ಇದೊ, ಶ್ರಾವಣ ಬಂದಿದೆ!

(ಭಾರತ ಸ್ವಾತಂತ್ರ್ಯೋದಯದ ರೂಪಕ)

ಇದೊ, ಶ್ರಾವಣಬಂದಿದೆ ಭೂವನಕೆ,
ಜನಜೀವನ ಪಾವನ ಗೈಯಲಿಕೆ-
ಇದೊ, ಶ್ರಾವಣ ಬಂದಿದೆ ಭಾರತಕೆ !


ತೆರಳಿತು ವೈಶಾಖದ ಬಿರುಬಿಸಿಲು,
ಸರಿಯಿತು ಮೃಗಜಲದಾ ಹುಸಿಹೊನಲು ;
ಮರೆಯಾಯಿತು ಸುಟ್ಟುರೆಗಳ ಹೊಯಿಲು,
ಬರಿ ಬಾನೊಳು ತುಂಬಿದೆ ನೀರ್‌ ಮುಗಿಲು !
ಬರಗಾಲದ ಬಾಧೆಯ ಹಣಿಯಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ !


ಮುಂಗಾರಿನ ಕಾರ್‍ಮೋಡದ ಕೂಟ….
ಮುನ್ನೀರಲೆಗಳ ತಾಂಡವದಾಟ….
ಕಂಗೆಡಿಸುವ ಕೋಲ್ಮಿಂಚಿನ ಕಾಟ….
ಹಿಂಗಿದುವೋ ಸಿಡಿಲಿನ ಗುಡುಗಾಟ-
ಸಮಯೋಗದ ಸರಿಯನು ಸುರಿಸಲಿಕೆ
ಇದೊ, ಶ್ರಾವಣ ಬಂದಿದೆ ಭೂತಲಕೆ !


ಕಾಡುವ ತಗರಿನ ಕೊಂಬನು ಕಳೆದು….
ಹೋರುವ ಹೋರಿಯ ಹಮ್ಮನು ಹಿಳಿದು….
ಹೆಣ್‌-ಗಂಡನು ಹುರುಪಿಸಿ ಮನಸೆಳೆದು….
ರಣಹೇಡಿ ಏಡಿಯಾ ತಲೆ ತುಳಿದು….
ಮೃಗರಾಜನ ಮೈ ಗುಣ ಮೆರೆಸಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ!


ಬಾನೊಳು ತುಂಬಿದೆ ಜೀವನ ಜಲವು….
ಬುವಿಯೊಳು ತಂಗಿದೆ ಬೆಳಕಿನ ಬಲವು….
‘ಏಳಲಿ, ಏಳಲಿ, ಕೃಷಿಕರ ಕುಲವು’ …
ಗಾಳಿ ಕೂಗುತಿದೆ ಕೇಳದೆ ಉಲಿವು ?
ನಮ್ಮೆಲ್ಲರ ಹಸಿವನ್ನು ತಣಿಸಲಿಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ !


ಬರತ ತೊರೆಗಳದೊ, ಸೂಸಿ ಹರಿದಿವೆ….
ಅರತ ಕೆರೆಗಳಗೊ, ತುಂಬಿ ಮೆರೆದಿವೆ….
ಬರಡು ಬಳ್ಳಿ-ಗಿಡ ಚಿಗಿತು ನಗುತಿವೆ…
ಬರಿಹೊಲ-ನೆಲ ಸಸಿ-ಹಸಿರನುಗುತಿವೆ….
ಚೆಲುವಿಂಗೆ ಗೆಲವ ತಾನೀಯಲಿಕೆ-
ಇದೊ, ಶ್ರಾವಣ ಬಂದಿದೆ ಭೂತಲಕೆ!


‘ಬಂದಿದೆ ಗೆಳೆಯರೆ ನಲ್ಮಳೆಗಾಲ….
‘ತಂದಿದೆ ಬಲ್‌ಬೆಳಸಿಗೆ ಹದಗಾಲ….
‘ಉಳುಮೆ-ಬಿಗೆಗೆ ಇದುವೆ ಸಕಾಲ….
‘ಕಳೆದುಕೊಳ್ಳದಿರಿ, ನಿಮ್ಮಯ ಪಾಲ’ –
ಇಂತೊರೆದು ಜಗವ ಜಾಗರಿಸಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ!


ಶ್ರಾವಣದೀ ಶುಭಯೋಗವೆಂಧದೋ
ದೇವಭಾವ ತಲೆಯೆತ್ತಿ ನಿಂತುದೋ!
ಹಾವು-ಹುಳುವನೂ ದೇವರು ಎನುವ …
ಭಾವನೆಯಲಿ ಜನ ಪೂಜಿಸುತಿಹುದೊ ?
ಆ ದೇವನ ಮಹಿಮೆಯ ಗಾಯನಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ!


ಕನಸಿರದಾ ನಿದ್ದೆ ಯನೋಡಿಸುತ….
ಮನದಾಶೆಗೆ ಕುಸುರನು ಮೂಡಿಸುತ…
ಮನುಕುಲವನೆ ಉಯ್ಯಲೆಯಾಡಿಸುತ…
ಕಣಸಿನ ಕತೆಗಳ ಕೊಂಡಾಡಿಸುತ-
ಸವಿಯೊಲವನು ಹಂಚುತ ಮನಮನಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ!


ಬರಲಿದೆ ಮಾನವಮಿಯ ಬಲರಾಗ
ಕರೆದಿದೆ ಗೆಲವಿನ ದಸರೆಯ ಭೋಗ….
ತರಲಿದೆ ಇದೆ ದೀವಳಿಗೆಯ ಯೋಗ….
ಬೆಳಕಿನ ರಾಜ್ಯವೆ ಇಳೆಯೊಳಗಾಗ..
ಆ ಬೆಳಕಿನ ದಾರಿಯ ತಿಳುಹಲಿಕೆ-
ಇದೊ, ಶ್ರಾವಣ ಬಂದಿದೆ ಭೂತಲಕೆ!
* * *

ಜನಜೀವನ ಪಾವನ ಗೈಯಲಿಕೆ
ಇದೊ, ಬಂದಿದೆ ಶ್ರಾವಣ ಭಾರತಕೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡದಲ್ಲಿ ವಿಮರ್ಶಕರ ಸಂಖ್ಯೆ ಕಡಿಮೆಯಾಗುತ್ತಿದೆಯೇ?
Next post ಗೆಲುವು

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…