Home / ಕವನ / ಕವಿತೆ / ಹೊಲೆಯನು ಯಾರು?

ಹೊಲೆಯನು ಯಾರು?

ಹೊಲೆಯನಾರೂರ ಹೊರಗಿರುವವನೆ ಗೆಳೆಯ?
ಜಾತಿಯಿಂದಲ್ಲ ಗುಣದಿಂದಹನು ಹೊಲೆಯ ||ಪಲ್ಲ||

ಇಬ್ಬರಾಡುವ ಗುಟ್ಟು ಕದ್ದು ಕೇಳುವ ಹೊಲೆಯ,
ಗಂಡಹೆಂಡಿರ ಬೇರೆ ಮಾಡುವವ ಹೊಲೆಯ|
ಚಾಡಿ ಮಾತಾಡಿ ಭೇದವ ಕಲ್ಪಿಪನೆ ಹೊಲೆಯ,
ಒಣಹರಟೆಯಿಂ ಕಾಲ ಕಳೆಯುನವ ಹೊಲೆಯ ||೧||

ಬಾಯಿಬಾರದ ಜಂತುಗಳ ಕಾಡುವವ ಹೊಲೆಯ,
ಪಾಲ ಕುಡಿದಾಕಳನು ಸದೆವಾತ ಹೊಲೆಯ|
ಮನೆಯ ಬತ್ತಿದ ಪಶುವಿಗುಣಿಸು ಕೊಡದವ ಹೊಲೆಯ,
ಜೀವಿಗಳ ಕೊಂದು ಜೀವಿಸುವವನೆ ಹೊಲೆಯ ||೨||

ಹೆಂಡ ಕುಡಿದರಸುಬೀದಿಯಲಿ ತಿರಿವವ ಹೊಲೆಯ,
ಹಣವಿಟ್ಟು ಜೂಜಾಟವಾಡುವವ ಹೊಲೆಯ|
ತನ್ನೊಡನೆ ಮಡದಿಯಲಿ ತೃಪ್ತಿ ಪಡದವ ಹೊಲೆಯ,
ಪರರ ಧನವನಿತೆಯರ ಬಯಸುವವ ಹೊಲೆಯ ||೩||

ಎಳೆಮಕ್ಕಳಿಗೆ ವಿದ್ಯೆ ಕಲಿಸಿಕೊಡದವ ಹೊಲೆಯ,
ಯುವಕರಿಗೆ ದುರ್‍ಬುದ್ಧಿ ಕಲಿಸುವವ ಹೊಲೆಯ|
ತಾನರಿತ ಜ್ಞಾನ ಪರರಿಗೆ ಪೇಳದವ ಹೊಲೆಯ,
ತನ್ನಿಂದ ಹಿರಿಯರನು ಮನ್ನಿಸದ ಹೊಲೆಯ ||೪||

ಪರರ ಬೇನೆಯಲಿ ಮನಹಿಗ್ಗುವಾತನೆ ಹೊಲೆಯ,
ಪೀಡಿತರನಿನಿಸು ಕನಿಕರಿಸದವ ಹೊಲೆಯ|
ಪರರ ಹೊಗೆಯನು ನೋಡೆ ಕಾದಿರುವವನೆ ಹೊಲೆಯ,
ಪಸಿದವರಿಗೊಂದು ತುತ್ತೆರಚದವ ಹೊಲೆಯ ||೫||

ಹಣವ ಪಡೆದೊತ್ತೆಯನು ಹಿಂದೆ ಕೊಡದವ ಹೊಲೆಯ,
ಹಣವಿದ್ದು ಸಾಲವನು ತೀರಿಸದ ಹೊಲೆಯ|
‘ಆಶೆಮಾತನು ಕೊಟ್ಟು ಭಾಷೆ ತಪ್ಪುವ ಹೊಲೆಯ,’
ಬಗೆಬಗೆದು ಮೋಸವನು ಮಾಡುವವ ಹೊಲೆಯ ||೬||

ಶುದ್ಧ ತಾನೆಂದು ಪರರನು ಮುಟ್ಟದವ ಹೊಲೆಯ,
ಹೊಲೆಯರೆಂದನ್ಯರನು ಕರೆವವನೆ ಹೊಲೆಯ|
ತಾನು ಮೇಲೆಂದುಬ್ಬಿ ಹೀನೈಸುವನ ಹೊಲೆಯ,
ಕೀಳುದಸೆಯವರನುದ್ಧರಿಸದವ ಹೊಲೆಯ ||೭||

ತಾ ಬೋಧಿಸುವ ಧರ್‍ಮವಾಚರಿಸದವ ಹೊಲೆಯ,
ತಾನು ತಾನೆಂದು ಶ್ಲಾಘಿಸುವವನು ಹೊಲೆಯ|
ಪರರ ಹೊಲ್ಲೆಹದ ಕಾವ್ಯವ ಬಿತ್ತರಿಪ ಹೊಲೆಯ,
ಪರರ ಗುಣಗಳಿಗೆ ಕುರುಡಾಗಿಹನೆ ಹೊಲೆಯ ||೮||

ರಾಷ್ಟ್ರದುನ್ನತಿಯ ಸಾಧಿಸೆ ಶ್ರಮಿಸದವ ಹೊಲೆಯ,
ತನ್ನ ರಾಷ್ಟ್ರಕೆ ದ್ರೋಹ ಚಿಂತಿಪನೆ ಹೊಲೆಯ |
ಸ್ಫಾರ್ಥದಿಂ ರಾಷ್ಟ್ರಹಿತವನು ಮರೆವವನು ಹೊಲೆಯ,
ರಾಷ್ಟ್ರಭಕ್ತಿಯ ಲೇಶವಿಲ್ಲದವ ಹೊಲೆಯ ||೯||

ಎಲ್ಲವುಗಳಲ್ಲಿ ಹರಿಯನು ಕಾಣದನ ಹೊಲೆಯ,
ಶ್ರೀಹರಿಯೊಳೆಲ್ಲವನು ಕಾಣದವ ಹೊಲೆಯ|
ಮುಂಗೆಯ್ದ ಪಾಪಕನುತಾಪ ಪಡದವ ಹೊಲೆಯ,
ದೇವಕೀನಂದನನ ನೆನೆಯದವ ಹೊಲೆಯ ||೧೦||
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...