Home / ಕವನ / ಕವಿತೆ / ಜಯ ಭಾರತ!

ಜಯ ಭಾರತ!

– ಪಲ್ಲವಿ –
ಜಯ ಜಯ ಭಾರತ ಭೂಮಾತೇ-ಜಯ
ಜಯ ಮಹಿಮಾಕುಲವಿಖ್ಯಾತೇ !
ಜಯ ಸತ್ಯಸಾರ ಸಂಭೂತೇ….
ಜಯ ಜಯ ಭಾರತ ಭೂಮಾತೇ !


ವರುಣದೇವ ವರವಾಗಿ ನೀಡಿರುವ
ಶರನಿಧಿಗಳು ಘೂರ್ಣಿಸುತ….
ಮೊರೆಯುತಿಹವು ಹಗಲಿರುಳನು ಗಣಿಸದೆ
ನಿನ್ನ ಯಶದ ಸಂಗೀತ !
ಮೂಡಣ ಪಡುವಣ ತೆಂಕಣ ಗಡಿಯೊಳು
ಎಲ್ಲೆಲ್ಲಿಯು ಜಲದೂತ-
ಹೂಡಿಯಿರುವ ಕಾಸಿನ ಕಡುಗೋಂಟೆಯ
ನಿನ್ನ ರಾಜ್ಯ ನಿರ್ಭೀತ !
ಹೆಣೆದಿವೆ ಅಲೆಗಳ ಮಾಲೆ….ರ-
ಕ್ಷಣೆಯನ್ನು ಪಡೆದಿವೆ ವೇಲೆ….ಓ
ಜನನಿ, ನಿನಗಿರದು ಸೋಲೇ !
ಜಯ ಜಯ ಭಾರತ ಭೂಮಾತೇ-ಜಯ-
ಜಯ ಮಹಿಮಾಕುಲವಿಖ್ಯಾತೇ !


ಗಿರಿಯ ರಾಜ ಪರಿವಾರ ಸಹಿತ ನಿಂ-
ತಿರುವ ಬಡಗಲಲ್ಲಿ….
ಹೊರೆಯುತಿರುವ ದಿಗ್‌ನಾಗನಾಗಿ ನಿಡು-
ನೋಟಗಳನು ಚೆಲ್ಲಿ ;
ಹರಿಸುತಿಹನು ನಿರ್ಝರಿಣಿಗಳನು ನೂ-
ರಾರು ರೂಪಗಳಲಿ….
ಸಿರಿಯಿಂದಲಿ ನಿನ್ನರಮನೆ ತುಂಬುವ
ಹೃದಯಾಕೂತಿಯಲಿ.
ಸುರಗಂಗೆಯನಿಳುಹಿರುವ-ಸುಧೆ-
ಯೊರತೆಯನ್ನು ಬಲಿದಿರುವ-ಬಲ-
ದರಿಮೆಯನ್ನು ಬೆಳಸಿರುವ…
ಜಯ ಜಯ ಭಾರತ ಭೂಮಾತೇ-ಜಯ
ಜಯ ಮಹಿಮಾಕುಲ ವಿಖ್ಯಾತೇ !


ಮೊದಲು ನಿನ್ನಂಗಣದಲಿ ಹರಡಿದನು
ರವಿಯು ಕಿರಣ ಜಾಲಾ…
ಮೊದಲ ಬೆಳಕು ಕಂಡವಳು ನೀನೆ ತೋ-
ರಿದೆಯೆ ಲೋಕಕೆಲ್ಲಾ !
ನಿನ್ನ ಸಂತಾನ ಮನು-ಮುನಿ ವಿತಾನ
ಹಾಡಿ ಸಾಮಗಾನಾ….
ಬನ್ನಗಳನ್ನು ನೀಗಿಸಿತು ಬಾಳಿನೊಳೆ
ಮಾಡಿ ಅಮೃತಪಾನಾ !
ಜಗವು ಜಡತಿಯಲ್ಲಿರಲು-ನಿನ-
ಗೊಗೆಯಿತಂದೆ ಮುಂಬಗಲು-ಇದು
ನಿನ್ನ ವುಣ್ಯದೊಂದರಳು….
ಜಯ ಜಯ ಭಾರತ ಭೂಮಾತೇ-ಜಯ
ಜಯ ಮಹಿಮಾಕುಲ ವಿಖ್ಯಾತೇ!


ಧರ್ಮದೈವತದ ಮರ್ಮವರಿದು ಕೈ –
ಗೊಡುತ ಕರೆದು ತಂದೆ….
ಕರ್ಮದಾ ಹುರುಳ ಮೊರ್ಮೆದಲೆ ತಿಳಿದು
ದುರ್ಮತಿಯನೆಲ್ಲ ಕೊಂದೆ.
ನೂರು ನೂರು ತರೆಯೂರಿನಲ್ಲಿ ಮರೆ-
ಗೊಂಡ ಸತ್ಯ ಮುಖವ…
ಏರಿ ಮೇಲೆ, ತರೆಹಾರಿಸುತ ಜಗಕೆ
ತೋರಿದೆ ನಿಜಸುಖವ.
ಕವಿರಾಜರ ನೀ ಕರೆದೆ-ನವ-
ನವ ಕಾವ್ಯದ ಮಳೆಗರೆದೆ-ಭುವಿ-
ಗೆಲ್ಲ ಜೀವಕಳೆಯೆರೆದೆ….
ಜಯ ಜಯ ಭಾರತ ಭೂಮಾತೇ-ಜಯ
ಜಯ ಮಹಿಮಾಕುಲ ವಿಖ್ಯಾತೇ !
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...