ಮಹಾತ್ಮನಿಗೆ

– ಪಲ್ಲವಿ –

ನಮನವಿದೋ, ನಮನವಿದೋ, ನಮನ ಸಹಜಯೋಗಿ !
ಸಮತೆಗಾಗಿ ಬಾಳ್ವೆಯನೇ ಬೇಳ್ದ ನವವಿರಾಗಿ !


ಕತ್ತಲಲಿಯು ಗುರಿಯ ದಾರಿ ಕಾಂಬ ಕಣ್ಣು ನಿನ್ನ ದೊ,
ತತ್ತ್ವಮಾತೆಯಶ್ರುತ ರವ ಕೇಳ್ವ ಕಿವಿಯು ನಿನ್ನದೊ,
ವಿಗಡ ರಜದೊಳಿದ್ದು ಸೊವಡು ತಗಲದ ಮನ ನಿನ್ನದೊ,
ಜಗದ ಸೌಖ್ಯಕೆಂದೆ ಬೆರಳನೆಣಿಪ ಬುದ್ದಿ ನಿನ್ನದೊ….
ನಮನವಿದೋ, ನವನವಿದೋ ನಮನ ಸಹಜಯೋಗಿ !


ನಿನ್ನ ಉಸಿರದೊಂದೊಂದೂ ಜಡಕೆ ಜೀವವಿತ್ತಿತೊ,
ನಿನ್ನ ಧಮನಿಮಿಡಿತವಹಹ ಚೈತನ್ಯವ ಬಿತ್ತಿತೊ,
ನಿನ್ನ ವಾಣಿ ದಿಗ್‌ದೇಶಕೆ ನನ್ನಿಯ ನೆಲೆ ತಿಳುಹಿತೊ,
ನಿನ್ನ ಗೆಯ್ಮೆ ಸಾವ ಜೀವಜಂಗುಳಿಯನ್ನುಳುಹಿತೊ….
ನಮನವಿದೋ, ನಮನವಿದೋ, ನಮನ ಸಹಜಯೋಗಿ !


ಮೈತ್ರಿಯಿಂದೆ ಶತ್ರುಗಳನ್ನು ಸೋಲಿಸಿರುವ ವೀರ,
ಮೃತ್ಯುವನೂ ಮಿತ್ರನಂತೆ ಸ್ವಾಗತಿಸಿದ ಧೀರ,
ನಿನ್ನ ನೌಕೆ ನಂಬಿದರನು ತಲ್ಪಿಸಿತೈ ತೀರ-
ನೀನು ನಡೆದ ದಾರಿಯದೇ ಸತ್ಯ ಧರ್ಮ ಸಾರ….
ನಮನವಿದೋ, ನಮನವಿದೋ, ನಮನ ಸಹಜಯೋಗಿ !


ಬಲುಮೆ-ಮೋಸಗಳನು ಹಣಿಯೆ ಕಲಹಗೈದೆ ರಾಜ !
ಕಲಿಸಿದೆ ಜೀವನವ ಚೆಲ್ವುಗೊಳಿಪ ಕಲೆಯನೋಜ !
ನಿಲಿಸಿದೆ ನಾಡಿಗರ ಹೃದಯದೊಳಗೆ ದಿವ್ಯ ತೇಜ-
ಸಲಿಪುದೆಂತು ಶ್ರದ್ಧಾಂಜಲಿ ಎಲ್ಲರಂತೆ ಸಾಜ !….
ನಮನವಿದೋ, ನಮನವಿದೋ, ನಮನ ಸಹಜಯೋಗಿ !

* * *
ನಮನವಿದೋ, ನಮನವಿದೋ, ನಮನ ಸಹಜಯೋಗಿ,
ಸಮತೆಗಾಗಿ ಸರ್ವಸ್ವವ ತತ್ವ ಮಹಾತ್ಯಾಗಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇಹಲೋಕದ ಪರಿಮಳ ‘ಮೈಸೂರ ಮಲ್ಲಿಗೆ’
Next post ಗುಬ್ಬಿಮರಿ

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…