Home / ಕವನ / ಕವಿತೆ / ಇದೊ, ಶ್ರಾವಣ ಬಂದಿದೆ!

ಇದೊ, ಶ್ರಾವಣ ಬಂದಿದೆ!

(ಭಾರತ ಸ್ವಾತಂತ್ರ್ಯೋದಯದ ರೂಪಕ)

ಇದೊ, ಶ್ರಾವಣಬಂದಿದೆ ಭೂವನಕೆ,
ಜನಜೀವನ ಪಾವನ ಗೈಯಲಿಕೆ-
ಇದೊ, ಶ್ರಾವಣ ಬಂದಿದೆ ಭಾರತಕೆ !


ತೆರಳಿತು ವೈಶಾಖದ ಬಿರುಬಿಸಿಲು,
ಸರಿಯಿತು ಮೃಗಜಲದಾ ಹುಸಿಹೊನಲು ;
ಮರೆಯಾಯಿತು ಸುಟ್ಟುರೆಗಳ ಹೊಯಿಲು,
ಬರಿ ಬಾನೊಳು ತುಂಬಿದೆ ನೀರ್‌ ಮುಗಿಲು !
ಬರಗಾಲದ ಬಾಧೆಯ ಹಣಿಯಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ !


ಮುಂಗಾರಿನ ಕಾರ್‍ಮೋಡದ ಕೂಟ….
ಮುನ್ನೀರಲೆಗಳ ತಾಂಡವದಾಟ….
ಕಂಗೆಡಿಸುವ ಕೋಲ್ಮಿಂಚಿನ ಕಾಟ….
ಹಿಂಗಿದುವೋ ಸಿಡಿಲಿನ ಗುಡುಗಾಟ-
ಸಮಯೋಗದ ಸರಿಯನು ಸುರಿಸಲಿಕೆ
ಇದೊ, ಶ್ರಾವಣ ಬಂದಿದೆ ಭೂತಲಕೆ !


ಕಾಡುವ ತಗರಿನ ಕೊಂಬನು ಕಳೆದು….
ಹೋರುವ ಹೋರಿಯ ಹಮ್ಮನು ಹಿಳಿದು….
ಹೆಣ್‌-ಗಂಡನು ಹುರುಪಿಸಿ ಮನಸೆಳೆದು….
ರಣಹೇಡಿ ಏಡಿಯಾ ತಲೆ ತುಳಿದು….
ಮೃಗರಾಜನ ಮೈ ಗುಣ ಮೆರೆಸಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ!


ಬಾನೊಳು ತುಂಬಿದೆ ಜೀವನ ಜಲವು….
ಬುವಿಯೊಳು ತಂಗಿದೆ ಬೆಳಕಿನ ಬಲವು….
‘ಏಳಲಿ, ಏಳಲಿ, ಕೃಷಿಕರ ಕುಲವು’ …
ಗಾಳಿ ಕೂಗುತಿದೆ ಕೇಳದೆ ಉಲಿವು ?
ನಮ್ಮೆಲ್ಲರ ಹಸಿವನ್ನು ತಣಿಸಲಿಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ !


ಬರತ ತೊರೆಗಳದೊ, ಸೂಸಿ ಹರಿದಿವೆ….
ಅರತ ಕೆರೆಗಳಗೊ, ತುಂಬಿ ಮೆರೆದಿವೆ….
ಬರಡು ಬಳ್ಳಿ-ಗಿಡ ಚಿಗಿತು ನಗುತಿವೆ…
ಬರಿಹೊಲ-ನೆಲ ಸಸಿ-ಹಸಿರನುಗುತಿವೆ….
ಚೆಲುವಿಂಗೆ ಗೆಲವ ತಾನೀಯಲಿಕೆ-
ಇದೊ, ಶ್ರಾವಣ ಬಂದಿದೆ ಭೂತಲಕೆ!


‘ಬಂದಿದೆ ಗೆಳೆಯರೆ ನಲ್ಮಳೆಗಾಲ….
‘ತಂದಿದೆ ಬಲ್‌ಬೆಳಸಿಗೆ ಹದಗಾಲ….
‘ಉಳುಮೆ-ಬಿಗೆಗೆ ಇದುವೆ ಸಕಾಲ….
‘ಕಳೆದುಕೊಳ್ಳದಿರಿ, ನಿಮ್ಮಯ ಪಾಲ’ –
ಇಂತೊರೆದು ಜಗವ ಜಾಗರಿಸಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ!


ಶ್ರಾವಣದೀ ಶುಭಯೋಗವೆಂಧದೋ
ದೇವಭಾವ ತಲೆಯೆತ್ತಿ ನಿಂತುದೋ!
ಹಾವು-ಹುಳುವನೂ ದೇವರು ಎನುವ …
ಭಾವನೆಯಲಿ ಜನ ಪೂಜಿಸುತಿಹುದೊ ?
ಆ ದೇವನ ಮಹಿಮೆಯ ಗಾಯನಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ!


ಕನಸಿರದಾ ನಿದ್ದೆ ಯನೋಡಿಸುತ….
ಮನದಾಶೆಗೆ ಕುಸುರನು ಮೂಡಿಸುತ…
ಮನುಕುಲವನೆ ಉಯ್ಯಲೆಯಾಡಿಸುತ…
ಕಣಸಿನ ಕತೆಗಳ ಕೊಂಡಾಡಿಸುತ-
ಸವಿಯೊಲವನು ಹಂಚುತ ಮನಮನಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ!


ಬರಲಿದೆ ಮಾನವಮಿಯ ಬಲರಾಗ
ಕರೆದಿದೆ ಗೆಲವಿನ ದಸರೆಯ ಭೋಗ….
ತರಲಿದೆ ಇದೆ ದೀವಳಿಗೆಯ ಯೋಗ….
ಬೆಳಕಿನ ರಾಜ್ಯವೆ ಇಳೆಯೊಳಗಾಗ..
ಆ ಬೆಳಕಿನ ದಾರಿಯ ತಿಳುಹಲಿಕೆ-
ಇದೊ, ಶ್ರಾವಣ ಬಂದಿದೆ ಭೂತಲಕೆ!
* * *

ಜನಜೀವನ ಪಾವನ ಗೈಯಲಿಕೆ
ಇದೊ, ಬಂದಿದೆ ಶ್ರಾವಣ ಭಾರತಕೆ!
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...