Home / ಕವನ / ಕವಿತೆ / ಮಹಾತ್ಮನಿಗೆ

ಮಹಾತ್ಮನಿಗೆ

– ಪಲ್ಲವಿ –

ನಮನವಿದೋ, ನಮನವಿದೋ, ನಮನ ಸಹಜಯೋಗಿ !
ಸಮತೆಗಾಗಿ ಬಾಳ್ವೆಯನೇ ಬೇಳ್ದ ನವವಿರಾಗಿ !


ಕತ್ತಲಲಿಯು ಗುರಿಯ ದಾರಿ ಕಾಂಬ ಕಣ್ಣು ನಿನ್ನ ದೊ,
ತತ್ತ್ವಮಾತೆಯಶ್ರುತ ರವ ಕೇಳ್ವ ಕಿವಿಯು ನಿನ್ನದೊ,
ವಿಗಡ ರಜದೊಳಿದ್ದು ಸೊವಡು ತಗಲದ ಮನ ನಿನ್ನದೊ,
ಜಗದ ಸೌಖ್ಯಕೆಂದೆ ಬೆರಳನೆಣಿಪ ಬುದ್ದಿ ನಿನ್ನದೊ….
ನಮನವಿದೋ, ನವನವಿದೋ ನಮನ ಸಹಜಯೋಗಿ !


ನಿನ್ನ ಉಸಿರದೊಂದೊಂದೂ ಜಡಕೆ ಜೀವವಿತ್ತಿತೊ,
ನಿನ್ನ ಧಮನಿಮಿಡಿತವಹಹ ಚೈತನ್ಯವ ಬಿತ್ತಿತೊ,
ನಿನ್ನ ವಾಣಿ ದಿಗ್‌ದೇಶಕೆ ನನ್ನಿಯ ನೆಲೆ ತಿಳುಹಿತೊ,
ನಿನ್ನ ಗೆಯ್ಮೆ ಸಾವ ಜೀವಜಂಗುಳಿಯನ್ನುಳುಹಿತೊ….
ನಮನವಿದೋ, ನಮನವಿದೋ, ನಮನ ಸಹಜಯೋಗಿ !


ಮೈತ್ರಿಯಿಂದೆ ಶತ್ರುಗಳನ್ನು ಸೋಲಿಸಿರುವ ವೀರ,
ಮೃತ್ಯುವನೂ ಮಿತ್ರನಂತೆ ಸ್ವಾಗತಿಸಿದ ಧೀರ,
ನಿನ್ನ ನೌಕೆ ನಂಬಿದರನು ತಲ್ಪಿಸಿತೈ ತೀರ-
ನೀನು ನಡೆದ ದಾರಿಯದೇ ಸತ್ಯ ಧರ್ಮ ಸಾರ….
ನಮನವಿದೋ, ನಮನವಿದೋ, ನಮನ ಸಹಜಯೋಗಿ !


ಬಲುಮೆ-ಮೋಸಗಳನು ಹಣಿಯೆ ಕಲಹಗೈದೆ ರಾಜ !
ಕಲಿಸಿದೆ ಜೀವನವ ಚೆಲ್ವುಗೊಳಿಪ ಕಲೆಯನೋಜ !
ನಿಲಿಸಿದೆ ನಾಡಿಗರ ಹೃದಯದೊಳಗೆ ದಿವ್ಯ ತೇಜ-
ಸಲಿಪುದೆಂತು ಶ್ರದ್ಧಾಂಜಲಿ ಎಲ್ಲರಂತೆ ಸಾಜ !….
ನಮನವಿದೋ, ನಮನವಿದೋ, ನಮನ ಸಹಜಯೋಗಿ !

* * *
ನಮನವಿದೋ, ನಮನವಿದೋ, ನಮನ ಸಹಜಯೋಗಿ,
ಸಮತೆಗಾಗಿ ಸರ್ವಸ್ವವ ತತ್ವ ಮಹಾತ್ಯಾಗಿ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...