Home / ಕವನ / ಕವಿತೆ / ಇದೊ, ಶ್ರಾವಣ ಬಂದಿದೆ!

ಇದೊ, ಶ್ರಾವಣ ಬಂದಿದೆ!

(ಭಾರತ ಸ್ವಾತಂತ್ರ್ಯೋದಯದ ರೂಪಕ)

ಇದೊ, ಶ್ರಾವಣಬಂದಿದೆ ಭೂವನಕೆ,
ಜನಜೀವನ ಪಾವನ ಗೈಯಲಿಕೆ-
ಇದೊ, ಶ್ರಾವಣ ಬಂದಿದೆ ಭಾರತಕೆ !


ತೆರಳಿತು ವೈಶಾಖದ ಬಿರುಬಿಸಿಲು,
ಸರಿಯಿತು ಮೃಗಜಲದಾ ಹುಸಿಹೊನಲು ;
ಮರೆಯಾಯಿತು ಸುಟ್ಟುರೆಗಳ ಹೊಯಿಲು,
ಬರಿ ಬಾನೊಳು ತುಂಬಿದೆ ನೀರ್‌ ಮುಗಿಲು !
ಬರಗಾಲದ ಬಾಧೆಯ ಹಣಿಯಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ !


ಮುಂಗಾರಿನ ಕಾರ್‍ಮೋಡದ ಕೂಟ….
ಮುನ್ನೀರಲೆಗಳ ತಾಂಡವದಾಟ….
ಕಂಗೆಡಿಸುವ ಕೋಲ್ಮಿಂಚಿನ ಕಾಟ….
ಹಿಂಗಿದುವೋ ಸಿಡಿಲಿನ ಗುಡುಗಾಟ-
ಸಮಯೋಗದ ಸರಿಯನು ಸುರಿಸಲಿಕೆ
ಇದೊ, ಶ್ರಾವಣ ಬಂದಿದೆ ಭೂತಲಕೆ !


ಕಾಡುವ ತಗರಿನ ಕೊಂಬನು ಕಳೆದು….
ಹೋರುವ ಹೋರಿಯ ಹಮ್ಮನು ಹಿಳಿದು….
ಹೆಣ್‌-ಗಂಡನು ಹುರುಪಿಸಿ ಮನಸೆಳೆದು….
ರಣಹೇಡಿ ಏಡಿಯಾ ತಲೆ ತುಳಿದು….
ಮೃಗರಾಜನ ಮೈ ಗುಣ ಮೆರೆಸಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ!


ಬಾನೊಳು ತುಂಬಿದೆ ಜೀವನ ಜಲವು….
ಬುವಿಯೊಳು ತಂಗಿದೆ ಬೆಳಕಿನ ಬಲವು….
‘ಏಳಲಿ, ಏಳಲಿ, ಕೃಷಿಕರ ಕುಲವು’ …
ಗಾಳಿ ಕೂಗುತಿದೆ ಕೇಳದೆ ಉಲಿವು ?
ನಮ್ಮೆಲ್ಲರ ಹಸಿವನ್ನು ತಣಿಸಲಿಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ !


ಬರತ ತೊರೆಗಳದೊ, ಸೂಸಿ ಹರಿದಿವೆ….
ಅರತ ಕೆರೆಗಳಗೊ, ತುಂಬಿ ಮೆರೆದಿವೆ….
ಬರಡು ಬಳ್ಳಿ-ಗಿಡ ಚಿಗಿತು ನಗುತಿವೆ…
ಬರಿಹೊಲ-ನೆಲ ಸಸಿ-ಹಸಿರನುಗುತಿವೆ….
ಚೆಲುವಿಂಗೆ ಗೆಲವ ತಾನೀಯಲಿಕೆ-
ಇದೊ, ಶ್ರಾವಣ ಬಂದಿದೆ ಭೂತಲಕೆ!


‘ಬಂದಿದೆ ಗೆಳೆಯರೆ ನಲ್ಮಳೆಗಾಲ….
‘ತಂದಿದೆ ಬಲ್‌ಬೆಳಸಿಗೆ ಹದಗಾಲ….
‘ಉಳುಮೆ-ಬಿಗೆಗೆ ಇದುವೆ ಸಕಾಲ….
‘ಕಳೆದುಕೊಳ್ಳದಿರಿ, ನಿಮ್ಮಯ ಪಾಲ’ –
ಇಂತೊರೆದು ಜಗವ ಜಾಗರಿಸಲಿಕೆ-
ಇದೊ, ಶ್ರಾವಣ ಬಂದಿದೆ ಈ ನೆಲಕೆ!


ಶ್ರಾವಣದೀ ಶುಭಯೋಗವೆಂಧದೋ
ದೇವಭಾವ ತಲೆಯೆತ್ತಿ ನಿಂತುದೋ!
ಹಾವು-ಹುಳುವನೂ ದೇವರು ಎನುವ …
ಭಾವನೆಯಲಿ ಜನ ಪೂಜಿಸುತಿಹುದೊ ?
ಆ ದೇವನ ಮಹಿಮೆಯ ಗಾಯನಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ!


ಕನಸಿರದಾ ನಿದ್ದೆ ಯನೋಡಿಸುತ….
ಮನದಾಶೆಗೆ ಕುಸುರನು ಮೂಡಿಸುತ…
ಮನುಕುಲವನೆ ಉಯ್ಯಲೆಯಾಡಿಸುತ…
ಕಣಸಿನ ಕತೆಗಳ ಕೊಂಡಾಡಿಸುತ-
ಸವಿಯೊಲವನು ಹಂಚುತ ಮನಮನಕೆ-
ಇದೊ, ಶ್ರಾವಣ ಬಂದಿದೆ ಭೂವನಕೆ!


ಬರಲಿದೆ ಮಾನವಮಿಯ ಬಲರಾಗ
ಕರೆದಿದೆ ಗೆಲವಿನ ದಸರೆಯ ಭೋಗ….
ತರಲಿದೆ ಇದೆ ದೀವಳಿಗೆಯ ಯೋಗ….
ಬೆಳಕಿನ ರಾಜ್ಯವೆ ಇಳೆಯೊಳಗಾಗ..
ಆ ಬೆಳಕಿನ ದಾರಿಯ ತಿಳುಹಲಿಕೆ-
ಇದೊ, ಶ್ರಾವಣ ಬಂದಿದೆ ಭೂತಲಕೆ!
* * *

ಜನಜೀವನ ಪಾವನ ಗೈಯಲಿಕೆ
ಇದೊ, ಬಂದಿದೆ ಶ್ರಾವಣ ಭಾರತಕೆ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...