಮುಗಿದಾರೂ ಕೋಲೇ || ೧೩ ||

ಕಾಯೊಡದಿ ಕಯ್ಯಾ ಮುಗಿದಾರಾ ಕೋಲಿಗೆ
ಮಂಗಳಾರತಿಯಾ ಬೆಳಗಿದರು ಕೋಲೇ || ೧೪ ||

ಮಲವಯ್ಯನೆಂಬವ ಮಾದೊಡ್ ಶೂರ
ಮಲವಯ್ಯನೆಂಬವ ಮಾದೊಡ್ ಶೂರನು ಕೋಲೇ || ೧೫ ||

ಉಟ್ಟಾ ಮೈಲಿಗೆಯಾ ತೆಗೆಯನು ತೊಳೆಯಾನು ಮಲವಯ್ಯ
ಉಂಡಾ ಯಂಳ್ಳಕೆ ಅಂಜನು ಕೋಲೇ || ೧೬ ||

ಮಲವಯ್ಯಾ ನೆಂಬವ ಮರಕೆ ಹಬ್ಬಿದ ಬಳ್ಳೀ
ಎಂದೀಗೂ ಬಳ್ಳಿ ಹರಿಯಾವು ಕೋಲೇ || ೧೭ ||

ಇಂದೀಗಾ ಬಳ್ಳಿ ಹರಿಯಾವು ಹುಸಿಯಾವು
ಇಂದೀಗಾ ಮರನಾ ಬಿಡಲಾರೆ ಕೋಲೇ || ೧೮ ||

ಮಲವಯ್ಯ ಮಲಗೂವ ಮಂಚಾದ ಕೋಲಿಗೆ
ಜಂತಾದವೆಂಬೂ ಬೊಂಬೇಗಳು ಕೋಲೇ || ೧೯ ||

ಜಂತಾದವೆಂಬೂ ಬೊಂಬೇಗಳು ಮಂಚಕ್ಕೆ
ಇಂದಿಗಾ ಮರನಾ ಬಿಡಲಾರೆ ಕೋಲೇ || ೨೦ ||

ಕೋಲಣ್ಣ ಗಂಗೀಗೂ ಕೋಲಣ್ಣ ಗೌರಿಗೂ
ಕೋಲು ಕೋಲೇನಾ ಕೋಲೆನ್ನ ಕೋಲೇ || ೨೧ ||

ಕಾಲೂ ಬಾಲಾ ಚಂದಾ ಮೇಲೇ ಹೆಗಲೂ ಚಂದಾ
ಬಾಲದಲ್ಲೀ ಚಂದಾ ಬಸುವಯ್ಯಾ ಕೋಲೇ || ೨೨ ||

ಬಾಲದಲ್ಲಿ ಚಂದಾ ಬಸವಯ್ಯಾನಾ ಪಾದಕ್ಕೆ
ಹಣ್ಣುವೀಳ್ಯಾ ಇಟ್ಟು ಶರಣೆಂಬೆ ಕೋಲೇ || ೨೩ ||

ಹಣ್ಣುವೀಳ್ಯಾ ಇಟ್ಟು ಏನಂದಿ ಶರಣಂಬೇ
ನಾವ ಮಾಡುವಾ ಕಾರ್ಯ ಜೀಯ ಎಂದು ಕೋಲೇ || ೨೪ ||

ಕಾಲು ಬಾಲಾ ಚಂದಾ ಮೇಲೆ ಪಾವ್ಡಾ ಚಂದಾ
ಬಾಲಾದಲ್ಲಿ ಚಂದಾ ಬಸುವಯ್ಯನ ಕೋಲೇ || ೨೫ ||

ಹಾಲಗಾಯೀ ವಡೂದೂ ಬಸವಯ್ಯನ ಪಾದಕ್ಕೆ
ಹಾಲಗಾಯೀ ವಡುದೂ ಶರಣಂಬೆ ಕೋಲೇ || ೨೬ ||

ಹಾಲಗಾಯೀ ವಡುದೂ ಏನಂದಿ ಶರಣಂಬೇ?
ನಾವ ಮಾಡೂವಾ ಕಾಯಕ ಜಂಬುವೆಂದೂ ಕೋಲೇ || ೨೭ ||

ಕಾಲೂ ಬಾಲಾ ಚಂದಾ ಮೇಲೇ ಶೊಂಬೂ ಚಂದಾ
ಬಾಲಾದಲ್ಲಿ ಚಂದಾ ಬಸುವಯ್ನ ಕೋಲೇ || ೨೮ ||

ಬಾಲಾದಲ್ಲಿ ಚಂದಾ ಬಸುವಯ್ನ ಪಾದಕ್ಕೆ
ಮಂಗಲಾರತಿಯಾ ಬೆಳಗಿರೇ ಕೋಲೇ || ೨೯ ||

ಮಂಗಲಾರತಿಯಾ ಬೆಳಗಿರೇ ಬಸುವಯ್ಯಗೇ
ನಾವು ಮಾಡುವಾ ಕಾರ್ಯಾ ಜಯವೆಂದೂ ಕೋಲೇ || ೩೦ ||
*****
ಹೇಳಿದವರು: ಶ್ರೀ ಮಂಜು ಬಡವ ನಾಯ್ಕ, ಹೊನ್ನಾಕುಳಿ, ೨೪/೧೦/೭೨

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಂತೆ ಪರಿವರ್ತನೆ ಜಗದ ನಿಯಮವೆಂದೊಡೆಂತು?
Next post ಹಾಡುಗಾರ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

cheap jordans|wholesale air max|wholesale jordans|wholesale jewelry|wholesale jerseys