Home / ಕವನ / ಕವಿತೆ / ಮಹಾತ್ಮನಿಗೆ

ಮಹಾತ್ಮನಿಗೆ

– ಪಲ್ಲವಿ –

ನಮನವಿದೋ, ನಮನವಿದೋ, ನಮನ ಸಹಜಯೋಗಿ !
ಸಮತೆಗಾಗಿ ಬಾಳ್ವೆಯನೇ ಬೇಳ್ದ ನವವಿರಾಗಿ !


ಕತ್ತಲಲಿಯು ಗುರಿಯ ದಾರಿ ಕಾಂಬ ಕಣ್ಣು ನಿನ್ನ ದೊ,
ತತ್ತ್ವಮಾತೆಯಶ್ರುತ ರವ ಕೇಳ್ವ ಕಿವಿಯು ನಿನ್ನದೊ,
ವಿಗಡ ರಜದೊಳಿದ್ದು ಸೊವಡು ತಗಲದ ಮನ ನಿನ್ನದೊ,
ಜಗದ ಸೌಖ್ಯಕೆಂದೆ ಬೆರಳನೆಣಿಪ ಬುದ್ದಿ ನಿನ್ನದೊ….
ನಮನವಿದೋ, ನವನವಿದೋ ನಮನ ಸಹಜಯೋಗಿ !


ನಿನ್ನ ಉಸಿರದೊಂದೊಂದೂ ಜಡಕೆ ಜೀವವಿತ್ತಿತೊ,
ನಿನ್ನ ಧಮನಿಮಿಡಿತವಹಹ ಚೈತನ್ಯವ ಬಿತ್ತಿತೊ,
ನಿನ್ನ ವಾಣಿ ದಿಗ್‌ದೇಶಕೆ ನನ್ನಿಯ ನೆಲೆ ತಿಳುಹಿತೊ,
ನಿನ್ನ ಗೆಯ್ಮೆ ಸಾವ ಜೀವಜಂಗುಳಿಯನ್ನುಳುಹಿತೊ….
ನಮನವಿದೋ, ನಮನವಿದೋ, ನಮನ ಸಹಜಯೋಗಿ !


ಮೈತ್ರಿಯಿಂದೆ ಶತ್ರುಗಳನ್ನು ಸೋಲಿಸಿರುವ ವೀರ,
ಮೃತ್ಯುವನೂ ಮಿತ್ರನಂತೆ ಸ್ವಾಗತಿಸಿದ ಧೀರ,
ನಿನ್ನ ನೌಕೆ ನಂಬಿದರನು ತಲ್ಪಿಸಿತೈ ತೀರ-
ನೀನು ನಡೆದ ದಾರಿಯದೇ ಸತ್ಯ ಧರ್ಮ ಸಾರ….
ನಮನವಿದೋ, ನಮನವಿದೋ, ನಮನ ಸಹಜಯೋಗಿ !


ಬಲುಮೆ-ಮೋಸಗಳನು ಹಣಿಯೆ ಕಲಹಗೈದೆ ರಾಜ !
ಕಲಿಸಿದೆ ಜೀವನವ ಚೆಲ್ವುಗೊಳಿಪ ಕಲೆಯನೋಜ !
ನಿಲಿಸಿದೆ ನಾಡಿಗರ ಹೃದಯದೊಳಗೆ ದಿವ್ಯ ತೇಜ-
ಸಲಿಪುದೆಂತು ಶ್ರದ್ಧಾಂಜಲಿ ಎಲ್ಲರಂತೆ ಸಾಜ !….
ನಮನವಿದೋ, ನಮನವಿದೋ, ನಮನ ಸಹಜಯೋಗಿ !

* * *
ನಮನವಿದೋ, ನಮನವಿದೋ, ನಮನ ಸಹಜಯೋಗಿ,
ಸಮತೆಗಾಗಿ ಸರ್ವಸ್ವವ ತತ್ವ ಮಹಾತ್ಯಾಗಿ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...