Home / ಕವನ / ಕವಿತೆ / ಮಹಾತ್ಮನಿಗೆ

ಮಹಾತ್ಮನಿಗೆ

– ಪಲ್ಲವಿ –

ನಮನವಿದೋ, ನಮನವಿದೋ, ನಮನ ಸಹಜಯೋಗಿ !
ಸಮತೆಗಾಗಿ ಬಾಳ್ವೆಯನೇ ಬೇಳ್ದ ನವವಿರಾಗಿ !


ಕತ್ತಲಲಿಯು ಗುರಿಯ ದಾರಿ ಕಾಂಬ ಕಣ್ಣು ನಿನ್ನ ದೊ,
ತತ್ತ್ವಮಾತೆಯಶ್ರುತ ರವ ಕೇಳ್ವ ಕಿವಿಯು ನಿನ್ನದೊ,
ವಿಗಡ ರಜದೊಳಿದ್ದು ಸೊವಡು ತಗಲದ ಮನ ನಿನ್ನದೊ,
ಜಗದ ಸೌಖ್ಯಕೆಂದೆ ಬೆರಳನೆಣಿಪ ಬುದ್ದಿ ನಿನ್ನದೊ….
ನಮನವಿದೋ, ನವನವಿದೋ ನಮನ ಸಹಜಯೋಗಿ !


ನಿನ್ನ ಉಸಿರದೊಂದೊಂದೂ ಜಡಕೆ ಜೀವವಿತ್ತಿತೊ,
ನಿನ್ನ ಧಮನಿಮಿಡಿತವಹಹ ಚೈತನ್ಯವ ಬಿತ್ತಿತೊ,
ನಿನ್ನ ವಾಣಿ ದಿಗ್‌ದೇಶಕೆ ನನ್ನಿಯ ನೆಲೆ ತಿಳುಹಿತೊ,
ನಿನ್ನ ಗೆಯ್ಮೆ ಸಾವ ಜೀವಜಂಗುಳಿಯನ್ನುಳುಹಿತೊ….
ನಮನವಿದೋ, ನಮನವಿದೋ, ನಮನ ಸಹಜಯೋಗಿ !


ಮೈತ್ರಿಯಿಂದೆ ಶತ್ರುಗಳನ್ನು ಸೋಲಿಸಿರುವ ವೀರ,
ಮೃತ್ಯುವನೂ ಮಿತ್ರನಂತೆ ಸ್ವಾಗತಿಸಿದ ಧೀರ,
ನಿನ್ನ ನೌಕೆ ನಂಬಿದರನು ತಲ್ಪಿಸಿತೈ ತೀರ-
ನೀನು ನಡೆದ ದಾರಿಯದೇ ಸತ್ಯ ಧರ್ಮ ಸಾರ….
ನಮನವಿದೋ, ನಮನವಿದೋ, ನಮನ ಸಹಜಯೋಗಿ !


ಬಲುಮೆ-ಮೋಸಗಳನು ಹಣಿಯೆ ಕಲಹಗೈದೆ ರಾಜ !
ಕಲಿಸಿದೆ ಜೀವನವ ಚೆಲ್ವುಗೊಳಿಪ ಕಲೆಯನೋಜ !
ನಿಲಿಸಿದೆ ನಾಡಿಗರ ಹೃದಯದೊಳಗೆ ದಿವ್ಯ ತೇಜ-
ಸಲಿಪುದೆಂತು ಶ್ರದ್ಧಾಂಜಲಿ ಎಲ್ಲರಂತೆ ಸಾಜ !….
ನಮನವಿದೋ, ನಮನವಿದೋ, ನಮನ ಸಹಜಯೋಗಿ !

* * *
ನಮನವಿದೋ, ನಮನವಿದೋ, ನಮನ ಸಹಜಯೋಗಿ,
ಸಮತೆಗಾಗಿ ಸರ್ವಸ್ವವ ತತ್ವ ಮಹಾತ್ಯಾಗಿ!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...