Home / ಕವನ / ಕವಿತೆ / ಜಯ ಭಾರತ!

ಜಯ ಭಾರತ!

– ಪಲ್ಲವಿ –
ಜಯ ಜಯ ಭಾರತ ಭೂಮಾತೇ-ಜಯ
ಜಯ ಮಹಿಮಾಕುಲವಿಖ್ಯಾತೇ !
ಜಯ ಸತ್ಯಸಾರ ಸಂಭೂತೇ….
ಜಯ ಜಯ ಭಾರತ ಭೂಮಾತೇ !


ವರುಣದೇವ ವರವಾಗಿ ನೀಡಿರುವ
ಶರನಿಧಿಗಳು ಘೂರ್ಣಿಸುತ….
ಮೊರೆಯುತಿಹವು ಹಗಲಿರುಳನು ಗಣಿಸದೆ
ನಿನ್ನ ಯಶದ ಸಂಗೀತ !
ಮೂಡಣ ಪಡುವಣ ತೆಂಕಣ ಗಡಿಯೊಳು
ಎಲ್ಲೆಲ್ಲಿಯು ಜಲದೂತ-
ಹೂಡಿಯಿರುವ ಕಾಸಿನ ಕಡುಗೋಂಟೆಯ
ನಿನ್ನ ರಾಜ್ಯ ನಿರ್ಭೀತ !
ಹೆಣೆದಿವೆ ಅಲೆಗಳ ಮಾಲೆ….ರ-
ಕ್ಷಣೆಯನ್ನು ಪಡೆದಿವೆ ವೇಲೆ….ಓ
ಜನನಿ, ನಿನಗಿರದು ಸೋಲೇ !
ಜಯ ಜಯ ಭಾರತ ಭೂಮಾತೇ-ಜಯ-
ಜಯ ಮಹಿಮಾಕುಲವಿಖ್ಯಾತೇ !


ಗಿರಿಯ ರಾಜ ಪರಿವಾರ ಸಹಿತ ನಿಂ-
ತಿರುವ ಬಡಗಲಲ್ಲಿ….
ಹೊರೆಯುತಿರುವ ದಿಗ್‌ನಾಗನಾಗಿ ನಿಡು-
ನೋಟಗಳನು ಚೆಲ್ಲಿ ;
ಹರಿಸುತಿಹನು ನಿರ್ಝರಿಣಿಗಳನು ನೂ-
ರಾರು ರೂಪಗಳಲಿ….
ಸಿರಿಯಿಂದಲಿ ನಿನ್ನರಮನೆ ತುಂಬುವ
ಹೃದಯಾಕೂತಿಯಲಿ.
ಸುರಗಂಗೆಯನಿಳುಹಿರುವ-ಸುಧೆ-
ಯೊರತೆಯನ್ನು ಬಲಿದಿರುವ-ಬಲ-
ದರಿಮೆಯನ್ನು ಬೆಳಸಿರುವ…
ಜಯ ಜಯ ಭಾರತ ಭೂಮಾತೇ-ಜಯ
ಜಯ ಮಹಿಮಾಕುಲ ವಿಖ್ಯಾತೇ !


ಮೊದಲು ನಿನ್ನಂಗಣದಲಿ ಹರಡಿದನು
ರವಿಯು ಕಿರಣ ಜಾಲಾ…
ಮೊದಲ ಬೆಳಕು ಕಂಡವಳು ನೀನೆ ತೋ-
ರಿದೆಯೆ ಲೋಕಕೆಲ್ಲಾ !
ನಿನ್ನ ಸಂತಾನ ಮನು-ಮುನಿ ವಿತಾನ
ಹಾಡಿ ಸಾಮಗಾನಾ….
ಬನ್ನಗಳನ್ನು ನೀಗಿಸಿತು ಬಾಳಿನೊಳೆ
ಮಾಡಿ ಅಮೃತಪಾನಾ !
ಜಗವು ಜಡತಿಯಲ್ಲಿರಲು-ನಿನ-
ಗೊಗೆಯಿತಂದೆ ಮುಂಬಗಲು-ಇದು
ನಿನ್ನ ವುಣ್ಯದೊಂದರಳು….
ಜಯ ಜಯ ಭಾರತ ಭೂಮಾತೇ-ಜಯ
ಜಯ ಮಹಿಮಾಕುಲ ವಿಖ್ಯಾತೇ!


ಧರ್ಮದೈವತದ ಮರ್ಮವರಿದು ಕೈ –
ಗೊಡುತ ಕರೆದು ತಂದೆ….
ಕರ್ಮದಾ ಹುರುಳ ಮೊರ್ಮೆದಲೆ ತಿಳಿದು
ದುರ್ಮತಿಯನೆಲ್ಲ ಕೊಂದೆ.
ನೂರು ನೂರು ತರೆಯೂರಿನಲ್ಲಿ ಮರೆ-
ಗೊಂಡ ಸತ್ಯ ಮುಖವ…
ಏರಿ ಮೇಲೆ, ತರೆಹಾರಿಸುತ ಜಗಕೆ
ತೋರಿದೆ ನಿಜಸುಖವ.
ಕವಿರಾಜರ ನೀ ಕರೆದೆ-ನವ-
ನವ ಕಾವ್ಯದ ಮಳೆಗರೆದೆ-ಭುವಿ-
ಗೆಲ್ಲ ಜೀವಕಳೆಯೆರೆದೆ….
ಜಯ ಜಯ ಭಾರತ ಭೂಮಾತೇ-ಜಯ
ಜಯ ಮಹಿಮಾಕುಲ ವಿಖ್ಯಾತೇ !
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...