ಮದುವೆಗೆ ಶೃಂಗಾರ ಗೈದ

(ಕೋಲಾಟದ ಪದ)

ತಾನತನ್ನನಾಲೋ ತಂದನ್ನಾನಾ
ತನನ ತಂದನ್ನಾಲೋ ತಂದನ್ನಾನಾ || ಪಲ್ಲವಿ ||

ಯಜಮನ ಗೌಡಾ ರಾಯನಲ್ಲೋ (ಲಂಬೊ ರಾಯ)
ಮಗನಿಗೆ ಮದಿಯ ಮಾಡಬೇಕಂದ || ೧ ||

ಮಗನಿಗೆ ಮದಿಯ ಮಾಡಬೇಕಂದ
ಬಾಜರ ಮನೆಗೆ ಹೋಗವನಲ್ಲೋ
ಬಾಜರ ಮನೆಗೆ ಹೋಗವನಲ್ಲೋ
ಬಾಜರ ಹೆಣ್ಣ ಕೇಳವನಲ್ಲೋ || ೨ ||

ಬಾಜರ ಹೆಣ್ಣ ಕೇಳವಾಗೆ
ಹೆಣ್ಣ ಕೇಳಿ ಭರವಸೆ ಮಾಡಿ
ಹೆಣ್ಣ ಕೇಳಿ ಭರವಸೆ ಮಾಡಿ
ತಿರಗಿ ಮನೆಗೆ ಬರುವಾನಲ್ಲೋ || ೩ ||

ತಿರಗಿ ಮನೆಗೆ ಬಂದೆಕಂಡೇ
ಹೇಳುಲೂರಿಗೆ ಹೇಳಿಕೆ ಮಾಡಿ
ಹೇಳುಲೂರಿಗೆ ಹೇಳಿಕೆ ಮಾಡಿ
ಹೇಳದಿದ್ದ ಊರಿಗೆ ಡಂಗರ ಶರದ || ೪ ||

ದೂರಿನೂರಿಗೆ ಡಂಗರ ಹೋ ಡದಿ
ಕೂಡಿಸೂರಿಗೆ ವಾಲಿ ಬರೆದ
ಕೂಡಿಸೂರಿಗೆ ವಾಲಿ ಬರೆದ
ಬೇಳೆಬೆಲ್ಲ ಶಾಮನ ಕೂಡೇ || ೫ ||

ಬೇಳೆಬೆಲ್ಲ ಶಾಮನ ಕೂಡೇ
ಬಾಕಲ ಮುಂದೆ ತೋರಣಗೈದ
ಬಾಕಲ ಮುಂದೆ ತೋರಣಗೈದ
ಬಾಗಿಲಿಗೆ ಮುತ್ತೆಲ್ಲಾ ಸುರದ || ೬ ||

ಬಾಗಿಲಿಗೆ ಮುತ್ತೆಲ್ಲಾ ಸುರದ
ದೊಣಪೆಗೆ ತೋರಣವ ಗೈದ
ದೊಣಪೆಗೆ ತೋರಣವ ಗೈದ
ಮದಿವಿಗೆ ಶೃಂಗಾರಗೈದ (ಶುಂಗಾರ) || ೭ ||

ಯಜಮಾನಗೌಡ ರಾಜನಲ್ಲೋ
ಬಾವನೆಂಟರ ಸೇರುವಾಗೇ (ಸೇಯ್ಯು)
ಬಂದು ಬಳಗ ಸೆಯ್ಯುವಾಗೆ
ಬಂದು ಬಳಗ ಸೆಯ್ಯುವಾಗೆ || ೮ ||

ಮುತ್ತಿನ ಬಾಸಿಂಗ ಸೂಡೇ
ಯಜಮಾನಗೌಡ ರಾಜನಲ್ಲೋ
ಯಜಮಾನಗೌಡ ರಾಜನಲ್ಲೋ
ಮಗನಿಗೆ ಮದಿವೆಯ ಮಾಡಬೇಕೆಂದೆ
ದಿಬ್ಬಣ ಶೋವನ ಹೋಗುವಾಗೆ || ೯ ||

ದಿಬ್ಬಣ ಶೋವನ ಹೋಗುವಾಗೆ
ವಾದಿ ಪೇಪೆ ಹೊಡವರಲ್ಲೋ
ವಾದಿ ಪೇಪೆ ಹೊಡವರಲ್ಲೋ
ಮದ್ದುಗುಂಡು ಶುಡುವಾರಲ್ಲೋ || ೧೦ ||

ದರಕಿಕ್ರೇದರ ಮುರದಂಗಲ್ಲೋ
ಆಕಾಶಬಾಣ ಬಿಡುವಾಗ
ದರಕಿತ್ರೇದರ ಮುರದಂಗಲ್ಲೋ
ಹಗಲುಬತ್ತಿ ನೋ ಡಿದರೆ || ೧೧ ||

ಹಗಲು ಇರುಳುಲಾದರಲಾಗೇ
ಕೋಣನ ಕೊಂಬ ನೋಡಿದರೆ
ದರಕಿತ್ರೇದರ ಮುರದಂಗಲ್ಲೋ
ಯಜಮಾನಗೌಡ ರಾಜನಲ್ಲೋ || ೧೨ ||

ದಿಬ್ಬಣ ಶೋವನ ಹೋಗುವಾಗೇ
ಪಟ್ಟಣದೊಳಗಿನ ಪಟ್ಟಣಶೆಟ್ಟಿ
ದಂಡು ದಾವುಳಿ ಬರತಿದಂದೇ
ಪಟ್ಣ ಬಿಟ್ಟಾಕಿ ಓಡಿಹೋದ || ೧೩ ||
*****
ಹೇಳಿದವರು: ದೇವು ನಾಗು ಗುನಗ, ಅಡಲೂರು

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕತ್ತೆತ್ತಿದರೆಲ್ಲವೂ ಕಷ್ಟ ಕಾಣುವುದಲ್ಲಾ?
Next post ವಾಕ್ಯದ ಅರ್ಥ ಮತ್ತು ಅದ್ಭುತ

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

cheap jordans|wholesale air max|wholesale jordans|wholesale jewelry|wholesale jerseys