Home / ಕವನ / ಕೋಲಾಟ / ಸುಗ್ಗಿ ಪದ – ಜಾಗಡಿ ಪದ

ಸುಗ್ಗಿ ಪದ – ಜಾಗಡಿ ಪದ

ಅತಾಳ ಪಾತಾಳ ಸಾತಾಳ ರಸತಾಳ
ಭೂತಾಳದೊಳಗೊಂದು ಶಶಿ ಹುಟ್ಟಿ ಕೋಲೇ || ೧ ||

ಭೂತಾಳದೊಳಗೊಂದು ಶಶಿ ಹುಟ್ಟಿ
ಪಾತಾಳಕೆ ಬೇರೂ ಜಿಗಿದಾವೂ ಕೋಲೇ || ೨ ||

ಪಾತಾಳಕೆ ಬೇರೂ ಜಿಗಿದಾವಾ ಶಶಿಯಲ್ಲಿ
ಆಕಾಶಕೆ ಸೈವಾಗಿ ನೆಗುದಾವೇ ಕೋಲೇ || ೩ ||

ಆಕಾಶಕೆ ಸೈವಾಗಿ ನೆಗುದೀತಾ ಶಶೀ
ವೃಕ್ಷವೆಂಬ ಹೆಸರೂ ಬಂದೀತು ಕೋಲೇ || ೪ ||

ವೃಕ್ಷವೆಂಬ ಹೆಸರೂ ಬಂದೀತಾ ಶಶೀಗೇ
ಕಾಯಿ ಹಣ್ಣಾಗಿ ಬೆಳುಗೀತು ಕೋಲೇ || ೫ ||

ಕಾಯಿ ಹಣ್ಣಾಗಿ ಬೆಳುಗಿತಾ ವೃಕ್ಷಕ್ಕೆ
ನೂರ್ವೊಂದು ಕಪಿಗಳು ಯೆರುಗಾವೆ ಕೋಲೇ || ೬ ||

ನೂರ್ವೊಂದು ಕಪಿಗಳು ಯೆರುಗಾವಾ ವೃಕ್ಷಕ್ಕೆ
ಭೂಮೀಗ್ವೊಂದು ಹೆಗಲೂ ಯೆರುಗಾವೆ ಕೋಲೇ || ೭ ||

ಭೂಮೀಗ್ವೊಂದು ಹೆಗಲೂ ಯೆರುಗಾವಾ ವೃಕ್ಷಕ್ಕೆ
ಆಚೇರಿ ತಿಮ್ಮಣ್ಣ ಕಡುತಂದಾ ಕೋಲೇ || ೮ ||

ಆಚೇರಿ ತಿಮ್ಮಣ್ಣ ಕಡುತಂದಾ ಹೆಗಲಾ
ಗುಡುಗಾರ ಬೊಮ್ಮಣ್ಣ ಪಡತಿಕೆತ್ತಿದ ಕೋಲೇ || ೯ ||

ಪಡತಿಕೆತ್ತಿ ಬೆಳಗಿಟ್ಟ ಕೋಲಿಗೆ
ಹೊನೆ ಮಾಣ ದೇವ್ರ ಮುಂದೆ ಮಡುಗಿದರು ಕೋಲೇ || ೧೦ ||

ಹೊನೆ ಮಾಣ ದೇವ್ರ ಮುಂದೆ ಮಡಗೀದಾ ಕೋಲಿಗೆ
ಗಂದಾ ಹೂವನ್ನೆ ಪೂಸಿದರು ಕೋಲೇ || ೧೧ ||

ಗಂದಾ ಹೂವನ್ನೆ ಪೂಸಿದಾ ಕೋಲಿಗೆ
ಹಣ್ಣುವೀಳ್ಯಾವಾ ಇಟ್ಟಿದರು ಕೋಲೇ || ೧೨ ||

ಹಣ್ಣುವೀಳ್ಯಾವಾ ಇಟ್ಟಿದಾ ಕೋಲಿಗೆ
ಕಾಯೊಡದಿ ಕಯ್ಯಾ ಮುಗಿದಾರೂ ಕೋಲೇ || ೧೩ ||

ಕಾಯೊಡದಿ ಕಯ್ಯಾ ಮುಗಿದಾರಾ ಕೋಲಿಗೆ
ಮಂಗಳಾರತಿಯಾ ಬೆಳಗಿದರು ಕೋಲೇ || ೧೪ ||

ಮಲವಯ್ಯನೆಂಬವ ಮಾದೊಡ್ ಶೂರ
ಮಲವಯ್ಯನೆಂಬವ ಮಾದೊಡ್ ಶೂರನು ಕೋಲೇ || ೧೫ ||

ಉಟ್ಟಾ ಮೈಲಿಗೆಯಾ ತೆಗೆಯನು ತೊಳೆಯಾನು ಮಲವಯ್ಯ
