Home / ಕವನ / ಕವಿತೆ / ಮಹಾತ್ಮನಿಗೆ

ಮಹಾತ್ಮನಿಗೆ

– ಪಲ್ಲವಿ –

ನಮನವಿದೋ, ನಮನವಿದೋ, ನಮನ ಸಹಜಯೋಗಿ !
ಸಮತೆಗಾಗಿ ಬಾಳ್ವೆಯನೇ ಬೇಳ್ದ ನವವಿರಾಗಿ !


ಕತ್ತಲಲಿಯು ಗುರಿಯ ದಾರಿ ಕಾಂಬ ಕಣ್ಣು ನಿನ್ನ ದೊ,
ತತ್ತ್ವಮಾತೆಯಶ್ರುತ ರವ ಕೇಳ್ವ ಕಿವಿಯು ನಿನ್ನದೊ,
ವಿಗಡ ರಜದೊಳಿದ್ದು ಸೊವಡು ತಗಲದ ಮನ ನಿನ್ನದೊ,
ಜಗದ ಸೌಖ್ಯಕೆಂದೆ ಬೆರಳನೆಣಿಪ ಬುದ್ದಿ ನಿನ್ನದೊ….
ನಮನವಿದೋ, ನವನವಿದೋ ನಮನ ಸಹಜಯೋಗಿ !


ನಿನ್ನ ಉಸಿರದೊಂದೊಂದೂ ಜಡಕೆ ಜೀವವಿತ್ತಿತೊ,
ನಿನ್ನ ಧಮನಿಮಿಡಿತವಹಹ ಚೈತನ್ಯವ ಬಿತ್ತಿತೊ,
ನಿನ್ನ ವಾಣಿ ದಿಗ್‌ದೇಶಕೆ ನನ್ನಿಯ ನೆಲೆ ತಿಳುಹಿತೊ,
ನಿನ್ನ ಗೆಯ್ಮೆ ಸಾವ ಜೀವಜಂಗುಳಿಯನ್ನುಳುಹಿತೊ….
ನಮನವಿದೋ, ನಮನವಿದೋ, ನಮನ ಸಹಜಯೋಗಿ !


ಮೈತ್ರಿಯಿಂದೆ ಶತ್ರುಗಳನ್ನು ಸೋಲಿಸಿರುವ ವೀರ,
ಮೃತ್ಯುವನೂ ಮಿತ್ರನಂತೆ ಸ್ವಾಗತಿಸಿದ ಧೀರ,
ನಿನ್ನ ನೌಕೆ ನಂಬಿದರನು ತಲ್ಪಿಸಿತೈ ತೀರ-
ನೀನು ನಡೆದ ದಾರಿಯದೇ ಸತ್ಯ ಧರ್ಮ ಸಾರ….
ನಮನವಿದೋ, ನಮನವಿದೋ, ನಮನ ಸಹಜಯೋಗಿ !


ಬಲುಮೆ-ಮೋಸಗಳನು ಹಣಿಯೆ ಕಲಹಗೈದೆ ರಾಜ !
ಕಲಿಸಿದೆ ಜೀವನವ ಚೆಲ್ವುಗೊಳಿಪ ಕಲೆಯನೋಜ !
ನಿಲಿಸಿದೆ ನಾಡಿಗರ ಹೃದಯದೊಳಗೆ ದಿವ್ಯ ತೇಜ-
ಸಲಿಪುದೆಂತು ಶ್ರದ್ಧಾಂಜಲಿ ಎಲ್ಲರಂತೆ ಸಾಜ !….
ನಮನವಿದೋ, ನಮನವಿದೋ, ನಮನ ಸಹಜಯೋಗಿ !

* * *
ನಮನವಿದೋ, ನಮನವಿದೋ, ನಮನ ಸಹಜಯೋಗಿ,
ಸಮತೆಗಾಗಿ ಸರ್ವಸ್ವವ ತತ್ವ ಮಹಾತ್ಯಾಗಿ!
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...