Home / ಕವನ / ಕವಿತೆ / ಹಗೆಯ ಗೆಳೆಯ

ಹಗೆಯ ಗೆಳೆಯ


ಜಯವು ಶಾಂತಿಯ ಶರಣ, ಭಾರತ-
ಪಾರತಂತ್ರ್ಯ ನಿವಾರಣಾ!
ಜಯ ಮಹಾತ್ಮಾ, ಜಯವು ಮೋಹನ,
ಪತಿತಜನ ಸಂಜೀವನಾ !


ಬೆಳಕು ಬಿದ್ದಿತು ಭರತಭುವಿಯಲಿ
ಜನ್ಮಿಸಲು ಗುರುಗಾಂಧಿಯು,
ಕಳಕಳನೆ ನಗೆಯೆದ್ದು ನಿಂತಿತು,
ಶಾಂತಿ-ಸೌಖ್ಯದ ನಾಂದಿಯು !


ಭರತಮಾತೆಯ ಪೂರ್ವಪುಣ್ಯವೆ
ಪುರುಷರೂಪವ ತಳೆಯಿತೋ,
ಕರಮಚಂದರ ಮನೆಯೊಳಾಡುತ
ಅರಿವನುಣ್ಣುತ ಬೆಳೆಯಿತೋ !


ಪುಣ್ಯ ಪುರುಷನ ತೆರೆದ ಕಂಗಳು
ಕಂಡವೈ ಜನದವನತಿ ;
ತನ್ನ ತಾಯ್‌ನೆಲ ಅನ್ನಿಗರ ವಶ-
ಅಣ್ಣ-ತಮ್ಮರ ದುರ್‍ಗತಿ !


ಪೊಡವಿ ತಮ್ಮದು, ದುಡಿಮೆ ತಮ್ಮದು,
ಕಡೆಯಿರದ ಸಿರಿ ತಮ್ಮದು….
ಒಡಲಿಗನ್ನವು ಉಡಲು ವಸನವು
ಇರದೆ ಜನ ಬಾಯ್‌ಬಿಡುವುದು !


ನೋಡಿದನು ಗುರುಗಾಂಧಿದೇವನು-
ನಾಡಿಗರ ಪರಿತಾಪವ ;
ಓಡಿಸುವೆ ಪರದಾಸ್ಯಭೂತವ-
ನೆಂದು ಹಿಡಿದನು ಚಾಪವ!


ಕತ್ತಿಯಿಲ್ಲದ ನೆತ್ತರಿಲ್ಲದ
ಸತ್ಯಸಮರದ ನೀತಿಯ-
ಒತ್ತಿಸಾರುತ ಕಿತ್ತಿಸಿದನಿವ
ಹಗೆಯ ಹಿಂಸೆಯ ಭೀತಿಯ!


ಭರತಧರಣಿಯೊಳೆಲ್ಲ ತಿರುಗುತ
ಮುರಲಿಯೂದಿದ ಮೋಹನ;
ಕುರಿಜನರು ನರಹರಿಗಳಾದರು,
ಅರಿತರೋ ತಮ್ಮಾಳ್‌ತನ !


ಹಗೆಯು ಸೋತನು, ಶರಣುಬಂದನು,
ಜಗದ ಗುರು ನೀನೆಂದನು ;
ನಗುತ ಗಾಂಧಿಯು ಹಗೆಯನುಪ್ಪುತ
ಗೆಳೆಯನಾಗಿಯೆ ನಿಂದನು.

೧೦
ಇಂದು ಗಾಂಧಿಯ ಗೆಯ್ಮೆಯಿಂದಲಿ
ಬಂಧಮುಕ್ತಳು ಭಾರತಿ,
ಎಂದೆ ಕಂದರು ಸೇರಿ ಗಾಂಧಿಗೆ
ಬೆಳಗುವೆವು ನಾವಾರತಿ!

೧೧
ಜಯವು ಶಾಂತಿಯ ಶರಣ ಭಾರತ-
ಪಾರತಂತ್ರ್ಯನಿವಾರಣಾ !
ಜಯ ಮಹಾತ್ಮಾ ಜಯವು ಮೋಹನ
ಪತಿತಜನ ಸಂವಾಹನಾ !
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...