ಏರಿತು ಗಗನಕೆ ನಮ ಧ್ವಜ!

ಏರಿತು ಗಗನಕೆ ನಮ್ಮ ಧ್ವಜ!
ಭಾರತ ಭಾಗ್ಯ ರವಿಯ ತೇಜ !


ಮರವೆಯಿಂದ ಜನಮನ ಜಾಗರಿಸಿ,
ಪರದಾಸ್ಯದ ಜಾಲದ ಭಯ ಹರಿಸಿ,
ಹುರುಳ ಹುರುಪನೀ ಬಾಳಲಿ ಬೆರಸಿ,
ಏರಿತು ಗಗನಕೆ ನಮ್ಮ ಧ್ವಜ-
ಭಾರತ ಶಕ್ತಿಯ ವೀರಭುಜ !


‘ಎಲ್ಲಿದೆ ಬಂಧನ ಬಲದಾಕ್ರಮಣ ?
ಎಲ್ಲಿದೆ ಶಾಸನರಾಹುಗ್ರಹಣ ?
ಎಲ್ಲವ ನಿಲ್ಲಿಸಿ ಬಿಡುವೆನೀ ಕ್ಷಣ!’
ಸಾರುವುದೀತೆರ ನಮ್ಮ ಧ್ವಜ-
ಭಾರತ ಪೌರುಷ ಸುರಭೂಜ!


ದೇಶ-ದೇಶಗಳ ಜನತೆಗೆ ಅನ್ನ,
ಪಾಶವ ಹಿಂಸೆಯ ತಡೆಯುವ ತ್ರಾಣ,
ತೋಷದಿ ಬಾಳುವ ಸಮತೆಯ ಜ್ಞಾನ
ಬೀರಲು ಏರಿದೆ ನಮ್ಮ ಧ್ವಜ-
ಭಾರತ ರಾಷ್ಟ್ರೋದಯ ತೇಜ!
* * *
ಏರಿತು ಗಗನಕೆ ನಮ್ಮ ಧ್ವಜ-
ಭಾರತ ಭಾಗ್ಯರವಿಯ ತೇಜ !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತೊಣ್ಣೂರಿನ ಸೊಬಗು
Next post ನಮಸ್ತೇ!

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…