ಇದೊ, ಶ್ರಾವಣ ಬಂದಿದೆ!

(ಭಾರತ ಸ್ವಾತಂತ್ರ್ಯೋದಯದ ರೂಪಕ)

ಇದೊ, ಶ್ರಾವಣಬಂದಿದೆ ಭೂವನಕೆ,
ಜನಜೀವನ ಪಾವನ ಗೈಯಲಿಕೆ-
ಇದೊ, ಶ್ರಾವಣ ಬಂದಿದೆ ಭಾರತಕೆ !


ತೆರಳಿತು ವೈಶಾಖದ ಬಿರುಬಿಸಿಲು,
ಸರಿಯಿತು ಮೃಗಜಲದಾ ಹುಸಿಹೊನಲು ;
ಮರೆಯಾಯಿತು ಸುಟ್ಟುರೆಗಳ ಹೊಯಿಲು,
ಬರಿ ಬಾನೊಳು ತುಂಬಿದೆ ನೀರ್‌ ಮುಗಿಲು !
ಬರಗಾಲದ ಬಾಧೆಯ ಹಣಿಯಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ !


ಮುಂಗಾರಿನ ಕಾರ್‍ಮೋಡದ ಕೂಟ….
ಮುನ್ನೀರಲೆಗಳ ತಾಂಡವದಾಟ….
ಕಂಗೆಡಿಸುವ ಕೋಲ್ಮಿಂಚಿನ ಕಾಟ….
ಹಿಂಗಿದುವೋ ಸಿಡಿಲಿನ ಗುಡುಗಾಟ-
ಸಮಯೋಗದ ಸರಿಯನು ಸುರಿಸಲಿಕೆ
ಇದೊ, ಶ್ರಾವಣ ಬಂದಿದೆ ಭೂತಲಕೆ !


ಕಾಡುವ ತಗರಿನ ಕೊಂಬನು ಕಳೆದು….
ಹೋರುವ ಹೋರಿಯ ಹಮ್ಮನು ಹಿಳಿದು….
ಹೆಣ್‌-ಗಂಡನು ಹುರುಪಿಸಿ ಮನಸೆಳೆದು….
ರಣಹೇಡಿ ಏಡಿಯಾ ತಲೆ ತುಳಿದು….
ಮೃಗರಾಜನ ಮೈ ಗುಣ ಮೆರೆಸಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ!


ಬಾನೊಳು ತುಂಬಿದೆ ಜೀವನ ಜಲವು….
ಬುವಿಯೊಳು ತಂಗಿದೆ ಬೆಳಕಿನ ಬಲವು….
‘ಏಳಲಿ, ಏಳಲಿ, ಕೃಷಿಕರ ಕುಲವು’ …
ಗಾಳಿ ಕೂಗುತಿದೆ ಕೇಳದೆ ಉಲಿವು ?
ನಮ್ಮೆಲ್ಲರ ಹಸಿವನ್ನು ತಣಿಸಲಿಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ !


ಬರತ ತೊರೆಗಳದೊ, ಸೂಸಿ ಹರಿದಿವೆ….
ಅರತ ಕೆರೆಗಳಗೊ, ತುಂಬಿ ಮೆರೆದಿವೆ….
ಬರಡು ಬಳ್ಳಿ-ಗಿಡ ಚಿಗಿತು ನಗುತಿವೆ…
ಬರಿಹೊಲ-ನೆಲ ಸಸಿ-ಹಸಿರನುಗುತಿವೆ….
ಚೆಲುವಿಂಗೆ ಗೆಲವ ತಾನೀಯಲಿಕೆ-
ಇದೊ, ಶ್ರಾವಣ ಬಂದಿದೆ ಭೂತಲಕೆ!


‘ಬಂದಿದೆ ಗೆಳೆಯರೆ ನಲ್ಮಳೆಗಾಲ….
‘ತಂದಿದೆ ಬಲ್‌ಬೆಳಸಿಗೆ ಹದಗಾಲ….
‘ಉಳುಮೆ-ಬಿಗೆಗೆ ಇದುವೆ ಸಕಾಲ….
‘ಕಳೆದುಕೊಳ್ಳದಿರಿ, ನಿಮ್ಮಯ ಪಾಲ’ –
ಇಂತೊರೆದು ಜಗವ ಜಾಗರಿಸಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ!


ಶ್ರಾವಣದೀ ಶುಭಯೋಗವೆಂಧದೋ
ದೇವಭಾವ ತಲೆಯೆತ್ತಿ ನಿಂತುದೋ!
ಹಾವು-ಹುಳುವನೂ ದೇವರು ಎನುವ …
ಭಾವನೆಯಲಿ ಜನ ಪೂಜಿಸುತಿಹುದೊ ?
ಆ ದೇವನ ಮಹಿಮೆಯ ಗಾಯನಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ!


ಕನಸಿರದಾ ನಿದ್ದೆ ಯನೋಡಿಸುತ….
ಮನದಾಶೆಗೆ ಕುಸುರನು ಮೂಡಿಸುತ…
ಮನುಕುಲವನೆ ಉಯ್ಯಲೆಯಾಡಿಸುತ…
ಕಣಸಿನ ಕತೆಗಳ ಕೊಂಡಾಡಿಸುತ-
ಸವಿಯೊಲವನು ಹಂಚುತ ಮನಮನಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ!


ಬರಲಿದೆ ಮಾನವಮಿಯ ಬಲರಾಗ
ಕರೆದಿದೆ ಗೆಲವಿನ ದಸರೆಯ ಭೋಗ….
ತರಲಿದೆ ಇದೆ ದೀವಳಿಗೆಯ ಯೋಗ….
ಬೆಳಕಿನ ರಾಜ್ಯವೆ ಇಳೆಯೊಳಗಾಗ..
ಆ ಬೆಳಕಿನ ದಾರಿಯ ತಿಳುಹಲಿಕೆ-
ಇದೊ, ಶ್ರಾವಣ ಬಂದಿದೆ ಭೂತಲಕೆ!
* * *

ಜನಜೀವನ ಪಾವನ ಗೈಯಲಿಕೆ
ಇದೊ, ಬಂದಿದೆ ಶ್ರಾವಣ ಭಾರತಕೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡದಲ್ಲಿ ವಿಮರ್ಶಕರ ಸಂಖ್ಯೆ ಕಡಿಮೆಯಾಗುತ್ತಿದೆಯೇ?
Next post ಗೆಲುವು

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…