ಉಂಡಾ ಯಂಳ್ಳಕೆ ಅಂಜನು ಕೋಲೇ || ೧೬ ||

ಮಲವಯ್ಯಾ ನೆಂಬವ ಮರಕೆ ಹಬ್ಬಿದ ಬಳ್ಳೀ
ಎಂದೀಗೂ ಬಳ್ಳಿ ಹರಿಯಾವು ಕೋಲೇ || ೧೭ ||

ಇಂದೀಗಾ ಬಳ್ಳಿ ಹರಿಯಾವು ಹುಸಿಯಾವು
ಇಂದೀಗಾ ಮರನಾ ಬಿಡಲಾರೆ ಕೋಲೇ || ೧೮ ||

ಮಲವಯ್ಯ ಮಲಗೂವ ಮಂಚಾದ ಕೋಲಿಗೆ
ಜಂತಾದವೆಂಬೂ ಬೊಂಬೇಗಳು ಕೋಲೇ || ೧೯ ||

ಜಂತಾದವೆಂಬೂ ಬೊಂಬೇಗಳು ಮಂಚಕ್ಕೆ
ಇಂದಿಗಾ ಮರನಾ ಬಿಡಲಾರೆ ಕೋಲೇ || ೨೦ ||

ಕೋಲಣ್ಣ ಗಂಗೀಗೂ ಕೋಲಣ್ಣ ಗೌರಿಗೂ
ಕೋಲು ಕೋಲೇನಾ ಕೋಲೆನ್ನ ಕೋಲೇ || ೨೧ ||

ಕಾಲೂ ಬಾಲಾ ಚಂದಾ ಮೇಲೇ ಹೆಗಲೂ ಚಂದಾ
ಬಾಲದಲ್ಲೀ ಚಂದಾ ಬಸುವಯ್ಯಾ ಕೋಲೇ || ೨೨ ||

ಬಾಲದಲ್ಲಿ ಚಂದಾ ಬಸವಯ್ಯಾನಾ ಪಾದಕ್ಕೆ
ಹಣ್ಣುವೀಳ್ಯಾ ಇಟ್ಟು ಶರಣೆಂಬೆ ಕೋಲೇ || ೨೩ ||

ಹಣ್ಣುವೀಳ್ಯಾ ಇಟ್ಟು ಏನಂದಿ ಶರಣಂಬೇ
ನಾವ ಮಾಡುವಾ ಕಾರ್ಯ ಜೀಯ ಎಂದು ಕೋಲೇ || ೨೪ ||

ಕಾಲು ಬಾಲಾ ಚಂದಾ ಮೇಲೆ ಪಾವ್ಡಾ ಚಂದಾ
ಬಾಲಾದಲ್ಲಿ ಚಂದಾ ಬಸುವಯ್ಯನ ಕೋಲೇ || ೨೫ ||

ಹಾಲಗಾಯೀ ವಡೂದೂ ಬಸವಯ್ಯನ ಪಾದಕ್ಕೆ
ಹಾಲಗಾಯೀ ವಡುದೂ ಶರಣಂಬೆ ಕೋಲೇ || ೨೬ ||

ಹಾಲಗಾಯೀ ವಡುದೂ ಏನಂದಿ ಶರಣಂಬೇ?
ನಾವ ಮಾಡೂವಾ ಕಾಯಕ ಜಂಬುವೆಂದೂ ಕೋಲೇ || ೨೭ ||

ಕಾಲೂ ಬಾಲಾ ಚಂದಾ ಮೇಲೇ ಶೊಂಬೂ ಚಂದಾ
ಬಾಲಾದಲ್ಲಿ ಚಂದಾ ಬಸುವಯ್ನ ಕೋಲೇ || ೨೮ ||

ಬಾಲಾದಲ್ಲಿ ಚಂದಾ ಬಸುವಯ್ನ ಪಾದಕ್ಕೆ
ಮಂಗಲಾರತಿಯಾ ಬೆಳಗಿರೇ ಕೋಲೇ || ೨೯ ||

ಮಂಗಲಾರತಿಯಾ ಬೆಳಗಿರೇ ಬಸುವಯ್ಯಗೇ
ನಾವು ಮಾಡುವಾ ಕಾರ್ಯಾ ಜಯವೆಂದೂ ಕೋಲೇ || ೩೦ ||
*****
ಹೇಳಿದವರು: ಶ್ರೀ ಮಂಜು ಬಡವ ನಾಯ್ಕ, ಹೊನ್ನಾಕುಳಿ, ೨೪/೧೦/೭೨

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...