Home / ಕವನ / ಕೋಲಾಟ / ಶಿವರಾತ್ರಿ ದಿನದಲ್ಲಿ (ಸುಗ್ಗಿ ಕೋಲಾಟದ ಪದ)

ಶಿವರಾತ್ರಿ ದಿನದಲ್ಲಿ (ಸುಗ್ಗಿ ಕೋಲಾಟದ ಪದ)

ಪಾಂಡೋರೊಂದು ಮುರುದಂಗಾ ಲಿಡೀದಾರೋ
ನಾರಾಣ ತಾಲಾವ ಹಿಡಿದಾನೋ || ೧ ||

ಪಾರಾವತಿ ಲುರುಗೆಜ್ಜೇನ ಹಿಡಿದಾಲೋ
ಮೂಡಿನೊಂದು ಮುಂದಾಗೀ ನಡೆದಾರೋ || ೨ ||

ಮೂಡಿಗೊಂದು ಮೊಕುವಾಕೇ ನಿಂತಾರೋ
ಪಾಂಡೋ ರೊಂದು ಮುರುದಂಗಾನೇ ಹೊಡಿದಾರೋ || ೩ ||

ನಾರಾೖಣ ತಾಲಾನೇ ಹೊಡೆದಾನೋ
ಪಾರಾವತಿ ಲುರುಗೆಜ್ಜೇನ ಕಟ್ಟಗಿಲೋ || ೪ ||

ದೇವತೆಗೋಲ ಕುಂಜಾನೇ ಹಿಡಿದಾರೋ
ಬಲಿಂದರಾಯ ಹೊಯ್ಲನೇ ಹೊಡೆದಾನೋ || ೫ ||

ಯೇಲೂ ಹಗಲೂ ಯೇಲು ದಾತರೇ ಕೊನಿದಾರೋ
ನೋಡ ಗುಡ್ಡೇ ಗುಡ್ಡೆ ಕಲ್ಲೇ ಯೆಲ್ಲಾವ ನಡ್ಸುವಾಗೇ || ೬ ||

ಗುಡ್ಡೆಮೇನೆ ಮರುಗಾದಿ ಗೋಳೆಲ್ಲಾ
ನೋಡೆ ಹುಲ್ಲೂನೀರು ತಾವೇಯ ಬಿಡುವಾಗೇ || ೭ ||

ಆಕಾಶಕೆ ದುಗುಲೇಯ ಹಾರುವಾಗೇ
ಪಾರವೋತಿ ಪರುಮೇಶ್ವರ ಬರೂವಾಗೇ || ೮ ||

ನೋಡಾಕಾಶಕೆ ದುಗುಲೇಯ ಹಾರುವಾಗೇ
ನೋಡ ಕಣ್ಣೀಗೆ ಹೊಡಿಯಾರು ಶಿರುವಾಗೇ || ೯ ||

ನೋಡಿದುವೇ ನಮ್ಮಾಗೆ ತರವಲ್ಲೋ
ನೋಡಿದವು ನಮಗೆ ತರವಲ್ಲೇ || ೧೦ ||

ಗೌಡಾರೊಂದು ಬೊಮ್ಮಣ್ಣನ ಕರೆಬೇಕೂ
ನಾವ್ ಬಟ್ಟಕೊಂದು ಜೋಯಿಸಾನ ಕೇಲುಬೇಕೂ || ೧೧ ||

ನಾವ್ ಕಾಲಾಕೊಂದು ಸೂರಾಡುಲೆ ಬರುವಾದೋ
ನಾ ಶುಗ್ಗೀ ಯೇಲು ಶಿವರಾತುರಿ ದಿನುದಲ್ಲೀ || ೧೨ ||
*****
ಹೇಳಿದವರು: ದೇವುಕುಪ್ಪ ಗೌಡ, ನೆಲ್ಲೆಕೇರಿ ಮೂರೂರು. ದಿ: ೧೫/೧೧/೧೯೭೧

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Tagged:

Leave a Reply

Your email address will not be published. Required fields are marked *

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...